ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶೇ ನೂರಷ್ಟು ಮತದಾನ ನಡೆಯಲು ಎಲ್ಲರ ಸಹಕಾರ ಻ಗತ್ಯ ತಾಪಂ ಇಒ ಹೊನ್ನಯ್ಯ

by | 15/03/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆಮಾ.15
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶೇ 100 ರಷ್ಟು ಮತದಾನ ನಡೆಯಲು ನಿಷ್ಪಕ್ಷಪಾತ, ಪಾರದರ್ಶಕವಾಗಿ ಮತಗಟ್ಟೆ ಅಧಿಕಾರಿಗಳು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಿ.ಕೆ.ಹೊನ್ನಯ್ಯ ಕಿವಿಮಾತು ಹೇಳಿದರು.
ನಗರದ ತಾಲೂಕು ಪಂಚಾಯತ್ ನೂತನ ಸಭಾಂಗಣಲದಲ್ಲಿ ಚುನಾವಣೆ ಶಾಖೆಯಿಂದ ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರ್ತವ್ಯದ ಜತೆಯಲ್ಲಿ ಚುನಾವಣೆ ಕರ್ತವ್ಯವೂ ಮುಖ್ಯವಾಗಿದ್ದು ಚಾಚು ತಪ್ಪದೆ ಕರ್ತವ್ಯ ನಿರ್ವಹಿಸ ಬೇಕು ನಿಮ್ಮ ನಮ್ಮ ಕರ್ತವ್ಯದಿಂದ ನಿವೃತ್ತಿಯಾದ ಮೇಲೆ ನಮಗೆ ಚುನಾವಣೆ ಕರ್ತವ್ಯಕ್ಕೆ ನೇಮಕ ಮಾಡುವುದಿಲ್ಲ ಚುನಾವಣೆ ಕರ್ತವ್ಯ ನಿಮ್ಮ ಹಕ್ಕು ಎಂದು ಭಾವಿಸಿ ಕೆಲಸ ಮಾಡ ಬೇಕು.
ವಿಧಾನ ಸಭಾ ಚುನಾವಣೆ ಸಂಬಂಧ ಈಗಾಗಲೇ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ತರಬೇತಿ ನಂತರ ಯಾವುದೇ ಲೋಪದೋಷಗಳಿಲ್ಲದಂತೆ, ಅಹಿತಕರ ಘಟನೆಗೆ ಆಸ್ಪದ ಮಾಡಿಕೊಡದಂತೆ ಚುನಾವಣೆ ಆಯೋಗ ನೀಡಿದ ಸಲಹೆ ಸೂಚನೆಗಳನ್ನು ಸ್ವೀಕರಿಸಿ ಚುನಾವಣೆ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು,

ದೂರಿನ ಸುರಿಮಳೆ.
ಮತಗಟ್ಟೆಗಳಿಗೆ ನೇಮಕಗೊಂಡ ಶಿಕ್ಷಕರು ನಾವು ರಜೆ ದಿನಗಳಲ್ಲಿ ಮತದಾರರ ಮನೆ ಮನೆಗೆ ಹೋಗಿ ಎರಡು ತಿಂಗಳ ಕಾಲ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಜೋಡಣೆ ಮಾಡಿ ಮೊಬೈಲ್ ತಂತ್ರಾಂಶದಲ್ಲಿ ಅಳವಡಿಸಲಾಗಿದೆ ಅದಕ್ಕೆ ಗೌರವಧನ ಹಾಗೂ ಇ ಎಲ್ ಕೊಡಬೇಕು ನಮ್ಮ ವೈಯುಕ್ತಿಕ ಇಂಟರ್ ನೆಟ್ ಹಾಕಿಸಿಕೊಂಡು ಕೆಲಸ ಮಾಡಿದ್ದೇವೆ. ಸುಮಾರು 5 ವರ್ಷಗಳಿಂದ ನೀಡುವ 6 ಸಾವಿರ ಗೌರವಧನ ಬದಲಾಗಿ 24 ಸಾವಿರ ರೂಗಳಿಗೆ ಹೆಚ್ಚಿಸ ಬೇಕು. ಮತದಾರ ಪರಿಷ್ಕರಣೆಯಲ್ಲಿ ಸತ್ತವರ ಹೆಸರನ್ನು ಡಿಲೀಟ್ ಮಾಡಲು ನೀಡಿದರೂ ಅವುಗಳು ಡಿಲೀಟ್ ಆಗಿಲ್ಲ ಗುರುತಿನ ಚೀಟಿಗಳು ತಲುಪದೆ ಇರುವುದರಿಂದ ಮತದಾರರ ನಮಗೆ ಕೇಳುತ್ತಾರೆ.
ಅಂಚೆ ಬದಲಾಗಿ ನಮಗೆ ನೀಡಿದರೆ ನಾವು ಅವರಿಗೆ ತಲುಪಿಸುತ್ತೇವೆ. ಚುನಾವಣೆ ಶಾಖೆಯಲ್ಲಿ ನಮಗೆ ಸ್ಪಂದಿಸುತ್ತಿಲ್ಲ 2018 ರಿಂದ 2021 ರವರೆಗೆ ಮತದಾರರ ಪಟ್ಟಿಗೆ ಸೇರಿಸಿದ ಗುರುತಿನ ಚೀಟಿಗಳು ಬಂದಿಲ್ಲ ಸರಕಾರಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಮತದಾರರ ಗುರುತಿನ ಚೀಟಿ ಮುಖ್ಯವಾಗಿರುವುದರಿಂದ ಅವುಗಳೇ ಬಂದಿಲ್ಲ ಎಂದರೆ ನಮಗೆ ಜನರು ಪ್ರಶ್ನೆ ಮಾಡುತ್ತಾರೆ. ಶಿಕ್ಷಕರು ಚುನಾವಣೆ ಕರ್ತವ್ಯ ನಿರ್ವಹಿಸುತ್ತೇವೆ ಆದರೆ ಬಿಎಲ್‌ಒ ಗಳಾಗಿ ಕೆಲಸ ಮಾಡಲು ಕಷ್ಟವಾಗುತ್ತಿದೆ ಇನ್ನು ಮುಂದೆ ಯಾದರು ಸಮಸ್ಯೆಗಳನ್ನು ಬಗೆಹರಿಸುವಂತೆ ಶಿಕ್ಷಕರು ದೂರಿನ ಸುರಿಮಳೆ ಗೈದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ ನಿಮ್ಮ ಸಮಸ್ಯೆಗಳ ಬಗ್ಗೆ ಮೇಲಾಧಿಕಾರಿಗಳ ಗಮನ ಸೆಳೆಯಲಾಗುವುದು ಚುನಾವಣೆ ಸಂದರ್ಭದಲ್ಲಿ ನೂರಕ್ಕೆ ನೂರಷ್ಟು ಮತದಾದನ ನಡೆಯಲು ನಿಮ್ಮೆಲ್ಲರ ಸಹಕಾರ ಅಗತ್ಯ ನೀವು ಮತಗಟ್ಟೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವಮೂಲಕ ಮತದಾನದ ಪ್ರಮಾಣ ಹೆಚ್ಚಿಸುವಂತೆ ತಿಳಿಸಿದರು.
ತಾಪಂ ಸಹಾಯಕ ನಿರ್ದೇಶಕ ಸಂಪತ್‌ಕುಮಾರ್, ಯೋಜನಾಧಿಕಾರಿ ದಿವಾಕರ್, ಚುನಾವಣೆ ಶಾಖೆಯ ಪ್ರಕಾಶ್ , ಓಬಳೇಶ್, ಸಂಪನ್ಮೂಲ ವ್ಯಕ್ತಿಗಳಾದ ಮಾರುತಿ, ಮಂಜುನಾಥ್,ವೆAಕಟೇಶ್,ಶಿವಮೂತಿ, ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page