ಮಾ. 04 ರಂದು ಫಲಾನುಭವಿಗಳ ಸಮಾವೇಶ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಿ.ಎಂ ಚಾಲನೆ ಊಟ, ಕುಡಿಯುವ ನೀರು, ವಾಹನಗಳ ವ್ಯವಸ್ಥೆ ಸಮರ್ಪಕವಾಗಿರಲಿ- ಡಾ. ವಿ. ರಾಮ್‍ಪ್ರಸಾತ್ ಮನೋಹರ್

by | 01/03/23 | ಸುದ್ದಿ


ಚಿತ್ರದುರ್ಗ ಮಾ. 01 :
ಮುಖ್ಯಮಂತ್ರಿಗಳು ಮಾ. 04 ರಂದು ಚಿತ್ರದುರ್ಗಕ್ಕೆ ಆಗಮಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಸೂಕ್ತ ಊಟದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಫಲಾನುಭವಿಗಳನ್ನು ಸುರಕ್ಷತೆಯಿಂದ ಕರೆತಂದು ವಾಪಸ್ ಕರೆದುಕೊಂಡು ಹೋಗುವವರೆಗಿನ ಎಲ್ಲ ವ್ಯವಸ್ಥೆಯೂ ಸಮರ್ಪಕವಾಗಿರುವಂತೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿ. ರಾಮ್‍ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫಲಾನುಭವಿಗಳ ಸಮಾವೇಶ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಲಕ್ಷಾಂತರ ಜನರು ವಿವಿಧ ಸವಲತ್ತುಗಳನ್ನು ಪಡೆದು ಫಲಾನುಭವಿಗಳಾಗಿದ್ದಾರೆ. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಪರಿಶಿಷ್ಟರು, ಹಿಂದುಳಿದ ವರ್ಗದವರು ಹೀಗೆ ಎಲ್ಲ ವರ್ಗಗಳ ಜನರು ಸರ್ಕಾರದ ವಿವಿಧ ಯೋಜನೆಗಳಡಿ ಒಂದಲ್ಲ ಒಂದು ಸೌಲಭ್ಯ ಪಡೆದುಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಆಯೋಜನೆಗೆ ಸರ್ಕಾರ ಸೂಚನೆ ನೀಡಿದ್ದು, ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮವೇ ಮೊದಲ ಸಮಾವೇಶವಾಗಿದೆ. ಮುಖ್ಯಮಂತ್ರಿಗಳೇ ಖುದ್ದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ, ಸಮಾವೇಶ ಯಶಸ್ವಿಗೊಳಿಸಲು ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಕೃಷಿ, ಆರೋಗ್ಯ, ಶಿಕ್ಷಣ, ಸಹಕಾರ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ತೋಟಗಾರಿಕೆ, ಸ್ಲಂ ಬೋರ್ಡ್ ಸೇರಿದಂತೆ ವಿವಿಧ ಇಲಾಖೆಗಳಿಂದ ಕನಿಷ್ಟ 75 ಸಾವಿರದಿಂದ 01 ಲಕ್ಷದವರೆಗೆ ಫಲಾನುಭವಿಗಳನ್ನು ಸಮಾವೇಶಕ್ಕೆ ಸೇರಿಸಲು ಆಯಾ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಆಯಾ ಇಲಾಖೆ ಅಧಿಕಾರಿಗಳು ಸಮಾವೇಶಕ್ಕೆ ಕರೆತರಲು ವಾಹನದ ವ್ಯವಸ್ಥೆ, ಮಾರ್ಗ, ಪ್ರತಿ 25 ರಿಂದ 30 ಫಲಾನುಭವಿಗಳಿಗೆ ಒಬ್ಬರಂತೆ ಮೇಲ್ವಿಚಾರಕರನ್ನು ನಿಯೋಜಿಸಿ, ಫಲಾನುಭವಿಗಳನ್ನು ಸಮಾವೇಶದ ಸ್ಥಳಕ್ಕೆ ಕರೆತಂದು, ವಾಪಸ್ ಸುರಕ್ಷಿತವಾಗಿ ಹಿಂದಿರುಗುವವರೆಗಿನ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಫಲಾನುಭವಿಗಳ ವಿವರ, ವಾಹನದ ವಿವರ, ಮಾರ್ಗ, ಮೇಲ್ವಿಚಾರಕರ ನಿಯೋಜನೆ ಕುರಿತ ಸಮಗ್ರ ವಿವರವನ್ನು ಒಂದು ದಿನದ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಮುಖವಾಗಿ ಊಟ, ಕುಡಿಯುವ ನೀರು ಹಾಗೂ ವಾಹನದ ವ್ಯವಸ್ಥೆ ಯೋಜಿತ ರೀತಿಯಲ್ಲಿ ಆಗಬೇಕು, ಇದರಲ್ಲಿ ಯಾವುದೇ ಗೊಂದಲ ಇರಬಾರದು. ಫಲಾನುಭವಿಗಳಿಗೆ ಇಲಾಖಾವಾರು ಪ್ರತ್ಯೇಕವಾಗಿ ಬ್ಯಾಡ್ಜಸ್ ರೂಪಿಸಿ ವಿತರಿಸಬೇಕು ಎಂದರು.
ಸಮಾವೇಶ ಆವರಣದಲ್ಲಿ ಫಲಾನುಭವಿಗಳಿಗೆ ನೂಕುನುಗ್ಗಲು ಆಗದ ರೀತಿ ಊಟದ ಸಮರ್ಪಕ ವಿತರಣೆಗೆ ಹೆಚ್ಚಿನ ಕೌಂಟರ್‍ಗಳು ಇರಬೇಕು. ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಕೇಂದ್ರಗಳು ಇರಬೇಕು. ಊಟ, ನೀರಿನ ವಿತರಣೆಗೂ ಮುನ್ನ ಆಹಾರ ಗುಣಮಟ್ಟ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಡೆಸಿ, ದೃಢೀಕರಿಸಬೆಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ, ಪೊಲೀಸ್ ಇಲಾಖೆಯು ಭದ್ರತಾ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು, ಹಾಗೂ ಸಾವಿರಾರು ವಾಹನಗಳು ಬರುವುದರಿಂದ ಪಾರ್ಕಿಂಗ್‍ಗೆ ಸೂಕ್ತ ಸ್ಥಳಾವಕಾಶ ಮಾಡಿಕೊಂಡು, ಮಾರ್ಗಗಳ ನಿಯಂತ್ರಣ ವ್ಯವಸ್ಥೆ ಮಾಡಿಕೊಳ್ಳಬೇಕು. ವೇದಿಕೆಯಲ್ಲಿ ನಿಯಮಾನುಸಾರ ಶಿಷ್ಟಾಚಾರದ ಪಾಲನೆ ಆಗಬೇಕು, ಗಣ್ಯರನ್ನು ಸ್ವಾಗತಿಸುವುದು, ಗೌರವಿಸುವ ಕಾರ್ಯ ಅಚ್ಚುಕಟ್ಟಾಗಿ ಆಗಬೇಕು. ಸಮಾವೇಶಕ್ಕೆ ಶಾಲಾ ಕಾಲೇಜು ಮಕ್ಕಳನ್ನು ಕೂಡ ಕರೆತರಲಾಗುವುದರಿಂದ, ಮಕ್ಕಳ ಸುರಕ್ಷತೆ ಬಹುಮುಖ್ಯ ವಿಷಯವಾಗಿದ್ದು, ಈ ಬಗ್ಗೆ ಡಿಡಿಪಿಐ ಅವರು ಹೆಚ್ಚಿನ ಗಮನ ನೀಡಬೇಕು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧೆಡೆಗಳಿಂದ ವೈವಿಧ್ಯಮಯ ಕಲಾತಂಡಗಳನ್ನು ಕರೆಸಿ, ಸಮಾರಂಭವನ್ನು ಹೆಚ್ಚು ಆಕರ್ಷಿತವಾಗಿಸಬೇಕು. ಸಮಾವೇಶ ಕುರಿತಂತೆ ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ :
ಇದಕ್ಕೂ ಪೂರ್ವದಲ್ಲಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಮಾತನಾಡಿ, ಮಾ. 04 ರಂದು ಫಲಾನುಭವಿಗಳ ಸಮಾವೇಶದ ಜೊತೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಕೂಡ ಮುಖ್ಯಮಂತ್ರಿಗಳು ನೆರವೇರಿಸುವುದಾಗಿ ತಿಳಿಸಿದ್ದಾರೆ. ವಿವಿಧ ಇಲಾಖೆಗಳಡಿ ಸುಮಾರು 2 ಸಾವಿರ ಕೋಟಿ ರೂ. ಗಳ ಅಭಿವೃದ್ಧಿ ಯೋಜನೆಗಳಿಗೆ ಅಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಈ ಕುರಿತಂತೆ ಆಯಾ ಇಲಾಖಾವಾರು ಕಾಮಗಾರಿಗಳು ಹಾಗೂ ಅನುದಾನದ ವಿವರವನ್ನು ಪಡೆದುಕೊಳ್ಳಬೇಕು. 500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು, 47 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಭವನ, 593 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ, ಲೋಕೋಪಯೋಗಿ ಇಲಾಖೆಯಡಿ ಸುಮಾರು 200 ಕೋಟಿ ರೂ. ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಸತಿ ಯೋಜನೆಗಳಡಿ ಮನೆಗಳು, 40 ಕೋಟಿ ರೂ. ವೆಚ್ಚದಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗಳು, ನಗರದಲ್ಲಿ ವಾಲ್ಮೀಕಿ ಭವನ, ಲಿಡ್ಕರ್ ಭವನಗಳ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳಡಿ ಹಲವಾರು ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಅದೇ ದಿನದಂದು ಚಾಲನೆ ನೀಡುವರು. ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page