ಮೂರು ದಿನಗಳ ಕೃಷಿ ಡ್ರೋನ್ ಪ್ರದರ್ಶನ ಯಶಸ್ವಿ

by | 18/11/23 | ಕೃಷಿ


ಬಳ್ಳಾರಿ,ನ.18
ಇಲ್ಲಿನ ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್-ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಸಂಶೋಧನಾ ಫಾರ್ಮ್‍ನ ಆವರಣದಲ್ಲಿ ನ.16ರಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದ ಪ್ರಭಾರಿ ಮುಖ್ಯಸ್ಥ ಹಾಗೂ ಮಣ್ಣು ಮತ್ತು ಜಲ ಸಂರಕ್ಷಣೆಯ ಪ್ರಧಾನ ವಿಜ್ಞಾನಿ ಡಾ.ಬಿ.ಎಸ್.ನಾಯ್ಕ್ ಅವರು ಡ್ರೋನ್ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಮಹತ್ವದ ಕುರಿತು ರೈತರಿಗೆ ತಿಳಿಸಿದರು.
ಹಿರಿಯ ವಿಜ್ಞಾನಿ (ಅರಣ್ಯ) ಡಾ.ಎಂ.ಎನ್.ರಮೇಶ ಅವರು, ರೈತರಿಗೆ ಕೃಷಿ ಡ್ರೋನ್ ಪ್ರದರ್ಶನ ಕಾರ್ಯಕ್ರಮದ ವಿವರಗಳನ್ನು ನೀಡಿದರು.
ರಾಷ್ಟ್ರೀಯ ಬೀಜ ನಿಗಮದ ಸಹಾಯಕ ನಿರ್ದೇಶಕ ವಿನೋದ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ರೈತರಿಗೆ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಡ್ರೋನ್ ಒಂದು ಎಕರೆ ಪ್ರದೇಶದಲ್ಲಿ ರಾಸಾಯನಿಕಗಳನ್ನು ಸಿಂಪಡಿಸಲು 10 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಮತ್ತು 12 ಲೀಟರ್ ದ್ರಾವಣವನ್ನು ಮಾತ್ರ ಬಳಸುತ್ತದೆ. ಇದು ಬೆಳೆಗಳಿಗೆ ರಾಸಾಯನಿಕಗಳನ್ನು ಸಿಂಪಡಿಸಲು ಅಗತ್ಯವಾದ ಕಾರ್ಮಿಕರನ್ನು ಹೆಚ್ಚು ಉಳಿಸುತ್ತದೆ ಎಂದು ತಂತ್ರಜ್ಞ ಅಭಿμÉೀಕ್ ಕುಮಾರ್ ಡ್ರೋನ್ ಪ್ರಾತ್ಯಕ್ಷಿಕೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ಕೇಂದ್ರೀಕೃತ ರಾಸಾಯನಿಕಗಳನ್ನು ನಿಖರವಾಗಿ ಸಿಂಪಡಿಸಲು ಇದು ಬಹಳ ಸಹಕಾರಿಯಾಗಿದೆ ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದರು. ಅದೇ ರೀತಿಯಾಗಿ ಹೆಚ್ಚಿನ ಪ್ರದೇಶದಲ್ಲಿ ಡ್ರೋನ್ ಮೂಲಕ ಸಿಂಪಡಣೆಯ ಪ್ರಾತ್ಯಕ್ಷಿಕೆ ತೋರಿಸಬೇಕು ಎಂದು ರೈತರು ಒತ್ತಾಯಿಸಿದರು.
ಮೆಣಸಿನಕಾಯಿ ಬೆಳೆಗೆ ಬಾಡಿಗೆಗೆ ಡ್ರೋನ್ ಮೂಲಕ ರಾಸಾಯನಿಕಗಳನ್ನು ಸಿಂಪಡಿಸಲು ಪ್ರೇರೇಪಿತರಾಗಿದ್ದು, ಭಾಗವಹಿಸಿದ ಅನೇಕ ರೈತರು ಡ್ರೋನ್‍ನ ಬೆಲೆಯ ಮಾಹಿತಿ ಕೇಳಿದರು ಮತ್ತು ಅವರಲ್ಲಿ ಕೆಲವರು ಮುಂಬರುವ ಬೆಳೆ ಋತುವಿನಲ್ಲಿ ಡ್ರೋನ್ ಅನ್ನು ಖರೀದಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.
ಲಕ್ಷ್ಮೀನಗರ ಕ್ಯಾಂಪ್, ಕೋಳೂರು ಮತ್ತು ಸೋಮಸಮುದ್ರ ಗ್ರಾಮಗಳ ಸುಮಾರು 60ಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಮಾರು 20 ಎಕರೆ ಮೆಣಸಿನಕಾಯಿ ಬೆಳೆಗೆ ಡ್ರೋನ್ ಮೂಲಕ ಸಸ್ಯ ಸಂರಕ್ಷಣಾ ಸಿಂಪಡಿಸಿ ಪ್ರಾತ್ಯಕ್ಷಿಕೆ ತೋರಿಸಲಾಯಿತು.
ಈ ಸಂದರ್ಭದಲ್ಲಿ ಉಸ್ತುವಾರಿ ಫಾರ್ಮ್ ಅಧೀಕ್ಷಕರು ಹಾಗೂ ತಂತ್ರಜ್ಞ ಗೌರವ್ ಭಾಟಿ, ತಂತ್ರಜ್ಞ ವೃಷಬೇಂದ್ರಪ್ಪ ಸೇರಿದಂತೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಗೂ ಮತ್ತಿತರರು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page