ರಸ್ತೆ ಅಪಘಾತದಲ್ಲಿ ಗೋಪನಹಳ್ಳಿ ಕೆಂಚಮ್ಮ ಸ್ಥಳದಲ್ಲೇ ಸಾವು.

by | 11/09/23 | ಅಪಘಾತ

ಚಳ್ಳಕೆರೆ ಸೆ.11. ರಾಷ್ಟ್ರೀಯ ಹೆದ್ದಾರಿ ನಂದಾಪುರ ಬಳಿ ಕಾರು ಹರಿದು ಮಹಿಳೆಯೊರ್ವಳು ಸ್ಥಳದಲ್ಲೇ ಮೃತ ಪಟ್ಟ ಘಟನೆ ಸೋಮವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ಮಂಗೇರ ಕೆಂಚಮ್ಮ(52) ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದು. ಗಂಡ ನಾಗರಾಜ್ ಜೊತೆ ಕೆಂಚಮ್ಮ ಬೆಂಗಳೂರಿನಲ್ಲಿರುವ ಮಗಳ ಮನೆಗೆ ಹೋಗಿ ಬೆಂಗಳೂರಿನಿಂದ ಚಳ್ಳಕೆರೆಗೆ ಬರುವ ಖಾಗಸಿ ಬಸ್ ಹತ್ತಿದ್ದಾರೆ. ಗಂಡ ಸಾಣೀಕೆರೆ ಗ್ರಾಮದಲ್ಲಿ ಇಳಿದುಕೊಂಡರೆ ಹೆಂಡತಿ ಕೆಂಚಮ್ಮ ಗೋಪನಹಳ್ಖಿ ಗೇಟ್ ಬಳಿ ಇಳಿಯುವ ಬದಲು ಹೊಟ್ಟೆಪ್ಪನಹಳ್ಳಿ ಗೇಟ್ ಮೇಲ್ಸೇತವೆ ಬಳಿ ಮಿಸ್ಸಾಗಿ ಇಳಿದುಕೊಂಡು ಗೋಪನಹಳ್ಳಿಗೆ ಹೋಗುವವರು ಯಾರಾದರೂ ಸಿಗ ಬಹುದು ಎಂದು ಕೊಂಡು ನಂದಾಪುರ ಗೇಟ್ ಕಡೆ ರಸ್ತೆ ದಾಟುವಾಗ ಚಳ್ಳಕೆರೆ ಕಡೆಯಿಂದ ಹಿರಿಯೂರು ಕಡೆಗೆ ಹೋಗುವ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕೆಂಚಮ್ಮ ಸ್ಥಳದಲ್ಲೇ ಮೃತ ಪಟ್ಟಿರುತ್ತಾಳೆ ವಿಷಯ ತಿಳಿದ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಕಾರು ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತೆ ಕೆಂಚಮ್ಮನ ಮಗ‌ ಧನಂಜಯ್ ಡಿಜಿಟಲ್ ಮೀಡಿಯಾದೊಂದಿ ಗೆ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿರುವುದರಿಂದ ಊರುಗಳ ಗೇಟ್ ಗಳು ತಿಳಿಯದಂತಾಗಿದೆ ಖಾಸಗಿ ಬಸ್ಸಿನವರು ಹಳ್ಖಿಗಳ ಸರ್ವೀಸ್ ರಸ್ತೆ ಬುಟ್ಟು ಮೇಲ್ಸೇತುವೆ ಮೇಲೆ ಹೋಗುವುದರಿಂದ ಬೆಂಗಳೂರು ಸೇರಿದಂತೆ ವಿವುಧ ಕಡೆ ಹೋದವರು ಊರುಗಳಿಗೆ ಮರಳಿ ಬರುವಾಗ ಮಿಸ್ಸಾಗುತ್ತದೆ ಆದರೆ ಬಸ್ಸಿವರು ನಮ್ಮ ತಾಯಿಯನ್ನು ಗೋಪನಹಳ್ಳಿ ಗೇಟ್ ಬಳಿ ಇಳಿಸಿದ್ದರೆ ನಮ್ಮ ತಾಯಿ ರಸ್ತೆ ಅಪಘಾತದಲ್ಲಿ ಮೃತ ಪಡುತ್ತಿರಲಿಲ್ಲ ಹೊಟ್ಟಪ್ಪನಹಳ್ಳಿ ಗೇಟ್ ಮೇಲ್ಸೇವೆ ಬಳಿ ಇಳಿಸಿದದರಿಂದ ರಾತ್ರಿ ಕತ್ತಲಲ್ಲಿ ರಸ್ತೆ ಮಿಸ್ಸಾಗಿ ರಸ್ತೆ ದಾಟುವಾಗ ಅಪಘಾತಕ್ಕೀಡಾಗುವಂತಾಗಿದೆ ಎಂದು ಅಳಲು ತೋಡಿಕೊಂಡರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page