ರಸ್ತೆ , ಚರಂಡಿ, ಸಾರ್ವಜನಿಕ ಮೀಸಲಿಟ್ಟ ಆಸ್ತಿಗಳು ಅಕ್ರಮ ಅಕ್ರಮ ಒತ್ತುವರಿ ತೆರವುಗೊಳಿಸಲು ಮುಂದಾಗದ ಅಧಿಕಾರಿಗಳು , ಜನಪ್ರತಿನಿಧಿಗಳು..

by | 21/04/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಏ 21
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ವ್ಯಾಪ್ತಿಯಲ್ಲಿ ಸರಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡರು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೆರವುಗೊಳಿಸಲು ಮುಂದಾಗುತ್ತಿಲ್ಲ.
ಹೌದು ಇದು ಸ್ಥಳಿ ಸಂಸ್ಥೆಗಳ ವ್ಯಾಪ್ತಿಯ ಗ್ರಾಮಠಾಣ ಭೂಮಿ, ರಸ್ತೆ ,ಚರಂಡಿ ಸೇರಿದಂತೆ ಸರಕಾರಿ ಆಸ್ತಿಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಒತ್ತುವರಿ ತೆರವುಗೊಳಿಸಿ ಮಾಹಿತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ನೀಡಿದ್ದರೂ ನಮಗೆ ಇದಕ್ಕು ಸಂಂಧವಿಲ್ಲ ಎಂಬಂತೆ ಸಂಬAಧಪಟ್ಟವರು ಜಾಣ ಕಿವುಡ, ಕುರುಡರಾಗಿದ್ದಾರೆ.
ಗ್ರಾಮೀಣ ಭಾಗದಲ್ಲಿ ಸುಮಾರು 20 ರ್ವಗಳ ಹಿಂದೆ ಪ್ರತಿ ಗಲ್ಲಿ . ಬೀದಿ ಹಾಗೂ ರಸ್ತೆಗಳಲ್ಲಿ ಎತ್ತಿನಗಾಡಿ, ವಾಹನಗಳು ಸಂಚರಿಸುತ್ತಿವು ಇತ್ತೀಚಿನ ದಿನಗಳಲ್ಲಿ ಚರಂಡಿ , ರಸ್ತೆಗಳನ್ನು ಬಿಡದೆ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವುದರಿಂದ ತುರ್ತು ವಾಹನ, ಬೈಕ್ ಸೇರಿದಂತೆ ಯಾವುದೇ ವಾಹನಗಳು ಸಂಚರಿಸದAತೆ ದೊಡ್ಡ ರಸ್ತೆಗಳು ಈಗ ಗಲ್ಲಿ ರಸ್ತೆಗಳಾಗಿರುವುದರಿಂದ ಬೆಂಕಿ ಅವಗಡಗಳು ಸಂಭವಿಸಿದರೆ, ತುರ್ತು ಚಿಕಿತ್ಸೆಗೆ ತುರ್ತುವಾಹನಗಳು ಬರಸಲು ಸಾಧ್ಯವಾಗುತ್ತಿಲ್ಲ ರಸ್ತೆ ,ಚರಂಡಿ ವಿಚಾರವಾಗಿ ಸಾಕಷ್ಟು ದೂರುಗಳು ಬಂದರೂ ಸಹ ಯಾರೂ ಪರಿಹಾರ ನೀಡುತ್ತಿಲ್ಲ ಒಬ್ಬರನ್ನು ನೋಡಿಕೊಂಡು ಒಬ್ಬರು ಒತ್ತುವರಿ ಮಾಡುವಲ್ಲಿ ಪೈಪೋಟಿಯಿಂದ ಮುಂದೆ ಬರುತ್ತಿದ್ದಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳು ಸರಕಾರದ ಆಸ್ತಿ ರಕ್ಷಣೆಗೆ ಇಚ್ಚಾಶಕ್ತಿ ತೋರುತ್ತಿಲ್ಲ ಎಂಬ ಆರೋಗಳು ಕೇಳಿ ಬರುತ್ತಿವೆ.
ಸುತ್ತೋಲೆಗೆ ಎಳ್ಳು ನೀರು.
ಗ್ರಾಪಂ ಅಧೀನದ ಆಸ್ತಿಗಳ ಒತ್ತುವರಿ ತೆರವುಗೊಳಿಸುವಂತೆ 2011ಮತ್ತು 2013 ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸ್ಪಷ್ಟ ನಿರ್ದೇಶನದೊಂದಿಗೆ ಸುತ್ತೋಲೆ ಹೊರಡಿಸಿತ್ತು. ಆದರೆ ಒತ್ತುವರಿ ಸಂಬಂಧ ಈವರೆಗೂ ಯಾವುದೇ ಒತ್ತುವರಿ ತೆರವುಗೊಳಸಿಲ್ಲ ಎಂಬ ಆರೋಗಳು ಕೇಳಿ ಬಂದಿವೆ.
ಒತ್ತುವರಿ ಆಗಿರುವ ಆಸ್ತಿಯನ್ನು ಪಿಡಿಒಗಳು ಗುರುತಿಸಿ ಅಲ್ಲಿ ನೋಟಿಸ್ ಬೋರ್ಡ್ ಅಳವಡಿಸಬೇಕು. ಒತ್ತುವರಿ ಪ್ರಕರಣಗಳಿಗೆ ಸಂಬAಧಿಸಿದAತೆ ಸರಕಾರದ ಅಧಿಸೂಚನೆಯನ್ವಯ ಕ್ರಮ ಕೈಗೊಳ್ಳಬೇಕು. ಗುರುತಿಸಲಾದ ಆಸ್ತಿ ಒತ್ತುವರಿ ಪ್ರಕರಣಗಳನ್ನು ಪಿಡಿಒ ಅವರು ಸಕ್ಷಮ ಪ್ರಾಧಿಕಾರವಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ಸಲ್ಲಿಸುವುದು. ನಿಯಮಾನುಸಾರ ಒತ್ತುವರಿಯಾದ ಆಸ್ತಿಗಳನ್ನು ತೆರವುಗೊಳಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ನಿಯಮಗಳಿವೆ ಈ ನಿಯಮಗಳನ್ನು ಯಾರೂ ಪಾಲನೆ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.


ಯಾವುದು ಆಸ್ತಿ?
ಗ್ರಾಮಠಾಣಾ, ಸಾರ್ವಜನಿಕ ರಸ್ತೆ, ಕಾಲುವೆ, ಕೆರೆಗಳು, ಆಟದ ಮೈದಾನ, ಉದ್ಯಾನ, ಸಾರ್ವಜನಿಕರ ಉಪಯೋಗಕ್ಕೆ ಇರಿಸಿದ ಜಾಗಗಳು, ಸ್ಮಶಾನ, ನಿವೇಶನ, ಚರಂಡಿ ಇತ್ಯಾದಿಗಳನ್ನು ಗ್ರಾಮ ಪಂಚಾಯಿತಿ ಆಸ್ತಿಗಳೆಂದು ಇಲಾಖೆ ಗುರುತಿಸಿದೆ.
ಮೀಸಲಿಟ್ಟ ಅರಣ್ಯ, ಸರಕಾರಿ ಗೋಮಾಳ, ಸ್ಮಶಾನ, ಬಂಜರಭೂಮಿ, ಸೇರಿದಂತೆ ಸರಕಾರಿ ಭೂಮಿಗಳು ಉಳ್ಳವರ ಪಾಲಾಗುತ್ತಿವೆ ಇನ್ನು ಎಷ್ಟೋ ಬಡಕುಟುಂಬಗಳಿಗೆ ನಿವೇಶನ ವಸತಿ ಹಾಗೂ ತುಂಡು ಭೂಮಿ ಇಲ್ಲದ ಕುಟುಂಬಗಳನ್ನು ಕಾಣ ಬಹುದು.
ಸರಕಾರದ ಆಸ್ತಿಗಳನ್ನು ಜನಪ್ರತಿನಿಧಿಗಳು ಅವರ ಹಿಂಬಾಲಕರು, ಕುಟುಂಬಸ್ಥರ ಹೆಸರಿನಲ್ಲೇ ಅಕ್ರಮ ಒತ್ತುವರಿಮಾಡಿಕೊಂಡಿದ್ದಾರೆ ಎಂಬುದು ಸಾರ್ವನಿಕರ ಆರೋಪವಾಗಿದೆ.


ಈಗ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿಗಳ ಸರ್ವೆ ಕಾರ್ಯ ನಡೆಯುತ್ತಿದ್ದು ರಸ್ತೆ, ಚರಂಡಿ, ಸಾರ್ವಜನಿಕ ಸದುಪಯೋಗಕ್ಕೆ ಮೀಸಲಿಟ್ಟ ಜಾಗ, ಗ್ರಾಪಂ ಆಸ್ತಿಗಳನ್ನು ಗುರುತಿಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ ಸರಕಾರಿ ಆಸ್ತಿಯನ್ನು ಈಗಲಾದರೂ ರಕ್ಷಣೆ ಮಾಡುವೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page