ರಕ್ತದಾನ ಕುರಿತು ಯುವಕರಲ್ಲಿ ಅರಿವು ಮೂಡಿಸಬೇಕು ಪ್ರೊ: ಎಸ್.ಸಂದೀಪ್

by | 06/12/23 | ಆರೋಗ್ಯ

ಚಿತ್ರದುರ್ಗ: ರಕ್ತದಾನ ಮಹಾದಾನ,ಇದರಿಂದ ಒಂದು ಜೀವ ಉಳಿಯಲು ಸಾಧ್ಯ ರಕ್ತದಾನದಿಂದ ಯಾವುದೇ ತೊಂದರೆ ಇಲ್ಲ ಆರೋಗ್ಯ ಚೇತರಿಕೆಗೆ ಸಾಧ್ಯ ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕೆಂದು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪ್ರೊ:ಎಸ್.ಸಂದೀಪ್ ಕರೆ ನೀಡಿದರು. ನಗರದ ಕುಂಚಿಗನಾಳ್ ಗ್ರಾಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ(ರಿ) ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಚಿತ್ರದುರ್ಗ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ವಿಶೇಷ ಶಿಬಿರದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಅವರು ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳೊಗೊಮ್ಮೆ ರಕ್ತದಾನ ಮಾಡಬಹುದು ಇದರಿಂದ ಆರೋಗ್ಯ ಮೇಲೆ ಯಾವುದೇ ತೊಂದರೆಯಾಗದು ಹೊಸ ಚೈತನ್ಯ ಹೊಂದಲು ಸಾಧ್ಯ ಯುವಕರ ರಕ್ತದಲ್ಲಿ ಹೆಚ್ಚು ಪೌಷ್ಠಿಕತೆ ಇರುವುದರಿಂದ ಇದನ್ನು ಹೆಚ್ಚು ಕಾಲ ಶೇಖರಿಸಿಟ್ಟು ಅಗತ್ಯತೆಗೆ ಅನುಗುಣವಾಗಿ ಬಳಸುವುದರಿಂದ ರಕ್ತದ ಅವಶ್ಯಕತೆ ಇರುವವರಿಗೆ ಸಹಾಯ ಮಾಡಿದಂತಾಗುತ್ತದೆ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಮುಖ ಉದ್ದೇಶವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಡಾ:ಧನಂಜಯ ಆರ್.ಜಿ.ಸಹಾಯಕ ಪ್ರಾಧ್ಯಾಪಕರು ಮತ್ತು ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳು ಮಾತನಾಡಿ ಮನುಷ್ಯನಿಗೆ ಅಪಘಾತ ಇಲ್ಲವೇ ಅನಾರೋಗ್ಯ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ ಆರೋಗ್ಯವಂತ ವಯಸ್ಕಾರು ರಕ್ತದಾನ ಮಾಡಿ ಮತ್ತೊಂದು ಜೀವವನ್ನು ಉಳಿಸಿದ ಪೂಣ್ಯ ಕಟ್ಟಿಕೊಳ್ಳಬೇಕು ರಕ್ತದಾನ ಮಾಡಿ ಜೀವ ಉಳಿಸಿ ಹಾಗೂ ನಿಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ:ಡಿ.ಆರ್.ರಂಗಸ್ವಾಮಿ ಪ್ರಾಂಶುಪಾಲರು, ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಚಿತ್ರದುರ್ಗ ಇವರು ವಹಿಸಿದ್ದರು ಕಾರ್ಯಕ್ರಮದಲ್ಲಿ ಕುಂಚಿಗನಾಳ್ ಗಾ.ಪಂ.ಸದಸ್ಯರಾದ ಶ್ರೀಮತಿ ಚೈತ್ರ ಲಕ್ಷೀಕಾಂತ್ ಪ್ರೊ: ಶ್ರೀಮತಿ ಎನ್.ಗಂಗಮ್ಮ, ಪ್ರೊ:ಎನ್.ಶ್ರೀನಿವಾಸ ಶಿಬಿರ ಸಂಪರ್ಕಾಧಿಕಾರಿಗಳಾದ ಡಾ: ಶ್ರೀಮತಿ ಹೇಮಲತಾ ಪ್ರೊ:ಲಕ್ಷೀಕಾಂತ್‌ ಎಸ್ ಜಿಲ್ಲಾ ಆರೋಗಾಧಿಕಾರಿಗಳು ಹಾಗೂ ಕುಂಚಿಗನಾಳ್ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಮುಖೋಪಾಧ್ಯಯರಾದ ಶ್ರೀಮತಿ ವೀರಮಂಜುಳದೇವಿ ಹಾಗೂ ಗ್ರಾಮಸ್ಥರು ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಗ್ರಾಮದ ಯುವಕರು ರಕ್ತದಾನ ಶಿಬಿರದಲ್ಲಿ 15 ಯುವಕರು ಜನರು ರಕ್ತದಾನ ಮಾಡಿದರು. ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜನಧ್ವನಿ ಡಿಜಿಟಲ್‌ ಮೀಡಿಯಾ ಗೆ ಶುಭ ಕೋರಿದ ಸ್ವಾಮೀಜಿ.

. ಆತ್ಮೀಯ ಗೋಪಣ್ಣನವರಿಗೆ ಭಗವಂತನ ಕೃಪ ಆಶೀರ್ವಾದಗಳು . ತಾವು ಅತ್ಯಂತ ಅರ್ಥಗರ್ಭಿತವಾದ ಹಾಗೂ ಸಮಯೋಚಿತವಾದ ವರದಿಯನ್ನು ತಮ್ಮ ಜನ ಧ್ವನಿ ಮೂಲಕ ಜನರಿಗೆ ತಲುಪಿಸಿರುವಿರಿ .ಈ ನಿಮ್ಮ ಕಾರ್ಯಕ್ಕೆ ನಮ್ಮ ಕಡೆಯಿಂದ ಅಭಿನಂದನೆಗಳು
.

Latest News >>

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ...

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ...

ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

ಹಿರಿಯೂರು: ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ...

ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್....

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page