ರಂಗಮಾಧ್ಯಮ ಹಲವು ಕಲೆಗಳ ಸಮ್ಮಿಶ್ರಣವಾದ ಒಂದು ಪರಿಣಾಮಕಾರಿ ಮಾಧ್ಯಮವಾಗಿದೆ: ಡಾ.ವಿ.ಬಸವರಾಜ್

by | 15/05/24 | ರಂಗಭೂಮಿ


ಹಿರಿಯೂರು :
ರಂಗಮಾಧ್ಯಮ ಹಲವು ಕಲೆಗಳ ಸಮ್ಮಿಶ್ರಮಣವಾದ ಒಂದು ಪರಿಣಾಮಕಾರಿ ಮಾಧ್ಯಮವಾಗಿದೆ.ಇಂತಹ ಕಲೆಯನ್ನು ಶಿಕ್ಷಕರು ಕರಗತ ಮಾಡಿಕೊಂಡರೆ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಡಾ.ವಿ.ಬಸವರಾಜ್ ಅವರು ತಿಳಿಸಿದರು.
ನಗರದ ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಶಿಕ್ಷಣದಲ್ಲಿ ರಂಗಕಲೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಹನ ಕೌಶಲ ಹಾಗೂ ನಟನಾ ಕೌಶಲವನ್ನು ಶಿಕ್ಷಕರು ತಮ್ಮ ಬೋಧನೆಯಲ್ಲಿ ಬಳಸಿಕೊಂಡಾಗ ಭೋಧನೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆ. ಪ್ರಶಿಕ್ಷಣಾರ್ಥಿಗಳು ರಂಗಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಸಾಹಿತ್ಯಿಕ ಅಭಿರುಚಿಯನ್ನ ಸಾಂಸ್ಕೃತಿಕ ಮೌಲ್ಯಗಳನ್ನು ಹೊಂದಲು ಸಹಾಯವಾಗುತ್ತದೆ ಎಂದರಲ್ಲದೆ,
ವಿಷಾದದ ಸಂಗತಿ ಎಂದರೆ ಈ ವಿಶಿಷ್ಟ ಪುರಾತನ ಕಲೆಗಳಿಂದ ವಿದ್ಯಾರ್ಥಿಗಳು ಯುವಕರು ವಿಮುಖರಾಗುತ್ತಿರುವುದು ಬೇಸರದ ಸಂಗತಿ, ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾನವನನ್ನು ನಿಜಮಾನವನ್ನಾಗಿಸುವಿಕೆಯಲ್ಲಿ ಸಮಾಜವನ್ನು ಪರಿವರ್ತಿಸುವಲ್ಲಿ ನಾಟಕಗಳು ಯಶಸ್ವಿ ಪಾತ್ರ ವಹಿಸುವ ಸಾಮಾಜಿಕ ಮಾಧ್ಯಮಗಳಾಗಿವೆ ಎಂಬುದಾಗಿ ಅವರು ತಿಳಿಸಿದರು.
ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾದ ರಂಗಕರ್ಮಿ ಕೆ.ಪಿ.ಎಂ. ಗಣೇಶಯ್ಯ ಅವರು ಮಾತನಾಡಿ, ರಂಗಭೂಮಿಯ ಆಳ ಅರಿವುಗಳ ಬಗ್ಗೆ ತಿಳಿಸುತ್ತಾ, ಅಲ್ಲಿನ ನವರಸಗಳನ್ನು ತಿಳಿಸಿಕೊಟ್ಟರು. ಶಿಕ್ಷಕರಿಗೆ ಆಂಗಿಕ ಭಾವಗಳೊಂದಿಗಿನ ವಾಕ್ಚಾತುರ್ಯದಂತಹ ಮುಂತಾದ ಅಭಿನಯದ ರೂಪಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಡಾ.ಅವಿನಾಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಚ್.ರವಿಕುಮಾರ್, ಅರುಣಾ ಕುಮಾರಿ, ನಾಗೇಶ್, ಜೆ.ಆರ್. ಮಾರುತೇಶ್, ನಿಂಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರಶಿಕ್ಷಣಾರ್ಥಿ ವಿ.ರಂಗಸ್ವಾಮಿ ಸ್ವಾಗತಿಸಿದರು. ನಿಂಗರಾಜ್ ಪಿ.ಕೂಡಲಸಂಗಮ ಕಾರ್ಯಕ್ರಮವನ್ನು ನಿರೂಪಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page