ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

by | 04/03/23 | ರಾಜಕೀಯ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷ‌ದ ನಾಯಕ ಸಿದ್ದರಾಯ್ಯ ಆಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್‌ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್‌ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್‌ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್‌ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದಿ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ?

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್‌ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ?

8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್‌ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್‌ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ.

ಮರ್‌ ಜಾ ಮೋದಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ ಎಂದು ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್‌ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ? ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತೆ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್‌,ಎಸ್‌,ಎಸ್‌ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರ?

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್‌ ಹಗರಣದ ಬಗ್ಗೆ ಮಾತನಾಡಿ ಸರ್‌ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ.

ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತೆ, ಗುತ್ತಿಗೆದಾರರ ಸುಲಿಗೆ ನಿಲ್ಲುತ್ತೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್‌ ನೀಡಿರುವ ಕಾಮಗಾರಿಗಳನ್ನು ಪುನರ್‌ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page