ಹಿರಿಯೂರು:
ತಾಲ್ಲೂಕಿನ ಆದಿವಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ರಸ್ತೆ ಮಧ್ಯೆ ವಿದ್ಯುತ್ ಕಂಬವಿದ್ದು ಯಾವ ಸಂದರ್ಭದಲ್ಲಿ ಬೇಕಾದರೂ ಅಪಾಯ ಸಂಭವಿಸಬಹುದಾಗಿದ್ದು ಈ ಕೂಡಲೆ ಅದನ್ನು ತೆರವುಗೊಳಿಸುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.
ಕಳೆದ 15 ವರ್ಷಗಳಿಂದ ಈ ಸಮಸ್ಯೆಯಿದ್ದು ಬೆಸ್ಕಾಂ ಮತ್ತು ಗ್ರಾಮ ಪಂಚಾಯಿತಿಗೆ ಈ ಬಗ್ಗೆ ತಿಳಿದಿದ್ದರೂ ನಿರ್ಲಕ್ಷ್ಯ ವಹಿಸಿರುತ್ತಾರೆ. ತುರ್ತು ಸಂದರ್ಭದಲ್ಲಿ ಆಟೋ ಸಹ ಬಾರದಂತಹ ಪರಿಸ್ಥಿತಿ ಇದೆ ಎಂಬುದಾಗಿ ಅಲ್ಲಿನ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ..
ವಿದ್ಯುತ್ ಕಂಬ ರಸ್ತೆಯ ಮಧ್ಯದಲ್ಲಿದ್ದು ವಾಹನಗಳ ಸಂಚಾರಕ್ಕೆ ಹಾಗೂ ಜನರು, ಹಾಗೂ ಪ್ರಾಣಿಗಳ ಓಡಾಟಕ್ಕೆ ತೊಂದರೆಯಾಗಿದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿಯಾದರೂ, ಯಾವುದೇ ರೀತಿಯ ಪ್ರಾಣಾಪಯದ ಘಟನೆಗಳು ಸಂಭವಿಸಬಹುದು ಎಂಬುದಾಗಿ ಅವರು ಆತಂಕ ವ್ಯಕ್ತಪಡಿಸಿದರು.
ಈ ಮೊದಲು ವಿದ್ಯುತ್ ಕಂಬ ರಸ್ತೆಯ ಮಧ್ಯದಲ್ಲಿದ್ದು ಅದನ್ನು ಬದಿಗೆ ಸರಿಸದೆ ಗುತ್ತಿಗೆದಾರರು ಸಿಸಿ ರಸ್ತೆ ನಿರ್ಮಿಸಲಾಗಿದ್ದು ಈ ರಸ್ತೆಯಲ್ಲಿ ಓಡಾಡುವ ವಾಹನಗಳು ಈ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಲ್ಲಿ ಭಾರಿ ದುರಂತವೇ ಸಂಭವಿಸಬುದಾಗಿದ್ದು ಆದ್ದರಿಂದ ಈ ಕೂಡಲೇ ವಿದ್ಯುತ್ ಕಂಬ ರಸ್ತೆ ಬದಿಗೆ ಸ್ಥಳಾಂತರಿಸುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments