ನಾಯಕನಹಟ್ಟಿ : ಭಾರತೀಯ ಜನತಾ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದ ಸಾಮಾನ್ಯ ಕಾರ್ಯಕರ್ತನಾದ ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ ಹೇಳಿದರು.
ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಶುಕ್ರವಾರ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಭೇಟಿನೀಡಿ ನಂತರ ಅವರು ಮಾತನಾಡಿದರು.
ಭಾರತೀಯ ಜನತಾಪಕ್ಷವು ಸಾಮಾನ್ಯ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದ ಬೇರುಮಟ್ಟದಲ್ಲಿ ದುಡಿಯುವ ಕಾರ್ಯಕರ್ತರನ್ನು ಪಕ್ಷವು ಗುರ್ತಿಸಿ ಅವರನ್ನು ಬೆಳೆಸುತ್ತದೆ. ಅದಕ್ಕೆ ಉತ್ತಮವಾದ ನಿದರ್ಶನವೇ ಪ್ರಧಾನಿ ನರೇಂದ್ರ ಮೋದಿಯವರು. ಹಾಗೇ ಕಳೆದ ೨೦ವರ್ಷಗಳಿಂದ ಮೊಳಕಾಲ್ಮುರು ಚಳ್ಳಕೆರೆ ಚಿತ್ರದುರ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಹಗಲಿರುಳು ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಅದರ ಫಲವಾಗಿ ಜಿಲ್ಲಾ ಪ್ರಧಾನಕಾರ್ಯದರ್ಶಿ, ರಾಜ್ಯ ಪರಿಶಿಷ್ಟವರ್ಗಗಳ ಆಯೋಗದ ಸದಸ್ಯನಾಗಿ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಉಸ್ತುವಾರಿಯಾಗಿ ಕರ್ತವ್ಯನಿರ್ವಹಿಸಿದ್ದೇನೆ. ಹಾಗೇ ಕಳೆದ ೧೦ವರ್ಷದಿಂದ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ಪಕ್ಷವು ನನ್ನ ಸೇವೆಯನ್ನು ಪರಿಗಣನೆಗೆ ತೆಗೆದುಕೊಳ್ಳತ್ತದೆ ಎಂಬ ವಿಶ್ವಾಸ ನನಗಿದೆ.
ಈಚೆಗೆ ಮಾಜಿ ಶಾಸಕರಾದ ಎಸ್.ತಿಪ್ಪೇಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂಸತದ ಸಂಗತಿಯಾಗಿದೆ. ಅವರು ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಸಂಘಟನಾ ದೃಷ್ಟಿಯಿಂದ ಆನೆಬಲ ಬಂತಾಗಿದೆ. ಆದರೆ ಪಕ್ಷವಾಗಲಿ, ನಮ್ಮ ವರಿಷ್ಠರಾಗಲಿ ಇದುವರೆಗೂ ಮೊಳಕಾಳ್ಮುರು ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ನೀಡಲಾಗುತ್ತದೆ ಎಂದು ಎಲ್ಲಿಯೂ ಗೋಷಿಸಿಲ್ಲ. ಹಾಗಾಗಿ ಇಂದಿನಿAದ ನಾನು ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡು ಚುನಾವಣೆಗಾಗಿ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಪಡೆಯನ್ನು ಸಿದ್ಧಗೊಳಿಸುವ ಕಾರ್ಯವನ್ನು ಮಾಡುತ್ತೇನೆ. ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮ ಬಿಜೆಪಿ ಪಕ್ಷವು ೧೫೦ಸ್ಥಾನಗಳನ್ನು ಪಡೆದು ಅಧಿಕಾರಿಕ್ಕೆ ಬರಲಿದ್ದು, ಅದರಲ್ಲಿ ಮೊಳಕಾಲ್ಮುರು ಕ್ಷೇತ್ರವೂ ಒಂದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇವೇಳೆ ಬಿಜೆಪಿ ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷ ಪಿ.ಶಿವಣ್ಣ, ಮುಖಂಡರಾದ ಸಿ.ಬಿ.ಮೋಹನ್, ಗೋವಿಂದ, ಕಾಲುವೆಹಳ್ಳಿ ಶ್ರೀನಿವಾಸ್, ಗಾದ್ರಿಪಾಲಯ್ಯ, ಶ್ರೀಪತಿ, ಮಹೇಶ್, ಓಬಣ್ಣ, ಪ್ರಹ್ಲಾದ್, ಕೆ.ಟಿ.ಸ್ವಾಮಿ, ತಿಪ್ಪೇಸ್ವಾಮಿ ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments