ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

by | 28/05/24 | ಸುದ್ದಿ


ಹಿರಿಯೂರು :
ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡಬಾರದು ಎಂಬುದಾಗಿ ಸವಿತಾ ಸಮಾಜದ ಮುಖಂಡರು ನಗರಸಭೆಗೆ ಮನವಿ ಮಾಡಿದ್ದಾರೆ.
ನಗರದಲ್ಲಿ ಇತ್ತೀಚಿಗೆ ಯುಪಿಯಿಂದ ಬಂದ ಜನರು ನಗರದಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು ಸ್ಥಳೀಯ ಜನರ ಉದ್ಯೋಗಗಳನ್ನು ಕಸಿದುಕೊಂಡು ಸ್ಥಳೀಯರಿಗೆ ಜೀವನ ನಿರ್ವಹಣೆಗೆ ತೊಂದರೆ ಮಾಡುತ್ತಿದ್ದಾರೆ.ಏನಾದರೂ ಹೇಳಲು ಹೋದರೆ ದೌರ್ಜನ್ಯ ನಡೆಸಲು ಬರುತ್ತಾರೆ.
ನಮ್ಮ ಸವಿತಾ ಸಮಾಜದ ಬಂಧುಗಳು ಕ್ಷೌರಿಕಾ ಅಂಗಡಿಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಿಂದ ಬಂದ ಸವಿತಾ ಸಮಾಜದವರೇ ಅಲ್ಲದ ಜನರು ಸಲೂನ್ ಗಳನ್ನು ಅನಧಿಕೃತವಾಗಿ ಪ್ರಾರಂಭಿಸಿ ಸ್ಥಳೀಯ ಸವಿತಾ ಸಮಾಜದ ಬಂಧುಗಳಿಗೆ ತೊಂದರೆ ಮಾಡುತ್ತಿದ್ದಾರೆ.
ಇವರು ಉತ್ತರಪ್ರದೇಶದಿಂದ ಬಂದವರಾಗಿರುವುದರಿಂದ ಈ ಪ್ರದೇಶಕ್ಕೆ ಅಪರಿಚಿತರಾಗಿದ್ದು, ಅಪರಾಧ ಹಿನ್ನೆಲೆಯನ್ನು ಉಳ್ಳವರಾಗಿದ್ದು, ಸಮಾಜಘಾತಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿರುವುದರಿಂದ ನಗರದಲ್ಲಿ ಇವರಿಂದ ಏನಾದರೂ ಅನಾಹುತಗಳು ದೊಂಬಿ ಗಲಾಟೆಗಳು ನಡೆಯುವ ಸಂಭವವಿರುತ್ತದೆ.
ಪ್ರಯುಕ್ತ ಇವರ ಅನಧಿಕೃತ ಅಂಗಡಿಗಳಿಗೆ ನಗರಸಭೆ ವತಿಯಿಂದ ಪರವಾನಗಿ ನೀಡಬಾರದೆಂದು ಮನವಿ ಮಾಡಿಕೊಳ್ಳುತ್ತೇವೆ. ನಮ್ಮ ಸಮಾಜದ ಜನರ ಬವಣೆಯನ್ನು ತಪ್ಪಿಸಲು ಹಾಗೂ ನಗರದಲ್ಲಿ ಅನಗತ್ಯವಾಗಿ ಇವರಿಂದ ಆಗುತ್ತಿರುವ ದೊಂಬಿ ಗಲಾಟೆಗಳನ್ನು ತಪ್ಪಿಸುವುದರ ಮೂಲಕ ನಗರದ ಶಾಂತಿಯನ್ನು ಕಾಪಾಡಲು ಕೋರುತ್ತೇವೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page