ರಕ್ತದಾನ ಕುರಿತು ಯುವಕರಲ್ಲಿ ಅರಿವು ಮೂಡಿಸಬೇಕು ಪ್ರೊ: ಎಸ್.ಸಂದೀಪ್

by | 06/12/23 | ಆರೋಗ್ಯ

ಚಿತ್ರದುರ್ಗ: ರಕ್ತದಾನ ಮಹಾದಾನ,ಇದರಿಂದ ಒಂದು ಜೀವ ಉಳಿಯಲು ಸಾಧ್ಯ ರಕ್ತದಾನದಿಂದ ಯಾವುದೇ ತೊಂದರೆ ಇಲ್ಲ ಆರೋಗ್ಯ ಚೇತರಿಕೆಗೆ ಸಾಧ್ಯ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕೆಂದು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪ್ರೊ:ಎಸ್.ಸಂದೀಪ್ ಕರೆ ನೀಡಿದರು. ನಗರದ ಕುಂಚಿಗನಾಳ್ ಗ್ರಾಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ(ರಿ) ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಚಿತ್ರದುರ್ಗ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ವಿಶೇಷ ಶಿಬಿರದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳೊಗೊಮ್ಮೆ ರಕ್ತದಾನ ಮಾಡಬಹುದು ಇದರಿಂದ ಆರೋಗ್ಯ ಮೇಲೆ ಯಾವುದೇ ತೊಂದರೆಯಾಗದು ಹೊಸ ಚೈತನ್ಯ ಹೊಂದಲು ಸಾಧ್ಯ ಯುವಕರ ರಕ್ತದಲ್ಲಿ ಹೆಚ್ಚು ಪೌಷ್ಠಿಕತೆ ಇರುವುದರಿಂದ ಇದನ್ನು ಹೆಚ್ಚು ಕಾಲ ಶೇಖರಿಸಿಟ್ಟು ಅಗತ್ಯತೆಗೆ ಅನುಗುಣವಾಗಿ ಬಳಸುವುದರಿಂದ ರಕ್ತದ ಅವಶ್ಯಕತೆ ಇರುವವರಿಗೆ ಸಹಾಯ ಮಾಡಿದಂತಾಗುತ್ತದೆ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಮುಖ ಉದ್ದೇಶವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಡಾ:ಧನಂಜಯ ಆರ್.ಜಿ.ಸಹಾಯಕ ಪ್ರಾಧ್ಯಾಪಕರು ಮತ್ತು ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳು ಮಾತನಾಡಿ ಮನುಷ್ಯನಿಗೆ ಅಪಘಾತ ಇಲ್ಲವೇ ಅನಾರೋಗ್ಯ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ ಆರೋಗ್ಯವಂತ ವಯಸ್ಕಾರು ರಕ್ತದಾನ ಮಾಡಿ ಮತ್ತೊಂದು ಜೀವವನ್ನು ಉಳಿಸಿದ ಪೂಣ್ಯ ಕಟ್ಟಿಕೊಳ್ಳಬೇಕು ರಕ್ತದಾನ ಮಾಡಿ ಜೀವ ಉಳಿಸಿ ಹಾಗೂ ನಿಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ:ಡಿ.ಆರ್.ರಂಗಸ್ವಾಮಿ ಪ್ರಾಂಶುಪಾಲರು, ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಚಿತ್ರದುರ್ಗ ಇವರು ವಹಿಸಿದ್ದರು ಕಾರ್ಯಕ್ರಮದಲ್ಲಿ ಕುಂಚಿಗನಾಳ್ ಗಾ.ಪಂ.ಸದಸ್ಯರಾದ ಶ್ರೀಮತಿ ಚೈತ್ರ ಲಕ್ಷೀಕಾಂತ್ ಪ್ರೊ: ಶ್ರೀಮತಿ ಎನ್.ಗಂಗಮ್ಮ, ಪ್ರೊ:ಎನ್.ಶ್ರೀನಿವಾಸ ಶಿಬಿರ ಸಂಪರ್ಕಾಧಿಕಾರಿಗಳಾದ ಡಾ: ಶ್ರೀಮತಿ ಹೇಮಲತಾ ಪ್ರೊ:ಲಕ್ಷೀಕಾಂತ್‌ ಎಸ್ ಜಿಲ್ಲಾ ಆರೋಗಾಧಿಕಾರಿಗಳು ಹಾಗೂ ಕುಂಚಿಗನಾಳ್ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಮುಖೋಪಾಧ್ಯಯರಾದ ಶ್ರೀಮತಿ ವೀರಮಂಜುಳದೇವಿ ಹಾಗೂ ಗ್ರಾಮಸ್ಥರು ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಗ್ರಾಮದ ಯುವಕರು ರಕ್ತದಾನ ಶಿಬಿರದಲ್ಲಿ 15 ಯುವಕರು ಜನರು ರಕ್ತದಾನ ಮಾಡಿದರು. ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜನಧ್ವನಿ ಡಿಜಿಟಲ್‌ ಮೀಡಿಯಾ ಗೆ ಶುಭ ಕೋರಿದ ಸ್ವಾಮೀಜಿ.

. ಆತ್ಮೀಯ ಗೋಪಣ್ಣನವರಿಗೆ ಭಗವಂತನ ಕೃಪ ಆಶೀರ್ವಾದಗಳು . ತಾವು ಅತ್ಯಂತ ಅರ್ಥಗರ್ಭಿತವಾದ ಹಾಗೂ ಸಮಯೋಚಿತವಾದ ವರದಿಯನ್ನು ತಮ್ಮ ಜನ ಧ್ವನಿ ಮೂಲಕ ಜನರಿಗೆ ತಲುಪಿಸಿರುವಿರಿ .ಈ ನಿಮ್ಮ ಕಾರ್ಯಕ್ಕೆ ನಮ್ಮ ಕಡೆಯಿಂದ ಅಭಿನಂದನೆಗಳು
.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page