ರಸ್ತೆ , ಚರಂಡಿ, ಸಾರ್ವಜನಿಕ ಮೀಸಲಿಟ್ಟ ಆಸ್ತಿಗಳು ಅಕ್ರಮ ಅಕ್ರಮ ಒತ್ತುವರಿ ತೆರವುಗೊಳಿಸಲು ಮುಂದಾಗದ ಅಧಿಕಾರಿಗಳು , ಜನಪ್ರತಿನಿಧಿಗಳು..

by | 21/04/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಏ 21
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ವ್ಯಾಪ್ತಿಯಲ್ಲಿ ಸರಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡರು ತೆರವುಗೊಳಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೆರವುಗೊಳಿಸಲು ಮುಂದಾಗುತ್ತಿಲ್ಲ.
ಹೌದು ಇದು ಸ್ಥಳಿ ಸಂಸ್ಥೆಗಳ ವ್ಯಾಪ್ತಿಯ ಗ್ರಾಮಠಾಣ ಭೂಮಿ, ರಸ್ತೆ ,ಚರಂಡಿ ಸೇರಿದಂತೆ ಸರಕಾರಿ ಆಸ್ತಿಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಒತ್ತುವರಿ ತೆರವುಗೊಳಿಸಿ ಮಾಹಿತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ನೀಡಿದ್ದರೂ ನಮಗೆ ಇದಕ್ಕು ಸಂಂಧವಿಲ್ಲ ಎಂಬಂತೆ ಸಂಬAಧಪಟ್ಟವರು ಜಾಣ ಕಿವುಡ, ಕುರುಡರಾಗಿದ್ದಾರೆ.
ಗ್ರಾಮೀಣ ಭಾಗದಲ್ಲಿ ಸುಮಾರು 20 ರ್ವಗಳ ಹಿಂದೆ ಪ್ರತಿ ಗಲ್ಲಿ . ಬೀದಿ ಹಾಗೂ ರಸ್ತೆಗಳಲ್ಲಿ ಎತ್ತಿನಗಾಡಿ, ವಾಹನಗಳು ಸಂಚರಿಸುತ್ತಿವು ಇತ್ತೀಚಿನ ದಿನಗಳಲ್ಲಿ ಚರಂಡಿ , ರಸ್ತೆಗಳನ್ನು ಬಿಡದೆ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವುದರಿಂದ ತುರ್ತು ವಾಹನ, ಬೈಕ್ ಸೇರಿದಂತೆ ಯಾವುದೇ ವಾಹನಗಳು ಸಂಚರಿಸದAತೆ ದೊಡ್ಡ ರಸ್ತೆಗಳು ಈಗ ಗಲ್ಲಿ ರಸ್ತೆಗಳಾಗಿರುವುದರಿಂದ ಬೆಂಕಿ ಅವಗಡಗಳು ಸಂಭವಿಸಿದರೆ, ತುರ್ತು ಚಿಕಿತ್ಸೆಗೆ ತುರ್ತುವಾಹನಗಳು ಬರಸಲು ಸಾಧ್ಯವಾಗುತ್ತಿಲ್ಲ ರಸ್ತೆ ,ಚರಂಡಿ ವಿಚಾರವಾಗಿ ಸಾಕಷ್ಟು ದೂರುಗಳು ಬಂದರೂ ಸಹ ಯಾರೂ ಪರಿಹಾರ ನೀಡುತ್ತಿಲ್ಲ ಒಬ್ಬರನ್ನು ನೋಡಿಕೊಂಡು ಒಬ್ಬರು ಒತ್ತುವರಿ ಮಾಡುವಲ್ಲಿ ಪೈಪೋಟಿಯಿಂದ ಮುಂದೆ ಬರುತ್ತಿದ್ದಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳು ಸರಕಾರದ ಆಸ್ತಿ ರಕ್ಷಣೆಗೆ ಇಚ್ಚಾಶಕ್ತಿ ತೋರುತ್ತಿಲ್ಲ ಎಂಬ ಆರೋಗಳು ಕೇಳಿ ಬರುತ್ತಿವೆ.
ಸುತ್ತೋಲೆಗೆ ಎಳ್ಳು ನೀರು.
ಗ್ರಾಪಂ ಅಧೀನದ ಆಸ್ತಿಗಳ ಒತ್ತುವರಿ ತೆರವುಗೊಳಿಸುವಂತೆ 2011ಮತ್ತು 2013 ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸ್ಪಷ್ಟ ನಿರ್ದೇಶನದೊಂದಿಗೆ ಸುತ್ತೋಲೆ ಹೊರಡಿಸಿತ್ತು. ಆದರೆ ಒತ್ತುವರಿ ಸಂಬಂಧ ಈವರೆಗೂ ಯಾವುದೇ ಒತ್ತುವರಿ ತೆರವುಗೊಳಸಿಲ್ಲ ಎಂಬ ಆರೋಗಳು ಕೇಳಿ ಬಂದಿವೆ.
ಒತ್ತುವರಿ ಆಗಿರುವ ಆಸ್ತಿಯನ್ನು ಪಿಡಿಒಗಳು ಗುರುತಿಸಿ ಅಲ್ಲಿ ನೋಟಿಸ್ ಬೋರ್ಡ್ ಅಳವಡಿಸಬೇಕು. ಒತ್ತುವರಿ ಪ್ರಕರಣಗಳಿಗೆ ಸಂಬAಧಿಸಿದAತೆ ಸರಕಾರದ ಅಧಿಸೂಚನೆಯನ್ವಯ ಕ್ರಮ ಕೈಗೊಳ್ಳಬೇಕು. ಗುರುತಿಸಲಾದ ಆಸ್ತಿ ಒತ್ತುವರಿ ಪ್ರಕರಣಗಳನ್ನು ಪಿಡಿಒ ಅವರು ಸಕ್ಷಮ ಪ್ರಾಧಿಕಾರವಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರದಿ ಸಲ್ಲಿಸುವುದು. ನಿಯಮಾನುಸಾರ ಒತ್ತುವರಿಯಾದ ಆಸ್ತಿಗಳನ್ನು ತೆರವುಗೊಳಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ನಿಯಮಗಳಿವೆ ಈ ನಿಯಮಗಳನ್ನು ಯಾರೂ ಪಾಲನೆ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.


ಯಾವುದು ಆಸ್ತಿ?
ಗ್ರಾಮಠಾಣಾ, ಸಾರ್ವಜನಿಕ ರಸ್ತೆ, ಕಾಲುವೆ, ಕೆರೆಗಳು, ಆಟದ ಮೈದಾನ, ಉದ್ಯಾನ, ಸಾರ್ವಜನಿಕರ ಉಪಯೋಗಕ್ಕೆ ಇರಿಸಿದ ಜಾಗಗಳು, ಸ್ಮಶಾನ, ನಿವೇಶನ, ಚರಂಡಿ ಇತ್ಯಾದಿಗಳನ್ನು ಗ್ರಾಮ ಪಂಚಾಯಿತಿ ಆಸ್ತಿಗಳೆಂದು ಇಲಾಖೆ ಗುರುತಿಸಿದೆ.
ಮೀಸಲಿಟ್ಟ ಅರಣ್ಯ, ಸರಕಾರಿ ಗೋಮಾಳ, ಸ್ಮಶಾನ, ಬಂಜರಭೂಮಿ, ಸೇರಿದಂತೆ ಸರಕಾರಿ ಭೂಮಿಗಳು ಉಳ್ಳವರ ಪಾಲಾಗುತ್ತಿವೆ ಇನ್ನು ಎಷ್ಟೋ ಬಡಕುಟುಂಬಗಳಿಗೆ ನಿವೇಶನ ವಸತಿ ಹಾಗೂ ತುಂಡು ಭೂಮಿ ಇಲ್ಲದ ಕುಟುಂಬಗಳನ್ನು ಕಾಣ ಬಹುದು.
ಸರಕಾರದ ಆಸ್ತಿಗಳನ್ನು ಜನಪ್ರತಿನಿಧಿಗಳು ಅವರ ಹಿಂಬಾಲಕರು, ಕುಟುಂಬಸ್ಥರ ಹೆಸರಿನಲ್ಲೇ ಅಕ್ರಮ ಒತ್ತುವರಿಮಾಡಿಕೊಂಡಿದ್ದಾರೆ ಎಂಬುದು ಸಾರ್ವನಿಕರ ಆರೋಪವಾಗಿದೆ.


ಈಗ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿಗಳ ಸರ್ವೆ ಕಾರ್ಯ ನಡೆಯುತ್ತಿದ್ದು ರಸ್ತೆ, ಚರಂಡಿ, ಸಾರ್ವಜನಿಕ ಸದುಪಯೋಗಕ್ಕೆ ಮೀಸಲಿಟ್ಟ ಜಾಗ, ಗ್ರಾಪಂ ಆಸ್ತಿಗಳನ್ನು ಗುರುತಿಸಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ ಸರಕಾರಿ ಆಸ್ತಿಯನ್ನು ಈಗಲಾದರೂ ರಕ್ಷಣೆ ಮಾಡುವೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page