ರಾಜಕೀಯ
ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಆಯ್ಕೆ ಸಾಧ್ಯತೆ ?.
ಮೊಳಕಾಲ್ಮೂರು ನ.28 ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಹೆಸರು ಪರಿಗಣಿಸುವ ಸಾಧ್ಯತೆ ?
ಈ ಬಗ್ಗೆ ಮೊಳಕಾಲ್ಮುರು ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.
ಮೊಳಕಾಲ್ಮೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಹೆಸರು ಪರಿಗಣಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಮುಖಂಡರು ಮಾತನಾಡತೊಡಗಿದ್ದಾರೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವು ಎಸ್ಟಿ ಮೀಸಲು ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರದಲ್ಲಿ ಬೇರೆ ಅನ್ಯ ಸಮುದಾಯದವರು ಅಧ್ಯಕ್ಷರಾಗಲು ಹಿಂಜರಿಯುತ್ತಿದ್ದಾರೆ ಕಾರಣ ಎಸ್.ಟಿ ಮೀಸಲು ಕ್ಷೇತ್ರ ಆಗಿರುವುದರಿಂದ ಹಣ ಶ್ರಮ ಮತ್ತು ಸಮಯವನ್ನು ವ್ಯರ್ಥ ಮಾಡಿಕೊಳ್ಳಲು ಸುತಾರಾಮ್ ಸಿದ್ಧವಿಲ್ಲ
ಈ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಪ್ರಭಾಕರ್ ಮ್ಯಾಸನಾಯಕರಿಗೆ ಎರಡು ಮಂಡಲಗಳ ಪೈಕಿ ಒಂದರಲ್ಲಿ ಜವಾಬ್ದಾರಿಯನ್ನು ನೀಡಲು ಪಕ್ಷ ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.
ಪ್ರಭಾಕರ ಮ್ಯಾಸನಾಯಕರು ಈ ಹಿಂದೆ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿಯೂ ಕೂಡ ಕೆಲಸ ಮಾಡಿದ್ದರು.
ಕಳೆದ ಎರಡು ಅವಧಿಗಳಿಂದಲೂ ಕೂಡ ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಟಿಕೆಟಿಗೆ ಇನ್ನಿಲ್ಲದ ಕಸರತ್ತು ಕೂಡ ನಡೆಸಿದ್ದರು.
ಪ್ರಭಾಕರ ಮ್ಯಾಸನಾಯಕರಿಗೆ ಈ ಬಾರಿ ಟಿಕೆಟ್ ಘೋಷಣೆ ಆಗಿಯೇ ಬಿಡ್ತು ಎಂಬ ಮಟ್ಟಕ್ಕೆ ಕ್ಷೇತ್ರದಲ್ಲಿ ವಾತಾವರಣ ನಿರ್ಮಾಣವಾಗಿತ್ತು.
ಕಳೆದ 2 ಅವಧಿಯಿಂದಲೂ ಕೂಡ ಎಸ್. ತಿಪ್ಪೇಸ್ವಾಮಿ ಮತ್ತು ಪ್ರಭಾಕರ ನಡುವೆ ನೇರ ನೇರ ಪೈಪೋಟಿ ಆಗಿತ್ತು. ಇಬ್ಬರ ಜಗಳ ಮೂರನೆಯವರಿಗೆ ಲಾಭ ಆಯ್ತು ಎಂಬಂತೆ ಅಳಿಯ ಪ್ರಭಾಕರ ಮಾವ ಎಸ್. ತಿಪ್ಪೇಸ್ವಾಮಿ ನಡುವಿನ ಜಗಳವನ್ನು ಲಾಭ ಮಾಡಿಕೊಂಡ ಶ್ರೀರಾಮುಲು ಕ್ಷೇತ್ರದ ಕಡೆ ಲಗ್ಗೆ ಇಟ್ಟಿದ್ದರು.ಆದರೆ ಈ ಬಾರಿ ಕ್ಷೇತ್ರದಲ್ಲಿ ತಮ್ಮದೇ ಆದಂತ ಪಡೆಯನ್ನು ಕಟ್ಟಿಕೊಂಡಿದ್ದ ಪ್ರಭಾಕರ ಮ್ಯಾಸನಾಯಕರು ಮಿಂಚಿನ ಸಂಚಾರ ನಡೆಸಿ ಕ್ಷೇತ್ರದಲ್ಲಿ ಮನೆ ಮಾತಾಗಿದ್ದರು.
ಸಂಘ ಪರಿವಾರದ ಹಿನ್ನೆಲೆ ಇರುವ ಪ್ರಭಾಕರ ಮ್ಯಾಸನಾಯಕರಿಗೆ ಹೈಕಮಾಂಡ್ ಮಟ್ಟದ ತನಕವೂ ಕೂಡ ಸಂಪರ್ಕ ಸಂಬಂಧ ಉತ್ತಮವಾಗಿತ್ತಾದರೂ ಕೊನೆ ಗಳಿಗೆಯಲ್ಲಿ ತಿಪ್ಪೇಸ್ವಾಮಿಗೆ ಪಕ್ಷ ಟಿಕೆಟ್ ನೀಡಿತು.
ಈ ಬಗ್ಗೆ ಎಲ್ಲೂ ಕೂಡ ಒಂದೇ ಒಂದು ಅಪಸ್ವರ ಮಾತನಾಡದೆ ತಿಪ್ಪೇಸ್ವಾಮಿಯವರ ಪರ ಕೆಲಸ ಮಾಡಿದ್ದರು
ಈಗಲೂ ಮ್ಯಾಸನಾಯಕರು ಕ್ಷೇತ್ರದಲ್ಲಿ ಜನರ ಕೈಗೆ ಸಿಗುತ್ತಾ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಪಕ್ಷ ಇವರ ಸಾಮರ್ಥ್ಯವನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ವೃತ್ತಿಯಲ್ಲಿ ವಾಣಿಜ್ಯೋದ್ಯಮಿಯಾಗಿರುವ
ಪ್ರಭಾಕರ ಮ್ಯಾಸನಾಯಕರು, ಆರ್ಥಿಕವಾಗಿಯೂ ಸಾಮಾಜಿಕವಾಗಿಯೂ ಸಬಲರಾಗಿರುವ ಯುವ ನಾಯಕ ಇದೆಲ್ಲವನ್ನು ಪಕ್ಷ ಗುರುತಿಸಿ ಈ ಬಾರಿ ನಾಯಕ ಸಮುದಾಯಕ್ಕೆ ಮಣೆ ಹಾಕುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ:ಸುನೀಲ್ ಕುಮಾರ್ ವಿಶ್ವಾಸ
ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂದಿಗೂ ಸಹ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಗೆ ಅವಿಭಾಜ್ಯ ಅಂಗವಾಗಿದ್ದ ದಾವಣಗೆರೆ ಜಿಲ್ಲೆ ಪ್ರತ್ಯೇಕ ಜಿಲ್ಲೆಯಾಗಿ ಬೇರ್ಪಟ್ಟ ತರುವಾಯ ಸಾಕಷ್ಟು ಅಭಿವೃದ್ಧಿ ಕಂಡಿದೆ ತುಮಕೂರು ಜಿಲ್ಲೆಯು ಸಹ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಯಾಗಿ ಅಭಿವೃದ್ಧಿ ಕಾಣುತ್ತಿದೆ ಆದರೆ ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ವಂಚಿತ ಜಿಲ್ಲೆಯಾಗಿ ಇಂದಿಗೂ ಅಭಿವೃದ್ಧಿಯಲ್ಲಿ ಶೂನ್ಯವಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಈ ಬಾರಿ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದು ಪಕ್ಷದ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ರಾಜ್ಯ ನಾಯಕರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಬಳಿ ಈಗಾಗಲೇ ಮಾತುಕತೆ ನಡೆದಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಹೀಗಾಗಿ ಪಕ್ಷ ಟಿಕೆಟ್ ನೀಡಿದಲ್ಲಿ ಪಕ್ಷದ ಹಿರಿಯ ಕಿರಿಯ ಸೇರಿದಂತೆ ಎಲ್ಲ ನಾಯಕರ ಕಾರ್ಯಕರ್ತರ ಬೆಂಬಲ ಪಡೆದು ಗೆಲುವು ಸಾಧಿಸಿ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿ ಮೆಡಿಕಲ್ ಕಾಲೇಜ್ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ಚಿಂತಕ ಮೈತ್ರಿ ದ್ಯಾಮಯ್ಯ ಮಾತನಾಡಿ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಸಂಸದರಾಗಿದ್ದ ಚಂದ್ರಪ್ಪನವರು ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಮಾಡದ ಹಿನ್ನೆಲೆಯಲ್ಲಿ 2019ರ ಚುನಾವಣೆಯಲ್ಲಿ ದಲಿತ ಸೇರಿದಂತೆ ಇತರೆ ಹಿಂದುಳಿದ ವರ್ಗಗಳು ಹಾಗೂ ಎಲ್ಲಾ ವರ್ಗದ ಮತದಾರರು ಬಿಜೆಪಿಯನ್ನು ಬೆಂಬಲಿಸಿ ಇಂದಿನ ಸಾಮಾಜಿಕ ಹಾಗೂ ಸಬಲೀಕರಣ ರಾಜ್ಯ ಖಾತೆ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರನ್ನು ಬೆಂಬಲಿಸಿದೆವು ಇದರಿಂದ ಜಿಲ್ಲೆಗೆ ಯಾವುದೇ ಪ್ರಯೋಜನವಾಗಿಲ್ಲ ಮಾಜಿ ಸಂಸದ ಶಶಿಕುಮಾರ್ ರವರು ಚಿತ್ರದುರ್ಗ ಜಿಲ್ಲೆಗೆ ಸಂಸದರಾದ ವೇಳೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ ಸಂಸದರ ಕಾರ್ಯವೈಕರಿ ಏನು ಎಂಬುದು ತೋರಿಸಿಕೊಟ್ಟಿದ್ದರು ಕೇಂದ್ರದ ಸಚಿವರಾಗಿ ನಾರಾಯಣಸ್ವಾಮಿ ಅವರು ಜಿಲ್ಲೆಗೆ ಯಾವುದೇ ಅನುದಾನ ತರದೆ ಮತದಾರರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸುನಿಲ್ ಕುಮಾರ್ ರವರಿಗೆ ಬೆಂಬಲ ನೀಡಿ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅನಂತಮೂರ್ತಿ ನಾಯಕ್ ಕೃಷ್ಣಮೂರ್ತಿ ತುಳಸಿ ರಮೇಶ್ ಎಂಎಂ ನಾಯಕ್ ಸಾಗರ್ ಸಂಜೀವ್ ಮೂರ್ತಿ ನಿರ್ಮಲ, ಸುಧಾ ಪರಮೇಶ್ ದ್ಯಾಮರಾಜ್ ಜಾಲಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಗ್ನೇಯಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್
ತುಮಕೂರು :
ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 45 ವಿಧಾನಸಭಾ ಕ್ಷೇತ್ರಗಳು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿದ್ದು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಬಂದಿರುವ ನಾನು ಶಿಕ್ಷಕರ ಕಷ್ಟ ಸುಖಗಳನ್ನು ಅರಿತಿದ್ದೇನೆ, ಶಿಕ್ಷಕ ಮತದಾರರು ಈ ಬಾರಿ ಬದಲಾವಣೆ ಬಯಸಲಿದ್ದಾರೆ ಎಂಬುದಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.
ನಗರದ ಸಿದ್ಧಗಂಗಾ ಮಠದ ಸಿದ್ಧಲಿಂಗಾ ಸ್ವಾಮೀಜಿಗಳನ್ನು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರೊಂದಿಗೆ ಮಂಗಳವಾರ ಭೇಟಿ ಮಾಡಿ, ಆಶೀರ್ವಾದ ಪಡೆದು ನಂತರ ಅವರು ಮಾತನಾಡಿದರು.
ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಸರತ್ತು ನಡೆಸಿವೆ, ಅದಕ್ಕೂ ಮೊದಲೇ ಕಾಂಗ್ರೆಸ್ಸನ್ನು ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ವಿಧಾನಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇನ್ನೂ ಆರು ತಿಂಗಳು ಬಾಕಿ ಇದ್ದು, ಈಗಾಗಲೇ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪ್ರಚಾರ ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಕೃಷಿಕ ಸಮಾಜದ ಕಾರ್ಯಾಧ್ಯಕ್ಷ ಪಾಪಣ್ಣ, ಲೋಕೇಶಪ್ಪ, ಸುರೇಶ್ ಇತರರು ಉಪಸ್ಥಿತರಿದ್ದರು.
ಆಗ್ನೇಯಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭಿಸಿದ
ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್
ತುಮಕೂರು :
ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 45 ವಿಧಾನಸಭಾ ಕ್ಷೇತ್ರಗಳು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿದ್ದು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಬಂದಿರುವ ನಾನು ಶಿಕ್ಷಕರ ಕಷ್ಟ ಸುಖಗಳನ್ನು ಅರಿತಿದ್ದೇನೆ, ಶಿಕ್ಷಕ ಮತದಾರರು ಈ ಬಾರಿ ಬದಲಾವಣೆ ಬಯಸಲಿದ್ದಾರೆ ಎಂಬುದಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.
ನಗರದ ಸಿದ್ಧಗಂಗಾ ಮಠದ ಸಿದ್ಧಲಿಂಗಾ ಸ್ವಾಮೀಜಿಗಳನ್ನು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರೊಂದಿಗೆ ಮಂಗಳವಾರ ಭೇಟಿ ಮಾಡಿ, ಆಶೀರ್ವಾದ ಪಡೆದು ನಂತರ ಅವರು ಮಾತನಾಡಿದರು.
ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಸರತ್ತು ನಡೆಸಿವೆ, ಅದಕ್ಕೂ ಮೊದಲೇ ಕಾಂಗ್ರೆಸ್ಸನ್ನು ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ವಿಧಾನಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇನ್ನೂ ಆರು ತಿಂಗಳು ಬಾಕಿ ಇದ್ದು, ಈಗಾಗಲೇ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪ್ರಚಾರ ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಕೃಷಿಕ ಸಮಾಜದ ಕಾರ್ಯಾಧ್ಯಕ್ಷ ಪಾಪಣ್ಣ, ಲೋಕೇಶಪ್ಪ, ಸುರೇಶ್ ಇತರರು ಉಪಸ್ಥಿತರಿದ್ದರು.
ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಭೂಮಾಫಿಯಾ,ಮನಿಲಾಂಡ್ರಿಂಗ್ ಗಳ ಹಸ್ತಕ್ಷೇಪದಿಂದ ರಾಜಕೀಯ ಮಲಿನವಾಗಿದೆ.ಮುಂದಿನದಿನಗಳಲ್ಲಿ ವಕೀಲರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜೆಜೆಹಟ್ಟಿ ತಿಪ್ಪೇಸ್ವಾಮಿ.
ಚಳ್ಳಕೆರೆ ನ.,20 ಎಲ್ಲಿ ಕಾನೂನು ಇರುತ್ತದೆಯೋ ಅಲ್ಲಿ ಲೋಪದೋಶ ಇರುವುದಿಲ್ಲ, ಎಲ್ಲಿ ಲೋಪದೋಷವಿರುತ್ತದೆಯೋ ಅಲ್ಲಿ ವಕೀಲರಿರುತ್ತಾರೆ. ಎಂದು ಲೋಕಸಭಾ ಚುನಾವಣೆಯ ಪ್ರಭಲ ಅಕಾಂಕ್ಷಿ ಜೆಜೆಹಟ್ಟಿ ತಿಪ್ಪೇಸ್ವಾಮಿ ಹೇಳಿದರು.

ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಮಧ್ಯೆ ಭುಗಿಲೆದ್ದ ಅತೃಪ್ತಿ,
ಕೋಲಾರ
ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಮಧ್ಯೆ ಭುಗಿಲೆದ್ದ ಅತೃಪ್ತಿ,
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅಸಮಾಧಾನ,
ಕೋಲಾರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸದಿರಲು ರಮೇಶ್ ಕುಮಾರ್ ಕಾರಣ,
ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಪ್ರೇರೇಪಿಸಿದ್ದ ರಮೇಶ್ ಕುಮಾರ್,
ಕೋಲಾರ ಕ್ಷೇತ್ರದಲ್ಲಿ ನಾನು ಹಾಲಿ ಶಾಸಕನಾಗಿದ್ದಾಗಲೇ ಇದು ಪ್ರಸ್ತಾಪವಾಗಿತ್ತು,
ಶ್ರೀನಿವಾಸಪುರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ಅವಕಾಶವಿತ್ತು,
ಆದರೆ, ರಮೇಶ್ ಕುಮಾರ್ ಅಲ್ಲಿನ ಶಾಸಕರಾಗಿದ್ದರಿಂದ ಕೋಲಾರದಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದ್ದರು,
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಖಚಿತವಾದ್ದರಿಂದ ನಾನೂ ಒಪ್ಪಿಕೊಂಡೆ,
ಆದರೆ, ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲಿಲ್ಲವಾದರೂ ನನಗೆ ಅವಕಾಶ ಸಿಗಲಿಲ್ಲ,
ನನ್ನ ಬಳಿ ಎಲೆಕ್ಷನ್ ಗೆ ಕಾಸಿಲ್ಲವಾದ್ದರಿಂದ ಬೇರೆಯವರನ್ನು ಕೋಲಾರ ಕ್ಷೇತ್ರದಲ್ಲಿ ಸ್ಪರ್ದೆಗೆ ಇಳಿಸಿದರು,
-ರಮೇಶ್ ಕುಮಾರ್ ಸೂಚಿಸಿದವರನ್ನು ಕೋಲಾರ ಕ್ಷೇತ್ರದ ಅಭ್ಯರ್ಥಿಯಾಗಿ ಮಾಡಲಾಯಿತು,
ನನ್ನ ರಾಜಕೀಯ ವನವಾಸಕ್ಕೆ ರಮೇಶ್ ಕುಮಾರ್ ನೇರ ಕಾರಣ ಎಂದು ಪರೋಕ್ಷ ಆರೋಪ,
ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬ್ರದರ್ಸ್ ಕಾಂಗ್ರೆಸ್ ಗೆ ಬತ್ತಾರಾ..?
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಜೆಡಿಎಸ್ ಪಕ್ಷದಿಂದ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನೂರು ದಿನಕ್ಕೂ ಹೆಚ್ಚು ದಿನಗಳು ಕಳೆದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆ ಪಕ್ಷದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಿತ್ರದುರ್ಗ ನಗರರಕ್ಕೆ ವಿವಿಧ ಕಾರ್ಯಮಗಳಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಯ ರ ಅಣ್ಣ ಚಳ್ಳಕೆರೆ ನಗರಸಭೆ ಸದಸ್ಯ ಕೆ.ಸಿ.ನಾಗಾಜ್ ಸಚಿವರೊಂದಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಕುಳಿತಿರುವ ಪೋಟೋ ವೈರಲ್ ಆಗಿದ್ದು ಇವರೂ ಸಹ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಪುಷ್ಟಿ ನೀಡಿದಂತಾಗಿದೆ. ಚಳ್ಳಕೆರೆ ನಗರದಭೆ ಕೆಲ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು ಇವತ್ತಿನ ಈ ಪೋಟೋ ನೋಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ನಂಬಿಕೆ ಜನರಲ್ಲಿ ಮೂಡಿದ್ದು ಇವರ ಹಿಂದೆ ಯಾವ ಸದಸ್ಯರು ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬುದಷ್ಟೇ ತಿಳಿಯ ಬೇಕಿದೆ.
ಎಂಎಲ್ ಸಿ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ರಿಗೆ ಟಿಕೆಟ್ ಘೋಷಣೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ ಪೂರ್ಣಿಮಾಶ್ರೀನಿವಾಸ್
ಬೆಂಗಳೂರು :
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಜಂಟಿಯಾಗಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿದಕ್ಕೆ ಧನ್ಯವಾದಗಳನ್ನು ಅರ್ಪಿಸಿದರಲ್ಲದೆ, ಹೂ ಗುಚ್ಛ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ರವರು ಕಾಂಗ್ರೆಸ್ ಪಕ್ಷ ತಮಗೆ ಟಿಕೆಟ್ ನೀಡಿದ್ದಕ್ಕೆ ಹೂ ಗುಚ್ಛ ನೀಡಿ ಅಭಿನಂದಿಸಿ, ಗೌರವಿಸಿದರು.
ಈ ಕುರಿತು ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಪಕ್ಷವು ತಮ್ಮನ್ನು ಗುರುತಿಸಿ ಆಗ್ನೇಯ ಕ್ಷೇತ್ರಕ್ಕೆ ಟಿಕೆಟ್ ನೀಡಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದಲ್ಲದೆ, ಹಿಂದುಳಿದ ವರ್ಗಕ್ಕೆ ಸೇರಿದ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅತ್ಯಂತ ಸಂತಸ ತಂದಿದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಕುಂಟರಾಮನಹಳ್ಳಿ ಗೋಪಿನಾಥ್, ಗೋಪಾಲ್ ಇತರರು ಹಾಜರಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ ಜಿಲ್ಲೆಯಲ್ಲಿ 14,01,830 ಮತದಾರರು, 1661 ಮತಗಟ್ಟೆಗಳು : 46906 ಯುವ ಮತದಾರರ ಸೇರ್ಪಡೆ
ಚಿತ್ರದುರ್ಗ ಅ.27:
ಚುನಾವಣೆ ಆಯೋಗದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ವಿಧಾನಸಭಾವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 14,01,830 ಮತದಾರರಿದ್ದು, 1661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅರ್ಹರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಡಿ. 09 ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.
ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 6,98,024 ಪುರುಷ ಮತದಾರರು, 7,03,728 ಮಹಿಳಾ ಮತದಾರರು ಹಾಗೂ 78 ಇತರೆ ಮತದಾರರು ಸೇರಿದಂತೆ ಒಟ್ಟು 14,01,830 ಮತದಾರರಿದ್ದಾರೆ. ಮತಗಟ್ಟೆಗಳ ಸಂಖ್ಯೆ 1648 ರಿಂದ 1661ಕ್ಕೆ ಹೆಚ್ಚಿಸಲಾಗಿದೆ. ಯಾವುದೇ ಅರ್ಹ ಮತದಾರರು ಮತಪಟ್ಟಿಯಿಂದ ಹೊರಗೊಳಿಯಬಾರದು. ಈ ಉದ್ದೇಶದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಅರ್ಹ ಯುವಕ ಯುವತಿಯರು, ಸಾಮಾಜಿಕವಾಗಿ ಹಿಂದುಳಿದವರು, ಪರಿಶಿಷ್ಟ ಪಂಗಡ, ಅಲೆಮಾರಿಗಳು, ಲಿಂಗ ಪರಿವರ್ತಿತರು, ತೃತೀಯ ಲಿಂಗಿಗಳು, ದಮನಿತ ಮಹಿಳೆಯರು, ವಿಶೇಷ ಚೇತನರು, ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವವರನ್ನು ಪಟ್ಟಿಯಲ್ಲಿ ಸೇರಿಸಲು ವಿಶೇಷ ಆದ್ಯತೆ ನೀಡಲಾಗುವುದು. ಈ ಕುರಿತು ಜಾಗೃತಿ ಮೂಡಿಸಲು ಪಾಠಶಾಲೆ/ಚುನಾವಣೆ ಜಾಗೃತಿ ಸಂಘ, ಮತದಾರರ ಸಾಕ್ಷರತಾ ಸಂಘ, ಸ್ವಯಂ ಸೇವಕರು, ಸದಸ್ಯರ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುವುದು. ಇದರೊಂದಿಗೆ ಯುವ ಮತದಾರರನ್ನು ಸೆಳೆಯಲು ಫಲಕಗಳ ಪ್ರದರ್ಶನ, ಜಾಥಾ, ಸೈಕಲ್ ಹಾಗೂ ಬೈಕ್ ರ್ಯಾಲಿಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಅ. 27 ರಿಂದ ಆರಂಭಗೊಂಡಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ. ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಡಿ. 26 ರೊಳಗೆ ತೀರ್ಮಾನಿಸಲಾಗುವುದು. 2024 ರ ಜನವರಿ 05 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಣೆಗೊಳ್ಳಲಿದೆ ಎಂದರು. ಹೆಸರು ನೊಂದಣಿಗಾಗಿ ನವೆಂಬರ್ 18 ಹಾಗೂ 19, ಡಿಸೆಂಬರ್ 2 ಹಾಗೂ 3ನೇ ತಾರೀಖಿನಂದು ವಿಶೇಷ ಕಾರ್ಯಾಚರಣೆ ನಡೆಸಲಾಗುವುದು. ಈಗಾಗಲೇ ಜಿಲ್ಲೆಯಾದ್ಯಂತ ಜುಲೈ 21 ರಿಂದ ಆಗಸ್ಟ್ 21 ರವರೆಗೆ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ತರಲಾಗಿದೆ. 18 ವರ್ಷ ತುಂಬುವ ಯುವ ಮತದಾರರು ವರ್ಷದ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಹಾಗೂ 1ನೇ ಅಕ್ಟೋಬರ್ಗೆ 18 ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಹೆಸರು ಸೇರಿಸಲು ನಮೂನೆ-6, ಹೆಸರುಗಳನ್ನು ಕೈಬಿಡಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ-7, ಮತದಾರ ಪಟ್ಟಿಯಲ್ಲಿ ತಿದ್ದುಪಡಿ, ವರ್ಗಾವಣೆ, ಎಪಿಕ್ ಕಾರ್ಡು ಬದಲಾವಣೆ ಹಾಗೂ ವಿಕಲಚೇತನ ಮತದಾರರನ್ನು ಗುರುತು ಮಾಡಲು ನಮೂನೆ-8 ಹಾಗೂ ಆಧಾರ್ ಜೋಡಣೆ ಮಾಡಲು ನಮೂನೆ-6ಬಿ ಗಳನ್ನು ತುಂಬಿ ಮತದಾನ ಕೇಂದ್ರ ಅಥವಾ ತಾಲ್ಲೂಕು ಕಚೇರಿ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಯೂ ಸಲ್ಲಿಸಬಹುದು. ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸಬೇಕು, ಜಿಲ್ಲೆಯಲ್ಲಿ ಈಗಾಗಲೆ ಶೇ. 89 ರಷ್ಟು ಮತದಾರರು ಆಧಾರ್ ಜೋಡಣೆ ಮಾಡಿಸಿದ್ದಾರೆ. ಅರ್ಜಿಗಳನ್ನು ಗಿಊಂ (ಗಿoಣeಡಿ heಟಠಿ ಟiಟಿe) ನಲ್ಲಿ ಆನ್ಲೈನ್ ಮೂಲಕವು ಸಲ್ಲಿಸಬಹುದು ಎಂದರು.
ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯತಿ ಕಚೇರಿ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿ, ತಾಲ್ಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಗೆ ಪ್ರಚುರ ಪಡಿಸಲು ಪ್ರಕಟಿಸಲಾಗಿದೆ. ವೆಬ್ ಸೈಟ್ www.ceokarnataka.kar.nic.in ಮತ್ತು https://chitradurga.nic.in ನಲ್ಲಿಯೂ ಸಹ ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ.
46,906 ಯುವ ಮತದಾರರು ನೊಂದಣಿ :
ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಜಿಲೆಯಾದ್ಯಂತ 46,906 ಯುವ ಮತದಾರರ ನೊಂದಣಿ ಮಾಡಲಾಗಿದೆ. ಇದರಲ್ಲಿ 25,152 ಪುರುಷ, 21,751 ಮಹಿಳಾ ಹಾಗೂ 03- ಇತರೆ ಯುವ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಈ ಬಾರಿ ಯುವ ಮತದಾರರನ್ನು ನೊಂದಣಿ ಮಾಡುವ ಸಲುವಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಸಹಾಯಕ ಮತಪಟ್ಟಿ ನೊಂದಣಿ ಅಧಿಕಾರಿಯನ್ನಾಗಿ (ಎಇಆರ್ಓ) ಆಗಿ ನೇಮಿಸಲಾಗಿದೆ. ಮುಖ್ಯವಾಗಿ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರ ನೊಂದಣಿಗೆ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ 80 ವರ್ಷ ದಾಟಿದ 30,000 ಮತದಾರರು ಇದ್ದಾರೆ. ಇದರಲ್ಲಿ 100 ವರ್ಷ ದಾಟಿದ 86 ಮತದಾರರು ಇದ್ದು ಇವರನ್ನು ಸ್ವಾತಂತ್ರ್ಯದಿನಾಚರಣೆ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದರು.
ಮತಪಟ್ಟಿಯಲ್ಲಿ ಹೆಸರು ನೊಂದಾಯಿಸಲು ವಯಸ್ಸಿನ ಧೃಡೀಕರಣಕ್ಕಾಗಿ ಜನನ ಪ್ರಮಾಣ ಪತ್ರ, ಆಧಾರ್, ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಅಂಕಪಟ್ಟಿ, ಪಾಸ್ ಪೋರ್ಟ್ ದಾಖಲೆಗಳನ್ನು ನೀಡಬಹುದು. ವಿಳಾಸದ ಧೃಡೀಕರಣಕ್ಕಾಗಿ ನೀರು, ವಿದ್ಯುತ್, ಗ್ಯಾಸ್ ಸಂಪರ್ಕ ಒಂದು ವರ್ಷದ ಬಿಲ್ಗಳು, ಆಧಾರ್ ಕಾರ್ಡು, ಬ್ಯಾಂಕ್ ಪಾಸ್ ಬುಕ್, ಪಾಸ್ಪೋರ್ಟ್, ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆ, ನೊಂದಾಯಿತ ಬಾಡಿಗೆ ಭೋಗ್ಯ ಹಾಗೂ ಕ್ರಯಪತ್ರದ ದಾಖಲೆಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ -08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದು. ಹೊರ ರಾಜ್ಯದ ಮತದಾರರು ಇಲ್ಲಿನ ಮತಪಟ್ಟಿಗೆ ಸೇರ್ಪಡೆಗೊಳ್ಳಲು, ಮೂಲ ಮತದಾರರ ನೊಂದಣಿ ಇರುವೆಡೆ ನಮೂನೆ-8 ರಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವೇಳೆ ಜಿಲ್ಲೆಯ ಮತಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅರ್ಜಿ ಆಂತರಿಕವಾಗಿ ಸೃಜನೆಗೊಳ್ಳುವುದು. ಇದರ ಆಧಾರದಲ್ಲಿ ಅಧಿಕಾರಿಗಳು ವಿಳಾಸಕ್ಕೆ ಭೇಟಿ ನೀಡಿ ಪರಿಶೀಲಿಸಿ ಇಲ್ಲಿನ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವರು. ನಂತರದಲ್ಲಿ ಮೂಲ ಮತಪಟ್ಟಿಯಲ್ಲಿ ಹೆಸರು ನಿಷ್ಕ್ರಮಣೆಗೊಳ್ಳುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು.
ರಾಜಕೀಯ ಪಕ್ಷಗಳೊಂದಿಗೆ ಸಭೆ ಕರಡು ಮತದಾರರ ಪಟ್ಟಿ ಪ್ರಕಟ : ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಡಿ. 09 ಕೊನೆಯ ದಿನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.27:
ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಶುಕ್ರವಾರದಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಕಟಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿಗಳು ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಶುಕ್ರವಾರದಂದು ಪಟ್ಟಿ ಪ್ರಕಟಿಸಲಾಗಿದೆ, ಇದೀಗ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವೂ ಕೂಡ ಪ್ರಾರಂಭವಾಗಿದ್ದು, ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ. ಮತದಾರರ ನೊಂದಣಿಗೆ ಸಂಬಂಧಿಸಿದಂತೆ ನವೆಂಬರ್ 18, 19, ಡಿಸೆಂಬರ್ 02 ಮತ್ತು 03 ರಂದು ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ಸದ್ಯ ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, 1401830 ಒಟ್ಟು ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಅರ್ಹರಿರುವ ಎಲ್ಲರನ್ನೂ ಸೇರಿಸಲು, ವಿವಿಧ ರಾಜಕೀಯ ಪಕ್ಷಗಳು ಕೂಡ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ನೀಡಬೇಕು, ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಕಾರ್ತಿಕ್, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನನ್ನನ್ನು ಶಾಸಕಿ, ಮಾಜಿ ಶಾಸಕಿ ಎನ್ನುವುದಕ್ಕಿಂತ ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪರ ಮಗಳು ಅಂತಾರೆ ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್.
ಬೆಂಗಳೂರು : ನನ್ನನ್ನು ಶಾಸಕಿ, ಮಾಜಿ ಶಾಸಕಿ ಎನ್ನುವುದಕ್ಕಿಂತ ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪರ ಮಗಳು ಅಂತಾರೆ. ಕೆಲವು ವಿಚಾರದಿಂದ ತಂದೆ ಕಾಂಗ್ರೆಸ್ ಪಕ್ಷ ಬಿಡುವಂತಾಯಿತು ಎಂದು ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಜೊತೆ ಮತ್ತೊಂದು ಪಯಣ ಶುರು ಆಗ್ತಿದೆ. ಸ್ವಾಗತಿಸಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡುತ್ತೇನೆ. ಹಿಂದುಳಿದ ವರ್ಗಗಳ ಸಮುದಾಯದಿಂದ ಬಂದವರಿಗೆ ರಾಜಕೀಯ ಸ್ಥಾನಮಾನ ಸಿಕ್ತಿಲ್ಲ. ಈ ಎಲ್ಲಾ ಸಮುದಾಯಕ್ಕೆ ಆಶೀರ್ವಾದ ಸದಾ ಇರಬೇಕು ಎಂದು ಹೇಳಿದರು.
ಭಾರತ್ ಮಾತಾಕಿ ಜೈ ಅನ್ನಬೇಕು
ಡಿ.ಟಿ ಶ್ರೀನಿವಾಸ್ ಮಾತನಾಡಿ, ದೇಶದ 140 ಕೋಟಿ ಜನ ಖಾಸಗಿ ಸ್ವತ್ತು ಆಗಬಾರದು. ಅದಕ್ಕೆ ಭಾರತ್ ಮಾತಾಕಿ ಜೈ ಅನ್ನಬೇಕು. ಕಾಂಗ್ರೆಸ್ ಪಕ್ಷಕ್ಕೆ ವಾಪಾಸ್ ಬಂದಿದ್ದೇವೆ. ದೊಡ್ಡ ಬೇಡಿಕೆ ಏನಿಲ್ಲ, ನಮ್ಮ ಸಮುದಾಯದಲ್ಲಿ ಹಟ್ಟಿಗಳಲ್ಲಿ ವಾಸಿಸುತ್ತಿರೋರನ್ನ ಎಸ್ಟಿಗೆ ಸೇರಿಸಬೇಕು. ಅದಕ್ಕಾಗಿ ಪಟ್ಟಿ ಕೇಂದ್ರಕ್ಕೆ ಹೋಗಿದೆ. ಕನಿಷ್ಟ ಜೀವನ ನಡೆಸುತ್ತಿರುವ ಗೊಲ್ಲ, ಹೆಳವ ಸೇರಿ ಹಲವು ಸಮುದಾಯಕ್ಕೆ ನ್ಯಾಯಸಿಗಬೇಕು. ಕುಲಶಾಸ್ತ್ರೀಯ ಅಧ್ಯಯನಕ್ಕೆ 2 ಕೋಟಿಯಿಂದ 5 ಕೋಟಿಗೆ ಏರಿಸಿ ಪ್ರವರ್ಗಗಳ ಕುಲಶಾಸ್ರ್ತೀಯ ಅಧ್ಯಯನ ಆಗಬೇಕು ಎಂದು ಅವಲೊತ್ತುಕೊಂಡರು.
