ಮೊಳಕಾಲ್ಮುರು ವಿಧಾಸಭೆ ಕ್ಷೇತ್ರದ ಟಿಕೆಟ್ ಮ್ಯಾಸ ನಾಯಕ ಸಮುದಾಯಕ್ಕೆ ನೀಡದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮ್ಯಾಸನಾಯಕ ಜಾಗೃತಿ ವೇದಿಕೆ ಮುಖಂಡರು ಎಚ್ಚರಿಸಿದರು.

by | 23/03/23 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.23
ಬುಡಕಟ್ಟು ಸಂಸ್ಕೃತಿ ಹಿನ್ನೆಲೆ ಹೊಂದಿರುವ ಮ್ಯಾಸ ನಾಯಕರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಮತ್ತು ಚಳ್ಳಕೆರೆ ಈ ಎರಡು ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಕಾಂಗ್ರೆಸ್ ಪಕ್ಷದಿಂದ
ಕಳೆದ ವಿಧಾಸಭೆ ಚುನಾವಣೆಯಲ್ಲೂ ಮೊಳಕಾಲ್ಮುರು ಕ್ಷೇತ್ರದಲ್ಲಿ ಮ್ಯಾಸ ನಾಯಕ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಈ ಬಾರಿಯು ನೀಡಿದಲ್ಲಿ ಪಕ್ಷ ಗೆಲವು ಸಾದಿಸುವುದು. ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತದಾರರಿರುವ ಮ್ಯಾಸನಾಯಕ ಸಮುದಾಯದ ಅಭ್ಯರ್ಥಿಗೆ ಮ್ಯಾಸನಾಯಕ ಸಮುದಾಯದ ಮುಖಂಡ ಡಾ.ಬಿ. ಯೋಗೇಶ್‌ಬಾಬು ಅವರಿಗೆ ಟಿಕೆಟ್ ನೀಡಬೇಕು. ಕ್ಷೇತ್ರದಲ್ಲಿ ಮ್ಯಾಸ ನಾಯಕ ಸಮುದಾಯಕ್ಕೆ ಆದ್ಯತೆ ನೀಡುವುದರಿಂದ ಅತಿಹೆಚ್ಚು ಮ್ಯಾಸ ನಾಯಕ ಸಮುದಾಯವಿರುವ ಚಳ್ಳಕೆರೆ, ಸಂಡೂರು, ಕೂಡ್ಲಿಗಿ, ಹಿರಿಯೂರು, ಹೊಸಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಕ್ಷೇತ್ರದಲ್ಲಿ ನಿರಂತರವಾಗಿ ಪಕ್ಷದ ಸಂಘಟನೆ ಮತ್ತು ಸಮುದಾಯಗಳ ಸಂಕಷ್ಟಗಳಲ್ಲಿ ಬಾಗಿಯಾಗಿರುವ ಯೋಗೇಶ್‌ಬಾಬು ಅವರಿಗೆ ಈ ಬಾರಿ ಕ್ಷೇತ್ರದ ಜನತೆ ಗೆಲುವು ತಂದುಕೊಡಲಿದ್ದಾರೆ. ಯೋಗೇಶ್‌ಬಾಬು ಹೊರತಾಗಿ ಬೇರೆಯವರಿಗೆ ಟಿಕೆಟ್ ನೀಡಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ಬೊಮ್ಮಣ್ಣ ಮಾತನಾಡಿ,ಮೊಳಕಾಲ್ಮುರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಮ್ಯಾಸ ನಾಯಕ ಸಮುದಾಯಕ್ಕೆ ಟಿಕೆಟ್ ಕೊಡದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡಬೇಕಾಗುತ್ತದೆ ಎಂದರೆ, ಗ್ರಾಪಂ ಸದಸ್ಯ ಒ. ರವಿ ಮಾತನಾಡಿ, ಮ್ಯಾಸ ನಾಯಕರಿಗೆ ಬಿಟ್ಟು ಹೊರಗಿನ ಅಭ್ಯರ್ಥಿ ವಿ.ಎಸ್.ಉಗ್ರಪ್ಪಗೆ ಟಿಕೆಟ್ ನೀಡಿದಲ್ಲಿ ಚುನಾವಣೆ ಬಹಿಷ್ಕಾರ ಮಾಡುವ ಮೂಲಕ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಪಂ ಅಧ್ಯಕ್ಷೆ ಮಂಜಮ್ಮ, ಮಂಜಣ್ಣ, ತಾಪಂ ಮಾಜಿ ಸದಸ್ಯ ಚಂದ್ರಣ್ಣ, ಮ್ಯಾಸನಾಯಕ ಜಾಗೃತಿ ವೇದಿಕೆ ಅಧ್ಯಕ್ಷ ಪಾಲಯ್ಯ, ಗ್ರಾಪಂ ಸದಸ್ಯರಾದ ಶ್ರೀನಿವಾಸ್, ದೇವರಹಳ್ಳಿ ರಾಮಪ್ಪ, ಮುಖಂಡರಾದ ಚನ್ನಾಗನಹಳ್ಳಿ ರುದ್ರಮುನಿ, ಯಾದಲಗಟ್ಟೆ ಜಗನ್ನಾಥ, ಮೈರಾಡ ಪಾಲಯ್ಯ, ಹೇಮಣ್ಣ, ಎಚ್. ರಾಜಣ್ಣ, ದೊಡ್ಡಯ್ಯ, ಹೀಮಂತ, ಎನ್. ನಾಗರಾಜ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page