ಬೆಳಗಾವಿ- ಸುವರ್ಣ ಸೌದದ ಸಭಾಂಗಣದ ಕೊಠಡಿಯಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿರವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರಗಾಲದ ಬಗ್ಗೆ ಚರ್ಚಿಸಲಾಯಿತು ಈ ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಭಾಗವಹಿಸಿ ತಾಲೂಕಿನ ಬರ ಪರಿಸ್ಥಿತಿಯ ಬಗ್ಗೆ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕರು ಚಳ್ಳಕೆರೆ ಮೊಳಕಾಲ್ಮೂರು ಚಿತ್ರದುರ್ಗ ಸೇರಿದಂತೆ ಜಿಲ್ಲೆಯ ತಾಲೂಕುಗಳಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿದ್ದು ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದ್ದಾರೆ ಶೀಘ್ರವಾಗಿ ಗೋಶಾಲೆಗಳನ್ನು ತೆರೆದು ಗೋವುಗಳಿಗೆ ಮೇವು ವಿತರಣೆ ಮಾಡುವುದು ದೇವರ ಹಸುಗಳಿಗೆ ಮೇವು ವಿತರಣೆ ಬರಗಾಲದಿಂದ ಬೆಳೆ ಕಳೆದುಕೊಂಡ ರೈತರಿಗೆ ಬೆಳೆ ಪರಿಹಾರ ಬೆಳೆ ವಿಮೆಗಳ ಮಂಜೂರಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜ್ಯದ ಅನೇಕ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ವರುಣನ ಆವಕೃಪೆಯಿಂದಾಗಿ ಬರ ಆವರಿಸಿದ್ದು ಸರ್ಕಾರ ರೈತರ ಹಿತ ಕಾಯಲು ಬದ್ಧವಾಗಿದೆ ಬೆಳೆ ಪರಿಹಾರ ವಿತರಿಸುವುದು ಬೆಳೆ ವಿಮೆಗಳ ಸಾಧಕ ಬಾದಕಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ ಶರಣಪ್ರಕಾಶ್ ಪಾಟೀಲ್ ಪ್ರಿಯಾಂಕ ಖರ್ಗೆ ಶರಣಬಸಪ್ಪ ಗೌಡ ದರ್ಶನಾಪುರ ಶಾಸಕರಾದ ಕೋನಾರೆಡ್ಡಿ ದರ್ಶನ್ ಪುಟ್ಟಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.
0 Comments