ಚಳ್ಳಕೆರೆ ಜನಧ್ವನಿ ವಾರ್ತೆ ಮಾ.16. ಮಾರ್ಚ್ 20 ರೊಳಗೆ ಬೆಳೆವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡುತ್ತೇವೆ ಎಂದು ಬೆಳೆ ವಿಮೆ ಕಂಪನಿ ಅಧಿಕಾರಿಗಳು ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ರೈತರು ಮುಖಂಡರು ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ರೈತ ಸಂಘಟನೆಗಳು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಸಿ ಮಾತನಾಡಿದರು.
ಮಾ 18 ರ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಹಾಕದಿದ್ದರೆ ಮಾ 18 ರಂದು ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭನೆ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು.
ಜಿಲ್ಲಾಧಿಕಾರಿ ವೆಂಕಟೇಶ್ ಬೆಳೆವಿಮೆ ಅಧಿಕಾರಿ, ಕೃಷಿ, ತೋಟಗಾರಿಕೆ ಹಾಗೂ ರೈತ ಮುಖಂಡರ ಸಭೆ ಕರೆದು ಸಭೆಯಲ್ಲಿ ರೈತರು ಕಟ್ಟಿದ ಬೆಳೆವಿಮೆಯ್ನು ರೈತರ ಖಾತೆಗೆ ಹಾಕದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರಿಂದ ಬೆಳೆ ವಿಮೆ ಅಧಿಕಾರಿಗಳು ಇನ್ನು ಹತ್ತುದಿನಗೊಳಗೆ ರೈತರ ಖಾತೆಗೆ ಹಾಕಲಾಗುವುದು ಎಂದು ಭರವಸೆ ನೀಡಿದ್ದಾರೆ ಆದ್ದರಿಂದ ಪ್ರತಿಭಟನೆಯನ್ನು ಹಿಂಪಡೆದಿದ್ದು. ಒಂದುವೇಳೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದಿದ್ದರೆ ಚುನಾವಣೆ ನೀನಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಪ್ರತಿಭಟನೆ ಮಾಡಲಾಗುವುದು ಹಾಗೂ ಗ್ರಾಮಗಳಿಗೆ ಚುನಾವಣೆ ಪ್ರಚಾರಕ್ಕೆ ಯಾವುದೆ ಪಕ್ಷದ ಅಭ್ಯರ್ಥಿಗಳಿಗೆ ಬಿಟ್ಟುಕೊಳ್ಳದೆ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೆ.ಪಿ.ಭೂತಯ್ಯ, ರೆಡ್ಡಿಹಳ್ಳಿವೀರಣ್ಣ ಸರಕಾರಕಗಳಿಗೆ ಎಚ್ಚರಿಕೆ ನೀಡಿದ್ದಾರೆ ರೈತ ಮುಂಡರಾದ ತಿಪ್ಪೇಸ್ವಾಮಿ, ನೀಲಕಂಠಪ್ಪ, ಗುರುಮೂರ್ತಿ, ಹನುಮಂತರಾಯ, ಚಂದ್ರಣ್ಣ, ಹಂಪಣ್ನ, ಜೈಯಣ್ಣ, ಇತರರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments