ಮೊಳಕಾಲ್ಮುರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಯಪಾಲಯ್ಯ

by | 04/03/23 | ರಾಜಕೀಯ

ನಾಯಕನಹಟ್ಟಿ : ಭಾರತೀಯ ಜನತಾ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದ ಸಾಮಾನ್ಯ ಕಾರ್ಯಕರ್ತನಾದ ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ ಹೇಳಿದರು.
ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಶುಕ್ರವಾರ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಭೇಟಿನೀಡಿ ನಂತರ ಅವರು ಮಾತನಾಡಿದರು.
ಭಾರತೀಯ ಜನತಾಪಕ್ಷವು ಸಾಮಾನ್ಯ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದ ಬೇರುಮಟ್ಟದಲ್ಲಿ ದುಡಿಯುವ ಕಾರ್ಯಕರ್ತರನ್ನು ಪಕ್ಷವು ಗುರ್ತಿಸಿ ಅವರನ್ನು ಬೆಳೆಸುತ್ತದೆ. ಅದಕ್ಕೆ ಉತ್ತಮವಾದ ನಿದರ್ಶನವೇ ಪ್ರಧಾನಿ ನರೇಂದ್ರ ಮೋದಿಯವರು. ಹಾಗೇ ಕಳೆದ ೨೦ವರ್ಷಗಳಿಂದ ಮೊಳಕಾಲ್ಮುರು ಚಳ್ಳಕೆರೆ ಚಿತ್ರದುರ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಹಗಲಿರುಳು ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಅದರ ಫಲವಾಗಿ ಜಿಲ್ಲಾ ಪ್ರಧಾನಕಾರ್ಯದರ್ಶಿ, ರಾಜ್ಯ ಪರಿಶಿಷ್ಟವರ್ಗಗಳ ಆಯೋಗದ ಸದಸ್ಯನಾಗಿ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಉಸ್ತುವಾರಿಯಾಗಿ ಕರ್ತವ್ಯನಿರ್ವಹಿಸಿದ್ದೇನೆ. ಹಾಗೇ ಕಳೆದ ೧೦ವರ್ಷದಿಂದ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಪಕ್ಷವು ನನ್ನ ಸೇವೆಯನ್ನು ಪರಿಗಣನೆಗೆ ತೆಗೆದುಕೊಳ್ಳತ್ತದೆ ಎಂಬ ವಿಶ್ವಾಸ ನನಗಿದೆ.
ಈಚೆಗೆ ಮಾಜಿ ಶಾಸಕರಾದ ಎಸ್.ತಿಪ್ಪೇಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂಸತದ ಸಂಗತಿಯಾಗಿದೆ. ಅವರು ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಸಂಘಟನಾ ದೃಷ್ಟಿಯಿಂದ ಆನೆಬಲ ಬಂತಾಗಿದೆ. ಆದರೆ ಪಕ್ಷವಾಗಲಿ, ನಮ್ಮ ವರಿಷ್ಠರಾಗಲಿ ಇದುವರೆಗೂ ಮೊಳಕಾಳ್ಮುರು ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ನೀಡಲಾಗುತ್ತದೆ ಎಂದು ಎಲ್ಲಿಯೂ ಗೋಷಿಸಿಲ್ಲ. ಹಾಗಾಗಿ ಇಂದಿನಿAದ ನಾನು ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡು ಚುನಾವಣೆಗಾಗಿ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಪಡೆಯನ್ನು ಸಿದ್ಧಗೊಳಿಸುವ ಕಾರ್ಯವನ್ನು ಮಾಡುತ್ತೇನೆ. ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮ ಬಿಜೆಪಿ ಪಕ್ಷವು ೧೫೦ಸ್ಥಾನಗಳನ್ನು ಪಡೆದು ಅಧಿಕಾರಿಕ್ಕೆ ಬರಲಿದ್ದು, ಅದರಲ್ಲಿ ಮೊಳಕಾಲ್ಮುರು ಕ್ಷೇತ್ರವೂ ಒಂದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇವೇಳೆ ಬಿಜೆಪಿ ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ ಪಿ.ಶಿವಣ್ಣ, ಮುಖಂಡರಾದ ಸಿ.ಬಿ.ಮೋಹನ್, ಗೋವಿಂದ, ಕಾಲುವೆಹಳ್ಳಿ ಶ್ರೀನಿವಾಸ್, ಗಾದ್ರಿಪಾಲಯ್ಯ, ಶ್ರೀಪತಿ, ಮಹೇಶ್, ಓಬಣ್ಣ, ಪ್ರಹ್ಲಾದ್, ಕೆ.ಟಿ.ಸ್ವಾಮಿ, ತಿಪ್ಪೇಸ್ವಾಮಿ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page