ಹಿರಿಯೂರು:
ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಮಾದಿಗ ಸಮಾಜದ ಗ್ರಾಮಸ್ಥರಿಗೆ ರಸ್ತೆ ಅಗಲೀಕರಣ ಮಾಡುವ ಸಂದರ್ಭದಲ್ಲಿ ಹೇಳಿದಂತೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುದಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬೆಸ್ಕಾಂ ಎಇಇ ಯವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸ್ವಾಭಿಮಾನಿ ಸೇನೆ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಮಾತನಾಡಿ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸರ್ಕಾರಿ ಗೋಮಾಳದಲ್ಲಿ ಮೂರು ಎಕರೆ ಜಮೀನನ್ನು ಮನೆ ನಿರ್ಮಿಸಿಕೊಳ್ಳಲು ಆದೇಶ ನೀಡಿದ್ದರು.
ಆದರೆ, ಇಲ್ಲಿಯವರೆಗೂ ಹಕ್ಕುಪತ್ರ, ವಿದ್ಯುತ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ.ಆದ್ದರಿಂದ ಅವರ ಮೂಲಭೂತ ಅವಶ್ಯಕತೆಗಳನ್ನು ಈಡೇರಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂಬುದಾಗಿ ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಗೌರವಾಧ್ಯಕ್ಷ ಸನಾವುಲ್ಲಾ, ಮುಖಂಡರಾದ ಆಲೂರುಕಾಂತಣ್ಣ, ವಿ.ರಾಘವೇಂದ್ರ, ಗ್ರಾಮಸ್ಥರಾದ ಯಶೋಧರ, ರಂಗಸ್ವಾಮಿ ಡಿ.ಆರ್, ಹೇಮಂತ್ ರಾಜ್, ತಿಪ್ಪಜ್ಜ, ಪೂಜಾರಜ್ಜ, ಹಂಪಣ್ಣ, ಮನೋಜ್, ಕುಮಾರ್, ಸಾವಿತ್ರಮ್ಮ, ಗುರುಸಿದ್ದಮ್ಮ, ತೋಪಕ್ಕ, ಯಶೋಧಮ್ಮ, ದುರ್ಗಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments