ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಸಾವು.

by | 07/09/23 | ಅಪಘಾತ

ದಾವಣಗೆರೆ: ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ 48ರ ಎಸ್. ಎಸ್. ಹೈಟೆಕ್ ಆಸ್ಪತ್ರೆ ಬಳಿ ನಡೆದಿದೆ.
ಕೇರಳದ ಪಾಲಕ್ ಕಾಡ್ ಸಿಟಿಯ ಪಟ್ಟಿಕಾರದ ತೆಲುನಾಗು ಗಲ್ಲಿಯ ಋಷಿಕೇಶ್ (24) ಹಾಗೂ ಪುಡುಸೆರಿಯ ಅತುಲ್ (25) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೇರಳದಿಂದ ಗೋವಕ್ಕೆ ಜಾಲಿ ಟ್ರಿಪ್ ಬಂದಿದ್ದ ಇಬ್ಬರು ಹುಬ್ಬಳ್ಳಿಯಿಂದ ದಾವಣಗೆರೆ ಮೂಲಕ ಸಾಗುತ್ತಿದ್ದರು.
ಬೈಕ್ ನಲ್ಲಿದ್ದ ಇಬ್ಬರು ಬೆಳ್ಳಂಬೆಳಿಗ್ಗೆ ಸುಮಾರು 3. 30 ರ ಸುಮಾರಿನಲ್ಲಿ ಹೆದ್ದಾರಿಯಲ್ಲಿ ಹೋಗುವಾಗ ವೇಗವಾಗಿದ್ದ ಕಾರಣ ನಿದ್ರೆ ಮಂಪರಿನಲ್ಲಿ ಬೈಕ್ ಸವಾರ ಡಿವೈಡರ್ ಗುದ್ದಿದೆ. ಆ ಬಳಿಕ ಇಬ್ಬರು ಬ್ರಿಡ್ಜ್ ಕೆಳಗಡೆ ಬಿದ್ದಿದ್ದಾರೆ. ಬೈಕ್ ನುಜ್ಜು ಗುಜ್ಜಾಗಿತ್ತು. ಆ ಬಳಿಕ ಈ ಮಾರ್ಗದಲ್ಲಿ ಹೋಗುತ್ತಿದ್ದ ವಾಹನಗಳು ಬೈಕ್ ಗೆ ತಾಗಿಸಿಕೊಂಡು ಹೋಗಿವೆ. ನಂತರ ಬಂದ ಕಾರು ಬೈಕ್ ಡಿಕ್ಕಿ ಹೊಡೆದು ಜಖಂ ಆಗಿತ್ತು.
ಮೇಲ್ನೋಟಕ್ಕೆ ಅಪಘಾತ ಎಂಬಂತೆ ಕಂಡು ಬಂದಿತ್ತು. ಆದ್ರೆ, ಇಬ್ಬರ ಮೃತದೇಹಗಳು ಕೆಳಗಡೆ ಬಿದ್ದಿದ್ದವು. ಆರಂಭದಲ್ಲಿ ಅಪಘಾತ ಎಂಬಂತೆ ಭಾಸವಾದರೂ ಮೃತದೇಹಗಳು ಯಾಕೆ ಕೆಳಗಡೆ ಬಿದ್ದವು ಎಂಬ
ಪ್ರಶ್ನೆ ಕಾಡಲಾರಂಭಿಸಿತು.
ಸುದ್ದಿ ತಿಳಿಯುತ್ತಿದ್ದಂತೆ ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬ್ರಿಡ್ಜ್ ಮೇಲಿನಿಂದ ನಿಂತು ವೀಕ್ಷಿಸಿದಾಗ ಕೆಳಗಡೆ ಇಬ್ಬರು ಬಿದ್ದಿದ್ದರು. ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದಿದ್ದರು. ಬೈಕ್ ಗೆ ಡಿಕ್ಕಿ ಹೊಡೆದು ನಿಂತಿದ್ದ ಕಾರು ಚಾಲಕರನ್ನು ವಿಚಾರಿಸಿದರು. ಆಗ ನಾವು ಬರುವುದಕ್ಕಿಂತ ಮುಂಚೆ ಅಪಘಾತವಾಗಿತ್ತು. ನಾವು ಕೆಳಗಡೆ ನೋಡಿದೆವು. ಕತ್ತಲಾಗಿದ್ದ ಕಾರಣ ಏನೂ ಕಾಣಲಿಲ್ಲ. ಸ್ವಲ್ಪ ಬೆಳಕು ಬಂದ ಮೇಲೆ ಕೆಳಗಡೆ ಮೃತದೇಹವೊಂದು ಕಂಡು ಬಂತು ಎಂದು ಮಾಹಿತಿ ನೀಡಿದ್ದಾರೆ.
ಇಬ್ಬರೂ ಕೇರಳ ಮೂಲದವರಾಗಿದ್ದು, ಗೋವಾಕ್ಕೆ ಬೈಕ್ ನಲ್ಲಿಯೇ ತೆರಳಿದ್ದರು. ಬೈಕ್ ನಲ್ಲಿ ಜಾಲಿ ರೈಡ್ ಹೊರಟಿದ್ದವರು ಮಾತ್ರ ಸೇರಿದ್ದು ಮಸಣಕ್ಕೆ. ಹೆಲ್ಮೆಟ್ ಧರಿಸಿದ್ದರೂ ಸಹ ಮೇಲಿನಿಂದ ಕೆಳಗಡೆ ಬಿದ್ದ ರಭಸಕ್ಕೆ ಬೈಕ್ ಸವಾರ ಕೊನೆಯುಸಿರೆಳೆದಿದ್ದಾನೆ. ಹಿಂಬದಿ ಕುಳಿತಿದ್ದವನಿಗೂ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page