ಹಿರಿಯೂರು :
ರಂಗಮಾಧ್ಯಮ ಹಲವು ಕಲೆಗಳ ಸಮ್ಮಿಶ್ರಮಣವಾದ ಒಂದು ಪರಿಣಾಮಕಾರಿ ಮಾಧ್ಯಮವಾಗಿದೆ.ಇಂತಹ ಕಲೆಯನ್ನು ಶಿಕ್ಷಕರು ಕರಗತ ಮಾಡಿಕೊಂಡರೆ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಡಾ.ವಿ.ಬಸವರಾಜ್ ಅವರು ತಿಳಿಸಿದರು.
ನಗರದ ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಶಿಕ್ಷಣದಲ್ಲಿ ರಂಗಕಲೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಹನ ಕೌಶಲ ಹಾಗೂ ನಟನಾ ಕೌಶಲವನ್ನು ಶಿಕ್ಷಕರು ತಮ್ಮ ಬೋಧನೆಯಲ್ಲಿ ಬಳಸಿಕೊಂಡಾಗ ಭೋಧನೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆ. ಪ್ರಶಿಕ್ಷಣಾರ್ಥಿಗಳು ರಂಗಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಸಾಹಿತ್ಯಿಕ ಅಭಿರುಚಿಯನ್ನ ಸಾಂಸ್ಕೃತಿಕ ಮೌಲ್ಯಗಳನ್ನು ಹೊಂದಲು ಸಹಾಯವಾಗುತ್ತದೆ ಎಂದರಲ್ಲದೆ,
ವಿಷಾದದ ಸಂಗತಿ ಎಂದರೆ ಈ ವಿಶಿಷ್ಟ ಪುರಾತನ ಕಲೆಗಳಿಂದ ವಿದ್ಯಾರ್ಥಿಗಳು ಯುವಕರು ವಿಮುಖರಾಗುತ್ತಿರುವುದು ಬೇಸರದ ಸಂಗತಿ, ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾನವನನ್ನು ನಿಜಮಾನವನ್ನಾಗಿಸುವಿಕೆಯಲ್ಲಿ ಸಮಾಜವನ್ನು ಪರಿವರ್ತಿಸುವಲ್ಲಿ ನಾಟಕಗಳು ಯಶಸ್ವಿ ಪಾತ್ರ ವಹಿಸುವ ಸಾಮಾಜಿಕ ಮಾಧ್ಯಮಗಳಾಗಿವೆ ಎಂಬುದಾಗಿ ಅವರು ತಿಳಿಸಿದರು.
ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾದ ರಂಗಕರ್ಮಿ ಕೆ.ಪಿ.ಎಂ. ಗಣೇಶಯ್ಯ ಅವರು ಮಾತನಾಡಿ, ರಂಗಭೂಮಿಯ ಆಳ ಅರಿವುಗಳ ಬಗ್ಗೆ ತಿಳಿಸುತ್ತಾ, ಅಲ್ಲಿನ ನವರಸಗಳನ್ನು ತಿಳಿಸಿಕೊಟ್ಟರು. ಶಿಕ್ಷಕರಿಗೆ ಆಂಗಿಕ ಭಾವಗಳೊಂದಿಗಿನ ವಾಕ್ಚಾತುರ್ಯದಂತಹ ಮುಂತಾದ ಅಭಿನಯದ ರೂಪಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಡಾ.ಅವಿನಾಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಚ್.ರವಿಕುಮಾರ್, ಅರುಣಾ ಕುಮಾರಿ, ನಾಗೇಶ್, ಜೆ.ಆರ್. ಮಾರುತೇಶ್, ನಿಂಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರಶಿಕ್ಷಣಾರ್ಥಿ ವಿ.ರಂಗಸ್ವಾಮಿ ಸ್ವಾಗತಿಸಿದರು. ನಿಂಗರಾಜ್ ಪಿ.ಕೂಡಲಸಂಗಮ ಕಾರ್ಯಕ್ರಮವನ್ನು ನಿರೂಪಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments