ನಾಯಕನಹಟ್ಟಿ::ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ರಸ್ತೆಗಳು ಕಂಟಕ ತಂದೊಡ್ಡುತ್ತಿವೆ.
ಹೋಬಳಿಯ ಎನ್ ದೇವರಹಳ್ಳಿ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಸಿ ಸಿ ರಸ್ತೆ ಬಗೆದು ಎರಡು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರಾದ ಟಿ ರಾಜಣ್ಣ ಆರೋಪಿಸಿದ್ದಾರೆ.
ಗ್ರಾಮದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಗ್ರಾಮದ ಮುಖ್ಯರಸ್ತೆಗಳನ್ನು ಅಗೆದು ಎರಡು ವರ್ಷ ಕಳೆದರೂ ಹಾಗೆ ಬಿಟ್ಟಿದ್ದಾರೆ. ಇದರಿಂದಾಗಿ ವೃದ್ಧರು, ಕುರಿ ಮೇಕೆ, ದನಕರಗಳನ್ನು, ದ್ವಿಚಕ್ರ ವಾಹನಗಳ ಸುಗಮ ಸಂಚಾರಕ್ಕೆ ಅನಾನುಕೂಲವಾಗಿದ್ದು, ಹಾಗೂ ಗ್ರಾಮದಲ್ಲಿ ಜಾತ್ರೆ ಇರುವುದರಿಂದ ಉನ್ನತ ಅಧಿಕಾರಿಗಳು ಸಾವಿರಾರು ಜನರು ಜಾತ್ರೆಗೆ ಬರುವ ನಿರೀಕ್ಷೆ ಇದೆ ಇದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಗ್ರಾಮದ ಟಿ ರಾಜಣ್ಣ ಒತ್ತಾಯಿಸಿದ್ದರೆ.
ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು ಕೊಟ್ಯಂತರ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೋ, ಅಧಿಕಾರಿಗಳ ಬೇಜವಾಬ್ದಾರಿಯಿಂದಲೋ ಮನೆಗಳ ಮುಂದೆ ಮೊಣಕಾಲುದ್ಧ ಗುಂಡಿಗಳು ಬಿದ್ದಿದ್ದು ಸಣ್ಣ ಮಕ್ಕಳನ್ನು ಮನೆಯಿಂದ ಹೊರ ಬಿಡಲಾಗದಂತಹ ಸನ್ನಿವೇಶ ಸೃಷ್ಟಿಯಾಗಿದೆ ಹಾಗೂ ಈ ಗುಂಡಿಗಳಿಂದ ಕೆಲವರು ಬಿದ್ದು ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಅಡ್ಡಾಡುತ್ತಿದ್ದಾರೆ ಇದರಿಂದ ಗ್ರಾಮಸ್ಥರಿಗೆ ತೊಂದರೆ ಉಂಟಾಗಿದ್ದು ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪೂರ್ಣಗೊಳಿಸಿ ಕೊಡಲು ಅಧಿಕಾರಿಗಳಿಗೆ ಸೂಚಿಸಬೇಕು ಗ್ರಾಮಸ್ಥರು ಒತ್ತಾಯಿಸಿದ್ದಾರೆ..
![](https://janadhwani.in/wp-content/uploads/2024/01/IMG-20240113-WA0177.jpg)
ಇದೇ ಸಂದರ್ಭದಲ್ಲಿ ಗ್ರಾಮಸ್ಥರಾದ ಬಸವರಾಜ್, ವಿರೂಪಾಕ್ಷಿ ,ನಾಗರಾಜ್, ಶಂಕ್ರಣ್ಣ ,ಗೌರಣ್ಣ ,ಭಾಗ್ಯಮ್ಮ, ಕರಿಯಮ್ಮ, ಇದ್ದರು
0 Comments