ಹಿರಿಯೂರು :
ತಾಲ್ಲೂಕಿನ ಯಲ್ಲದಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿರುವ ಬೆಂಕಿ ಅನಾಹುತದಲ್ಲಿ ಸುಮಾರು 15 ಎಕರೆಗೂ ಹೆಚ್ಚು ಭಾಗದ ಅರಣ್ಯ ಪ್ರದೇಶದಲ್ಲಿನ ಒಣ ಹುಲ್ಲು ಭಸ್ಮವಾಗಿದೆ ಎನ್ನಲಾಗಿದೆ.
ಮುಂಗಾರು ಮಳೆ ಆರಂಭವಾದರೆ ಕಾಡಿನಲ್ಲಿ ಒಣಗಿ ನಿಂತಿರುವ ಒಣ ಹುಲ್ಲಿನ ಮಧ್ಯದಲ್ಲಿ ಹಸಿರು ಹುಲ್ಲು ಚಿಗುರುತ್ತದೆ. ಆಗ ಕುರಿ-ಮೇಕೆ, ದನಕರುಗಳಿಗೆ ಹಸಿರು ಹುಲ್ಲು ಮೇಯುವಾಗ ಒಣಗಿದ ಕಡ್ಡಿ ಬಾಯಿಗೆ ನಾಟುತ್ತದೆ. ಆಗ ಸರಿಯಾಗಿ ಹುಲ್ಲು ತಿನ್ನುವುದಿಲ್ಲ ಎಂಬ ಕಾರಣಕ್ಕೆ ಪ್ರತಿವರ್ಷ ಬೇಸಿಗೆ ಸಮಯದಲ್ಲಿ ಜಾನುವಾರು ಸಾಕಾಣೆ ಮಾಡುವವರು ಒಣಹುಲ್ಲಿಗೆ ಬೆಂಕಿ ಹಚ್ಚುತ್ತಾರೆ ಎಂಬುದಾಗಿ ತಿಳಿದುಬಂದಿದೆ.
ಈ ಬೆಂಕಿಯಿಂದ ಅರಣ್ಯ ಪ್ರದೇಶದ ಗಿಡಮರಗಳಿಗೆ, ಪ್ರಾಣಿಪಕ್ಷಿಗಳಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ. ಸುದ್ದಿ ತಿಳಿದ ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ತೆರಳಿ ಬೆಂಕಿ ಹರಡುವುದನ್ನು ತಡೆದಿದ್ದಾರೆ ಎಂಬುದಾಗಿ ವಲಯ ಅರಣ್ಯಾಧಿಕಾರಿ ಶಶಿಧರ್ ತಿಳಿಸಿದ್ದಾರೆ.
ಬೆಂಕಿ ಹಚ್ಚುವುದರಿಂದ ಆಗಬಹುದಾದ ಅನಾಹುತಗಳ ಬಗ್ಗೆ ಕಾಡಂಚಿನ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದೇವೆ. ಹುಲ್ಲಿನ ಜೊತೆ ಸಣ್ಣಪುಟ್ಟಗಿಡಗಳು ಸುಟ್ಟುಹೋಗುವ ಸಾಧ್ಯತೆ ಇದೆ. ಎಷ್ಟೋ ಪಕ್ಷಿಗಳು ಗೂಡಿನಲ್ಲಿ ಮೊಟ್ಟೆ ಇಟ್ಟಿರುತ್ತವೆ ಅವೆಲ್ಲವೂ ಸಹ ನಾಶವಾಗುತ್ತವೆ.
ನಮ್ಮ ಭಾಗದ ಅರಣ್ಯದಲ್ಲಿ ಸಹಜ ರೀತಿಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದಿಲ್ಲ. ಸಾಕು ಪ್ರಾಣಿಗಳ ಮೇವಿಗೋಸ್ಕರ ಅರಣ್ಯಪ್ರದೇಶಕ್ಕೆ ಬೆಂಕಿಹಚ್ಚಬಾರದು. ದನ-ಕುರಿಗಾಹಿಗಳು ಅರಣ್ಯ ಇಲಾಖೆಯೊಂದಿಗೆ ಸಹಕರಿಸುವ ಮೂಲಕ ಕಾಡು ಉಳಿಸುವ ಕೆಲಸ ಮಾಡಬೇಕು ಎಂಬುದಾಗಿ ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ ರಮೇಶ್ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments