ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿ.ಎಂ.ಸಿದ್ದರಾಮಯ್ಯ .

by | 17/12/23 | ಕರ್ನಾಟಕ


ಗದಗ ಡಿ17 ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿ.ಎಂ.ಸಿದ್ದರಾಮಯ್ಯ ಹೇಳಿದರು.

ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ಮೊದಲು ವರದಿ ಬರಲಿ ನೋಡೋಣ.

ಶಕ್ತಿ ಯೋಜನೆಗೆ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿ ಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ.
ಅಭಿವೃದ್ಧಿ ಕೆಲಸಗಳು ನಿಂತಿಲ್ಲ.

ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ.

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ.

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು.

ಕ್ಯಾಶ್ ಕಾರ್ಡ್ ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು.

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page