ಮಾ. 6ರಂದು ಶ್ರೀ ಮಡಿವಾಳ ಮಾಚಿದೇವ ಜನಜಾಗೃತಿ ಸಮಾವೇಶ

by | 04/03/24 | ಸುದ್ದಿ


ಚಳ್ಳಕೆರೆ: ತಾಲೂಕಿನ ಮಡಿವಾಳ ಜನಾಂಗವನ್ನು ಜನಜಾಗೃತಿಗೊಳಿಸುವ ದೃಷ್ಟಿಯಿಂದ ಶ್ರೀ ಮಡಿವಾಳ ಮಾಚಿದೇವ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಇದೆ ಬುಧವಾರ ನಗರದ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಬುಡ್ನಹಟ್ಟಿ ಎಂ ನಾಗರಾಜ್ ತಿಳಿಸಿದ್ದಾರೆ‌.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಡಿವಾಳ ಸಮುದಾಯವು ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಇತ್ತೀಚಿನ ದಿನಗಳಲ್ಲಿ ಆಧುನಿಕ ಶೈಲಿಯ ಹೊಡೆತಕ್ಕೆ ಸಿಲುಕಿ ಬಟ್ಟೆ ತೊಳೆಯುವ ಹಾಗೂ ಇಸ್ತ್ರಿ ಮಾಡುವ ಕಾಯಕದ ಕುಲಕಸುಬು ಮಾಯವಾಗುತ್ತಿದ್ದು ಸಮುದಾಯದ ವಿದ್ಯಾವಂತ ಯುವಜನತೆಗೆ ಮೀಸಲಾತಿ ದೊರೆಯದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿ ನಿರುದ್ಯೋಗಿಗಳಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೆ ಗ್ರಾಮೀಣ ಭಾಗದ ಮಡಿವಾಳ ಸಮುದಾಯದ ಜನರು ಉದ್ಯೋಗವನ್ನು ಅರಸಿ ಪರ ಊರುಗಳಿಗೆ ವಲಸೆ ಹೋಗುವಂತಹ ಪರಿಸ್ಥಿತಿ ಬಂದೊದಗಿದೆ ಈ ಎಲ್ಲಾ ದೃಷ್ಟಿಕೋನದಿಂದ ಜನರನ್ನು ಜಾಗೃತಗೊಳಿಸುವುದಲ್ಲದೆ ಸರ್ಕಾರಕ್ಕೆ ಮಡಿವಾಳ ಜನಾಂಗದ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಈ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದ್ದು ಮಾರ್ಚ್6ರ ಬುಧವಾರದಂದು ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ವಾದ್ಯಗಳ ಮೂಲಕ ಬೆಳ್ಳಿ ರಥದಲ್ಲಿ ಮಡಿವಾಳ ಮಾಚಿದೇವ ಮೂರ್ತಿಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಡಿವಾಳ ಮಾಚಿದೇವ ಮಹಾಸಂಸ್ಥಾನ ಮಠದ ಡಾ. ಬಸವ ಮಾಚಿದೇವ ಮಹಾಸ್ವಾಮಿಗಳು ವಹಿಸಲಿದ್ದು ಉದ್ಘಾಟನೆಯನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ ರಘುಮೂರ್ತಿ ನೆರವೇರಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಬುಡ್ನಹಟ್ಟಿ ಎಂ ನಾಗರಾಜ್ ಮಡಿವಾಳ ಮಾಚಿದೇವರ ವಿಶೇಷ ಉಪನ್ಯಾಸವನ್ನು ಜೀವನ ಕೌಶಲ್ಯ ತರಬೇತುದಾರರಾದ ಜೆಸಿ ರಾಜಶೇಖರ್ ನೀಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಮಡಿವಾಳ ಸಮುದಾಯದ ರಾಜ್ಯಾಧ್ಯಕ್ಷ ಸಿ ನಂಜಪ್ಪ ಜಿಲ್ಲಾಧ್ಯಕ್ಷ ರಾಮಪ್ಪ ಆರ್ ರಘು ಕೌಟಿಲ್ಯ ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ತಾಲೂಕು ಮಡಿವಾಳ ಸಮಾಜದ ಗೌರವಾಧ್ಯಕ್ಷ ಎನ್ ಮಂಜುನಾಥ ಅಧ್ಯಕ್ಷರಾದ ಬುಡ್ನಹಟ್ಟಿ ನಾಗರಾಜ್ ಉಪಾಧ್ಯಕ್ಷ ಪುಟ್ಟಲಿಂಗಪ್ಪ ಕಾರ್ಯದರ್ಶಿ ಬಿಸಿ ಕುಶಾಲಪ್ಪ ಸಹ ಕಾರ್ಯದರ್ಶಿ ವಿ ವಿಜಯ ಖಜಾಂಚಿ ಆರ್ಟ್ಸನ್  ಪ್ರಕಾಶ್  ಉಪಸ್ಥಿತರಿರಲ್ಲಿದ್ದಾರೆ‌. ತಾಲೂಕಿನ ಎಲ್ಲಾ ಮಡಿವಾಳ ಕುಲ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಮಡಿವಾಳ ಸಮಾಜದ ಗೌರವಾಧ್ಯಕ್ಷ ಮಂಜುನಾಥ್, ನಗರಂಗೆರೆ ತಿಪ್ಪು , ವಿಜಯಪ್ಪ, ನಾಗರಾಜ್, ಸುರೇಶ್, ರಾಜು,ಉಪಸ್ಥಿತರಿದ್ದರು‌.

Show quoted text

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page