ಚಳ್ಳಕೆರೆ ಜನಧ್ವನಿ ವಾರ್ತೆ ಮಾ.8 ಮಾರ್ಚ್ 18 ರೊಗಳಗೆ ರೈತರ ಖಾತೆ ಬೆಳೆ ವಿಮೆ ಹಣ ತುಂಬದಿದ್ದರೆ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗ ರೈತರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ವಿವಿವಿಧ ರೈತ ಸಂಘಟನೆಗಳು ಮುಖಂಡರು ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು,
ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ ಬೆಳೆ ವಿಮೆ ಯನ್ನು ರೈತರಿಂದ ಕಟ್ಟಿಸಿಕೊಳ್ಳುವಾಗ ದಿನಾಂಕ ಗಡವು ನೀಡುತ್ತಾರೆ.ರೈತರ ಬೆಳೆಗಳು ಅತಿ ವೃಷ್ಠಿ ಅನಾವೃಷ್ಠಿಗೆ ಸಿಲುಗೆ ನಷ್ಟವಾದರೂ ಸಹ ಬೆಳೆ ವಿಮೆ ನೀಡಲು ಇಲ್ಲದ ಸಲ್ಲದ ಕಾರಣಗಳನ್ನು ನೀಡಿ ಮೀನಾ ಮೇಷ ಎಣಿಸುತ್ತಿದ್ದಾರೆ.
ಮಳೆ ಬಾರದೆ ಬೆಳೆಗಳು ನಷ್ಟವಾಗಿರುವ ಬಗ್ಗೆ ಈಗಾಗಲೆ ಅಧಿಕಾರಿಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರದ ಬರ ಅಧ್ಯಯನ ಮಾಡಿದ್ದರೂ ಸಹ ರೈತರು ಕಟ್ಟಿದ ಬೆಳೆಮಿಮೆಯನ್ನು ನೀಡಲು ಮುಂದಾಗುತ್ತಿಲ್ಲ ಇದೇ ತಿಂಗಳ 18 ರೊಳಗೆ ಬೆಳೆ ವಿಮೆ ಹಾಕದಿದ್ದರೆ ತಾಲೂಕು ಕಚೇರಿಗೆ ಬೀಜ ಜಡಿಯಲಾಗುವುದು ಸರಕಾರಕ್ಕೆ ದಮ್ಮಿದ್ದರೆ ನಮ್ಮನ್ನು ಜೈಲಿಗೆ ಕಳಿಸಲಿ ಎಂದು ಸರಕಾರಗಳ ವಿರುದ್ದ ಕಿಡಿ ಕಾರಿದ್ದಾರೆ.
ರೈತ ಮುಖಂಡ ರೆಡ್ಡಿಹಳ್ಳಿ ವೀರಣ ಮಾತನಾಡಿ ಅನ್ನದಾತರಿಗೆ ವರವಾಗಬೇಕಿದ್ದ ಪ್ರಧಾನ ಮಂತ್ರಿ ಫಸಲ್ ಬಿಮಾ (ಪಿಎಂಎಫ್ ಬಿವೈ) ಯೋಜನೆ ರೈತರನ್ನು ಬಿಟ್ಟು ವಿಮಾ ಕಂಪನಿಗಳಿಗೆ ವರದಾನ ವಾಗಗಿವೆ.
ಕಂಪನಿಗಳ ಉದ್ದಾರ ಮಾಡಲು ಜಾಗ, ನೀರು, ಎಲ್ಲಾ ಸೌಲಭ್ಯಗಳನ್ನು ನೀಡಿ ಬೆಂಬಲ ನೀಡುತ್ತವೆ ಆದರೆ ದೇಶಕ್ಕೆ ಅನ್ನ ನೀಡುವ ರೈತರು ಮಳೆ ಬೆಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ಖರೀದಿಸಲು ಹಣ ವಿಲ್ಲದೆ ಸಾಲದ ಸುಳಿಗೆ ಸಿಲುಕಿದ್ದಾರೆ. ರೈತರು ಕಟ್ಟಿದ ಬೆಳೆವಿಮೆ ಹಣ ವಿಲ್ಲ ಹಾಗೂ ಬೆಳೆ ನಷ್ಟದ ಪರಿಹಾರವೂ ನೀಡಲು ಸರಕಾರಗಳು ಮುಂದೆ ಬರುತ್ತಿಲ್ಲ ಇನ್ನೇನು ಲೋಕಸಭಾ ಚುನಾವಣೆ ಸಮೀಪವೇ ಚುನಾವಣೆ ಸಂದರ್ಭದಲ್ಲಿ ಯಾವೊಬ್ಬ ಜನಪ್ರತಿನಿಧಿಯನ್ನು ಗ್ರಾಮದೊಳಗೆ ಪ್ರವೇಶ ಮಾಡಲು ಬಿಡುವುದಿಲ್ಲ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
.ರೈತ ಮುಖಂಡ ಚಿಕ್ಕಣ್ಣ ಸೇರಿದಂತೆ ಹಲವು ರೈತ ಮುಖಂಡರು ರೈತರು ಸುದ್ದಿಗೋಷ್ಠಿಯಲ್ಲಿ ಸರಕಾರಗಳು ವಿರುದ್ದ ಅಕ್ರೋಶ ಹೊರಹಾಕಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments