ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ ಕೆ.ಕಯಮಾರ್ ಹೇಳಿದರು.
ರಂಜಾನ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ನಗರದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂಗಳಿಗೆ ಯುಗಾದಿ ಹಾಗೂ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಪವಿತ್ರ ಹಬ್ಬಗಳಾಗಿವೆ. ಎರಡೂ ಹಬ್ಬಗಳನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸಬೇಕು ಪೊಲಿಸ್ ಇಲಾಖೆವತಿಯಿಂದ ಅಗತ್ಯ ಮುಂಜಾಗ್ರತಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಸ್ಲಿಂ ಸಮುದಾಯದ ಮುಖಂಡ ಮುಖಂಡರು. ವಿವಿಧ ಸಂಘಟನೆಯ ಮುಖಂಡರು. ಪಿಎಸ್ ಐ ಗಳಾದ ಸತೀಶ್ ನಾಯ್ಕ.ಶಿವರಾಜ್. ಧರೆಪ್ಪ ಇತರರಿದ್ದರು.
0 Comments