ಮೂರು ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಿರುವ ದೂರು ನೀಡಿ ತಿಂಗಳು ಕಳೆದರೂ ಪೋಲಿಸ್ ಇಲಾಖೆ ಯಾವುದೇ ಕ್ರಮಕೈಕೊಂಡಿಲ್ಲ ಪೋಷಕರ ಆರೋಪ-ಸಂತೆಬೆನ್ನೂರು..

by | 23/02/24 | ಕ್ರೈಂ


ಸಂತೆಬೆನ್ನೂರು ಫೆ.24. ಅಂಗನವಾಡಿ ಕೇಂದ್ರದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಿದ ಕಾರ್ಯಕರ್ತೆ ಹಾಗೂ ಸಹಾಯಕಿಮೇಲೆ ಸಂತೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಹೌದು ಇದು ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಹೋಬಳಿಯ ಕಾಕನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಅರಳಿಕಟ್ಟೆ ಗ್ರಾಮದ ಲಾವಣ್ಯ ಮೂರು ವರ್ಷದ ಮಗುವನ್ನು ದಿನಾಂಕ 16.01 2024 ರಂದು ಮದ್ಯಾಹ್ನ 1. ಗಂಟೆ ಸಮಯದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅನ್ನಪೂರ್ಣಮ್ಮ. ಸಹಾಯಕಿ ಸೌಮ್ಮ ಇಬ್ಬರು ಅರಳಿಕಟ್ಟೆ ಗ್ರಾಮದವರಾಗಿದ್ದು.ಅಂಗನವಾಡಿ ಕಾರ್ಯಕರ್ತೆ ಮತ್ತು
ಸಹಾಯಕಿ ನನ್ನ ಮಗುವನ್ನು ನೆಲದ ಮೇಲೆ ಎಳೆದಾಡಿ, ಕೋಲಿನಿಂದ ನನ್ನ ಮಗಳ ಬೆನ್ನಿಗೆ, ಕಾಲಿಗೆ ಥಳಿಸಿರುತ್ತಾರೆ. ಇವರ ಹಲೆ, ಯಿಂದ ನನ್ನ ಮಗಳ
ಬೆನ್ನಿನ ಮೇಲೆ ಕಾಲಿನ ಮೇಲೆ ಬಾಸುಂಡೆಗಳು ಬಿದ್ದಿರುತ್ತವೆ, ಮೊಣಕಾಲಿನ ಮೇಲೆ ತರಚಿದ ಗಾಯಗಳಾಗಿರುತ್ತವೆ. ಇವರ ಹಲೆಯಿಂದ ನನ್ನ ಮಗಳ
ತುಂಬಾ ಹೆದರಿಕೊಂಡು ಅಂಗನವಾಡಿ ಕೇಂದ್ರದಿಂದ ಓಡಿ ಮನೆಗೆ ಬಂದಿರುತ್ತದೆ, ನಂತರ ನಾನು ಅಂಗನವಾಡಿ ಕೇಂದ್ರಕ್ಕೆ ಹೋಗಿ ನನ್ನ ಮಗಳು ಏನು ತಪ್ಪು ಮಾಡಿದೆ ಒಡೆಯಲು ಕಾರಣ ಹೇಳಿ ಎಂದು ಕೇಳಿದರೆ ಸರಿಯಾದ ಉತ್ತರ ನೀಡದೆ ನಾವು ಒಡದೇ ಇಲ್ಲ ಎಂದು ಹೇಳುತ್ತಾರೆ. ನನ್ನ ಮಗಳನ್ನುಒಡೆದಿರುವ ಬಗ್ಗೆ ಸಂತೆಬೆನ್ನೂರು ಠಾಣೆಯಲ್ಲಿ ನಾವು ಬೋವಿ ಜನಾಂಗವಾಗಿರುವುದರಿಂದ ನನ್ನ‌ಮಗಳನ್ನು ಜಾತಿ ನಿಂದನೆ ಮಾಡಿ ಒಡೆದಿರುವ ಬಗ್ಗೆ ದೂರು ದಾಖಲಿಸಿ ತಿಂಗಳು ಕಳೆದರೂ ಯಾವುದೇ ಕ್ರಮಕೈಕೊಂಡಿಲ್ಲ ಸಂತೆಬೆನ್ನೂರು ಠಾಣೆಯಲ್ಲಿ ವಿಚಾರಿಸಿದರೆ. ಚನ್ನಗಿರಿಗೆ ಹೋಗಿ ಎನ್ನುತ್ತಾರೆ .ಚನ್ನಗಿರಿ ಠಾಣೆಯಲ್ಲಿ ವಿಚಾರಿಸಿದರೆ ಯಾವುದೇ ಉತ್ತರ ನೀಡುತ್ತಿಲ್ಲ ನನ್ನ ಮಗಳ ಮೇಲೆ ಹಲ್ಲೆ ಮಾಡಿದವರು ಊರಲ್ಲಿ ಓಡಾಡಿಕೊಂಡು ಹರಾಮಾಗಿದ್ದಾರೆ. ನನ್ನ ಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸುತ್ತೇವೆ ಎಂದು ಮಗುವಿನ ತಾಯಿ ಪೂಜಾ. ತಂದೆ ಮಂಜುನಾಥ್ ಜನಧ್ವನಿ ಮೀಡಿಯಾದೊಂದಿಗೆ ಮಾತನಾಡಿ ಅಂಗನವಾಡಿ ಕೇಂದ್ರಕ್ಕೆ ಹೋಗುವ ನಮ್ಮ ಮಕ್ಕಳನ್ನು ಕೀಳುಮಟ್ಟದಲ್ಲಿ
ನೋಡುವುದು ಬೇದಬಾವ ಮಾಡುವುದು ಮತ್ತು ಬೇರೆ ಮಕ್ಕಳಂತೆ ನಮ್ಮ ಬೋವಿ ಜನಾಂಗದ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಆರೈಕೆ ಮಾಡದೇ ನಿರ್ಲಕ್ಷ
ತೋರುತ್ತಾರೆ, ತಾವುಗಳು ಮೇಲ್ಕಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮತ್ತೆ ಇಂತಹ ಪ್ರಕರಣಗಳು ಮರುಕಳಿಸಂತೆ ಕಾನೂನು ಕ್ರಮಜರುಗಿಸುವಂತೆ ಒತ್ತಾಯಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page