ಮಾರ್ಚ್ 18 ರೊಗಳಗೆ ರೈತರ ಖಾತೆ ಬೆಳೆ ವಿಮೆ ಹಣ ತುಂಬದಿದ್ದರೆ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗ ರೈತರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

by | 08/03/24 | ಕೃಷಿ, ಬರ ಅಧ್ಯಯನ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.8 ಮಾರ್ಚ್ 18 ರೊಗಳಗೆ ರೈತರ ಖಾತೆ ಬೆಳೆ ವಿಮೆ ಹಣ ತುಂಬದಿದ್ದರೆ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗ ರೈತರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ವಿವಿವಿಧ ರೈತ ಸಂಘಟನೆಗಳು ಮುಖಂಡರು ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು,
ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ ಬೆಳೆ ವಿಮೆ ಯನ್ನು ರೈತರಿಂದ ಕಟ್ಟಿಸಿಕೊಳ್ಳುವಾಗ ದಿನಾಂಕ ಗಡವು ನೀಡುತ್ತಾರೆ.ರೈತರ ಬೆಳೆಗಳು ಅತಿ ವೃಷ್ಠಿ ಅನಾವೃಷ್ಠಿಗೆ ಸಿಲುಗೆ ನಷ್ಟವಾದರೂ ಸಹ ಬೆಳೆ ವಿಮೆ ನೀಡಲು ಇಲ್ಲದ ಸಲ್ಲದ ಕಾರಣಗಳನ್ನು ನೀಡಿ ಮೀನಾ ಮೇಷ ಎಣಿಸುತ್ತಿದ್ದಾರೆ.
ಮಳೆ ಬಾರದೆ ಬೆಳೆಗಳು ನಷ್ಟವಾಗಿರುವ ಬಗ್ಗೆ ಈಗಾಗಲೆ ಅಧಿಕಾರಿಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರದ ಬರ ಅಧ್ಯಯನ ಮಾಡಿದ್ದರೂ ಸಹ ರೈತರು ಕಟ್ಟಿದ ಬೆಳೆಮಿಮೆಯನ್ನು ನೀಡಲು ಮುಂದಾಗುತ್ತಿಲ್ಲ ಇದೇ ತಿಂಗಳ 18 ರೊಳಗೆ ಬೆಳೆ ವಿಮೆ ಹಾಕದಿದ್ದರೆ ತಾಲೂಕು ಕಚೇರಿಗೆ ಬೀಜ ಜಡಿಯಲಾಗುವುದು ಸರಕಾರಕ್ಕೆ ದಮ್ಮಿದ್ದರೆ ನಮ್ಮನ್ನು ಜೈಲಿಗೆ ಕಳಿಸಲಿ ಎಂದು ಸರಕಾರಗಳ ವಿರುದ್ದ ಕಿಡಿ ಕಾರಿದ್ದಾರೆ.
ರೈತ ಮುಖಂಡ ರೆಡ್ಡಿಹಳ್ಳಿ ವೀರಣ ಮಾತನಾಡಿ ಅನ್ನದಾತರಿಗೆ ವರವಾಗಬೇಕಿದ್ದ ಪ್ರಧಾನ ಮಂತ್ರಿ ಫಸಲ್ ಬಿಮಾ (ಪಿಎಂಎಫ್ ಬಿವೈ) ಯೋಜನೆ ರೈತರನ್ನು ಬಿಟ್ಟು ವಿಮಾ ಕಂಪನಿಗಳಿಗೆ ವರದಾನ ವಾಗಗಿವೆ.
ಕಂಪನಿಗಳ ಉದ್ದಾರ ಮಾಡಲು ಜಾಗ, ನೀರು, ಎಲ್ಲಾ ಸೌಲಭ್ಯಗಳನ್ನು ನೀಡಿ ಬೆಂಬಲ ನೀಡುತ್ತವೆ ಆದರೆ ದೇಶಕ್ಕೆ ಅನ್ನ ನೀಡುವ ರೈತರು ಮಳೆ ಬೆಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ಖರೀದಿಸಲು ಹಣ ವಿಲ್ಲದೆ ಸಾಲದ ಸುಳಿಗೆ ಸಿಲುಕಿದ್ದಾರೆ. ರೈತರು ಕಟ್ಟಿದ ಬೆಳೆವಿಮೆ ಹಣ ವಿಲ್ಲ ಹಾಗೂ ಬೆಳೆ ನಷ್ಟದ ಪರಿಹಾರವೂ ನೀಡಲು ಸರಕಾರಗಳು ಮುಂದೆ ಬರುತ್ತಿಲ್ಲ ಇನ್ನೇನು ಲೋಕಸಭಾ ಚುನಾವಣೆ ಸಮೀಪವೇ ಚುನಾವಣೆ ಸಂದರ್ಭದಲ್ಲಿ ಯಾವೊಬ್ಬ ಜನಪ್ರತಿನಿಧಿಯನ್ನು ಗ್ರಾಮದೊಳಗೆ ಪ್ರವೇಶ ಮಾಡಲು ಬಿಡುವುದಿಲ್ಲ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
.ರೈತ ಮುಖಂಡ ಚಿಕ್ಕಣ್ಣ ಸೇರಿದಂತೆ ಹಲವು ರೈತ ಮುಖಂಡರು ರೈತರು ಸುದ್ದಿಗೋಷ್ಠಿಯಲ್ಲಿ ಸರಕಾರಗಳು ವಿರುದ್ದ ಅಕ್ರೋಶ ಹೊರಹಾಕಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page