ಚಿತ್ರದುರ್ಗ:
ಜಿಲ್ಲೆಯಲ್ಲಿ ಉತ್ತಮ ಮಳೆ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭವಾಗುತ್ತಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಖಚಿತಪಡಿಸಿಕೊಳ್ಳಬೇಕು. ಇವುಗಳು ಕೊರತೆ ಆಗದಂತೆ ಸಮರ್ಪಕವಾಗಿ ಪೂರೈಕೆ ಮಾಡಬೇಕು ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಹಂಗಾಮು ಪೂರ್ವಸಿದ್ದತೆ ಪರಿಶೀಲನೆ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಕೃಷಿಯಾಧಾರಿತ ಜಿಲ್ಲೆಯಾಗಿದ್ದು, ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಸಿದ್ದತೆ ಕೈಗೊಳ್ಳಬೇಕಿದೆ. 3 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.
ಬಿತ್ತನೆಬೀಜ,ರಸಗೊಬ್ಬರವನ್ನು ನಿಗದಿತ ದರದಲ್ಲಿ ವಿತರಣೆ ಮಾಡಬೇಕು. ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಕೆ, ಹೊಸ ತಳಿ ಹಾಗೂ ಹೆಚ್ಚಿನ ಇಳುವರಿಯ ಬಿತ್ತನೆ ಬೀಜಗಳ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂಬುದಾಗಿ ಅವರು ಮಾಡಿದರು.
ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ಬೀಜ, ಸರಬರಾಜು ಆಗದಂತೆ ಕ್ರಮ ವಹಿಸಬೇಕು.ಬಿತ್ತನೆ ಬೀಜದ ಗುಣಮಟ್ಟವನ್ನು ಪರಿಶೀಲಿಸಬೇಕು.ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು. ರೈತ ಸಂಪರ್ಕ ಕೇಂದ್ರಗಳು ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸರಿಯಾದ ಮಾಹಿತಿ ನೀಡಬೇಕು ಎಂಬುದಾಗಿ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಓಂಕಾರಪ್ಪ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಉಪ ಕೃಷಿ ನಿರ್ದೇಶಕ ಶಿವಕುಮಾರ್, ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್, ಪ್ರವೀಣ್ ಚೌಧರಿ, ತಹಶೀಲ್ದಾರ್ ನಾಗವೇಣಿ, ಇಪ್ಕೊ ಸಂಸ್ಥೆಯ ಜಿಲ್ಲಾ ಕ್ಷೇತ್ರಾಧಿಕಾರಿ ಚಿದಂಬರ ಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments