ಮೊಬೈಲ್ ಫೋನ್ ಪತ್ತೆಗೆ ವೆಬ್‍ಸೈಟ್

by | 02/03/23 | ಸುದ್ದಿ

ಚಿತ್ರದುರ್ಗ ಮಾ02:
ಕಳ್ಳತನ ಹಾಗೂ ಕಳೆದುಹೋದ ಮೊಬೈಲ್ ಪತ್ತೆಗೆ ನೆರವಾಗುವ ಸೆಂಟ್ರಲ್ ಏಕ್ಯುಪ್‍ಮೆಂಟ್ ಐಡೆಂಟಿಟಿ ರಿಜಿಸ್ಟರ್ (Central Equipment Identity Register) ವೈಬ್‍ಸೈಟ್‍ನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ವೆಬ್‍ಸೈಟ್ ನೆರವಿನಿಂದ ಮೊಬೈಲ್ ಮಾಲೀಕರು ಕಳೆದು ಹೋದ ಮೊಬೈಲ್‍ಪೋನ್‍ಗಳನ್ನು ಬ್ಲಾಕ್ ಮಾಡಬಹುದು.
ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮದ ರಜನಿಕಾಂತ್ ಅವರು ಕಳೆದು ಹೋದ ತಮ್ಮ ಮೊಬೈಲ್ ಫೋನ್ ವಿವರಗಳನ್ನು ಸಿಇಐಆರ್ ಪೋರ್ಟಲ್‍ನಲ್ಲಿ ನಮೂದಿಸಿದ್ದರು. ರಜನಿಕಾಂತ್ ಅವರ ಮೊಬೈಲ್ ಫೋನ್ ಬೇರೆಯವರು ಉಪಯೋಗಿಸುತ್ತಿರುವುದನ್ನು ವೆಬ್ ಸೈಟ್ ಮೂಲಕ ಐಮಂಗಲ ಪೊಲೀಸ್ ಠಾಣೆಯ ಪಿಎಸ್‍ಐ ಸುರೇಶ್ ಹಾಗೂ ಸಿಬ್ಬಂದಿ ಮೋಹನ್ ಪತ್ತೆಹಚ್ಚಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಪತ್ತೆಯಾದ ಮೊಬೈಲ್ ಪೋನ್‍ನ್ನು ಮಾಲೀಕ ರಜನಿಕಾಂತ್ ಅವರಿಗೆ ಗುರುವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಸ್ತಾಂತರಿಸಿದರು. ಮೊಬೈಲ್ ಕಳೆದುಕೊಂಡವರು ಚಿತ್ರದುರ್ಗ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಇದುವರಗೆ ಸಿಇಐಆರ್ ಪೋರ್ಟಲ್‍ನಲ್ಲಿ 17 ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರು ಮೊಬೈಲ್ ಕಳ್ಳತನ ಅಥವಾ ಕಳೆದುಹೋದ ಸಂದರ್ಭದಲ್ಲಿ https://ww.ceir.gov.in/ವೆಬ್‍ಸೈಟ್‍ನ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಎಆರ್ ಡಿವೈಎಸ್‍ಪಿ ಎಸ್.ಎಸ್.ಗಣೇಶ, ಎಎಸ್‍ಐ (ಗಣಕಯಂತ್ರ) ರಾಘವೇಂದ್ರ, ಪಿಎಸ್‍ಐ ಗುಡ್ಡಪ್ಪ, ಕಂಪ್ಯೂಟರ್ ಅಪರೇಟರ್ ನಟರಾಜ್ ಸೇರಿದಂತೆ ಮತ್ತಿತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page