ಮಾಳಗುಂಡನಹಳ್ಳಿ ಸಮೀಪದ ಟೈಯರ್ ಸುಟ್ಟು ಪೆರಾಸಿಸ್ ಆಯಿಲ್ ತೆಗೆಯುವ ಕಾರ್ಖಾನೆಯನ್ನು ತೆರವುಗೊಳಿಸುವಂತೆ ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮನವಿ

by | 29/05/23 | ಪ್ರತಿಭಟನೆ

ಹಿರಿಯೂರು :
ಗೌಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳಗುಂಡನಹಳ್ಳಿ ಸಮೀಪ ಟೈಯರ್ ಸುಟ್ಟು ಪೆರಾಸಿಸ್ ಆಯಿಲ್ ತೆಗೆಯುವ ಕಾರ್ಖಾನೆಯಿಂದ ಸುತ್ತಮುತ್ತ ಗ್ರಾಮಸ್ಥರಿಗೆ ಮತ್ತು ರೈತರಿಗೆ ಜಾನುವಾರುಗಳಿಗೆ ತುಂಬಾ ಹೊಗೆ ಮತ್ತು ಧೂಳು ಹಾಗೂ ದುರ್ವಾಸನೆಯಿಂದ ರೈತರು ಬೆಳೆಬೆಳೆಯಲು ತೊಂದರೆಯಾಗುವ ಜೊತೆಗೆ ಜನಜಾನುವಾರುಗಳಿಗೆ ಕಾಯಿಲೆಗಳು ಉಂಟಾಗುತ್ತವೆ, ಕೂಡಲೇ ಈ ಕಾರ್ಖಾನೆಯನ್ನು ತೆರವುಗೊಳಿಸಬೇಕು ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.
ಗೌಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳಗುಂಡನಹಳ್ಳಿ ಸಮೀಪ ಟೈಯರ್ ಸುಟ್ಟು ಪೆರಾಸಿಸ್ ಆಯಿಲ್ ತೆಗೆಯುವ ಕಾರ್ಖಾನೆ ತೆರವುಗೊಳಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಖಾನೆಯನ್ನು ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಪಿಡಿಒ ಗಳಿಗೆ ಮನವಿ ಮಾಡಿ ಮಾತನಾಡಿದರು.
ಇದಕ್ಕೆ ಸ್ಪಂದಿಸಿ ದಾಖಲೆಗಳನ್ನು ಪರಿಶೀಲಿಸಿದಾಗ 2018-19 ರಲ್ಲಿ ಅಡಿಕೆ ಪಟ್ಟಿ ತಯಾರಿಸುವ ಉದ್ದೇಶ ಸಲುವಾಗಿ ಪರವಾನಿಗೆ ನೀಡಲಾಗಿದೆ, ತದನಂತರ 2021ರಲ್ಲಿ ಚರಾಲಿಸಿಸ್ ಆಯಿಲ್ ಘಟಕ ಎಂದು ಜನರಲ್ ಲೈಸಸ್ಸ್ ತೆಗೆದುಕೊಂಡಿದ್ದಾರೆ ಆದರೆ ಇದುವರೆಗೂ ಈ ಸ್ವತ್ತು ಮಾಡಿರುವುದಿಲ್ಲ ಎಂದರಲ್ಲದೆ,
ಕಾರ್ಖಾನೆಯ ನಾಮಫಲಕ ಹಾಕಿರುವುದಿಲ್ಲ ಸ್ಥಳೀಯರಿಗೆ ಯಾವುದೇ ಉದ್ಯೋಗ ಕೊಟ್ಟಿರುವುದಿಲ್ಲ ಯಾವ ಕಚ್ಚ ವಸ್ತು ಬಳಸಿ ಆಯಲ್ ತೆಗೆಯುವ ಬಗ್ಗೆ ತಿಳಿಸಿರುವುದಿಲ್ಲ ಮತ್ತು ಕೇವಲ ಐದು ಸಾವಿರ ರೂ ಮಾತ್ರ ಕಂದಾಯ ಕಟ್ಟಿರುತ್ತಾರೆ ನಮ್ಮ ಯಾವುದೇ ಶರತ್ತುಗಳನ್ನು ಪಾಲಿಸದೆ ಉಲ್ಲಂಘನೆ ಮಾಡಿರುತ್ತಾರೆ ಎಂಬುದಾಗಿ ತಿಪ್ಪೇಸ್ವಾಮಿ ಆಪಾದಿಸಿದರು.
ಈ ಕುರಿತು ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಈ ಕೂಡಲೇ ಕಾರ್ಖಾನೆಯನ್ನು ಬೇರೆಡೆ ಸ್ಥಳಾಂತರಿಸಲು ನೋಟಿಸ್ ನೀಡುತ್ತೇವೆ ಎಂಬುದಾಗಿ ಭರವಸೆ ನೀಡಿದರಲ್ಲದೆ, ಇದರ ಬಗ್ಗೆ ಗ್ರಾ.ಪಂ.ಸಭೆಯಲ್ಲಿ ಚರ್ಚಿಸಿ ಪರವಾನಗಿ ಕೊಟ್ಟಿರುವುದನ್ನ ರದ್ದುಪಡಿಸುತ್ತೇವೆ ಎಂಬುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಈ ಪ್ರತಿಭಟನೆಯಲ್ಲಿ ಗೌಡನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಿತ್ತಮ್ಮ, ಕೃಷ್ಣಪ್ಪ, ಉಪಾಧ್ಯಕ್ಷರಾದ ಪುಟ್ಟನರಸಮ್ಮ, ಚಂದ್ರಹಾಸನ, ಲಕ್ಷ್ಮೀದೇವಿ, ಕರಿಯಣ್ಣ, ಮಾಳಗುಂಡನಹಳ್ಳಿ ವಕೀಲರು ನಾಗರಾಜ್, ತಿಮ್ಮಣ್ಣ, ಗಂಗಮ್ಮ, ರಮೇಶ್, ತಿಪ್ಪೇಸ್ವಾಮಿ, ಮಾಜಿಅಧ್ಯಕ್ಷರಾದ ನಾಗಭೂಷಣ್, ಪಿಡಿಒ ತಿಪ್ಪೇಸ್ವಾಮಿ, ಕೆರೆ ಕೊಡಿಹಟ್ಟಿ ಶಿವಣ್ಣ ಶಶಿಕುಮಾರ್, ಮಹೇಶ್ ಕುಂಟಪ್ಪ, ಟಿಟಿ ಚಿತ್ರಲಿಂಗಪ್ಪ, ಕರಿಯಪ್ಪ, ಕೃಷ್ಣಪ್ಪ, ಪುಲ್ಲೇಶ್, ಕಾಂತರಾಜು, ರಾಮು, ಬಾಲ್ ರಾಜ್, ಕಾಟನಾಯಕನಹಳ್ಳಿ, ಚಾಮಣ್ಣ ದೇವೇಂದ್ರಪ್ಪ ದಾಸಪ್ಪ ಬಗ್ಗನಾಡು ಮಹಾಂತೇಶ್ ಶರತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page