ಹರ್ತಿಕೋಟೆ.ಮಾರ್ಚ್.10: ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಹಿರಿಯೂರು ತಾಲ್ಲೂಕು ಹರ್ತಿಕೋಟೆಯಲ್ಲಿ ವಾರ್ತಾ ಇಲಾಖೆಯಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.
ಹರ್ತಿಕೋಟೆ ಗ್ರಾಮದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪಿ.ಆರ್. ತಿಪ್ಪೇಸ್ವಾಮಿಯವರ ನವೀಕೃತ ಸ್ಮಾರಕ ಲೋಕಾರ್ಪಣೆ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಈ ವೇಳೆ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮೀಜಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಸ್ಮಾನಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ವೇಣುಗೋಪಾಲ.ಪಿ.ಎಂ. ಚಂದ್ರಶೇಖರ್, ಬೋರೇಶ್, ಪಿ.ಆರ್.ಟಿ ಪ್ರತಿಷ್ಠಾನದ ಪಿಆರ್ಟಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಮಹದೇವ ಶೆಟ್ಟಿ,ಸಂಚಾಲಕ ಹರ್ತಿಕೋಟೆ ರುದ್ರಣ್ಣ ಉಪಸ್ಥಿತರಿದ್ದರು.
0 Comments