ಚಳ್ಳಕೆರೆ: ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಬಡ, ಮಧ್ಯಮ, ಮತ್ತು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಸಂಚರಿಸಲು ಅನುಕೂಲ ಮಾಡಿಕೊಟ್ಟಿದೆ ಆದರೆ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಖಾಸಗಿ ಬಸ್ ಗಳ ಮಾಲೀಕರ ಜೊತೆ ಶಾಮೀಲಾಗಿ ಪರವಾನಗಿ ಇದ್ದರೂ ಸಹ ಸಾರಿಗೆ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಪಿ ಭೂತಯ್ಯ ಆಗ್ರಹಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ತಾಲೂಕಿನಲ್ಲಿ ಕೆಎಸ್ಆರ್ಟಿಸಿ ಘಟಕವಿದ್ದರೂ ಸಹ ಚಳ್ಳಕೆರೆಯಿಂದ ನಾಯಕನಹಟ್ಟಿ ಜಗಳೂರು ಮಾರ್ಗವಾಗಿ ದಾವಣಗೆರೆಗೆ ಸರ್ಕಾರಿ ಬಸ್ಸುಗಳನ್ನು ಕಾರ್ಯಾಚರಣೆ ಗೊಳಿಸಿಲ್ಲ ಅಲ್ಲದೆ ಕೊಟ್ಟೂರು, ಬೆಂಗಳೂರು ಚಿಕ್ಕಹಳ್ಳಿ ದಾವಣಗೆರೆ ಬಸ್ಸುಗಳನ್ನು ಕಾರ್ಯಚರಣೆಗೊಳಿಸದೆ ಇರುವುದರಿಂದ ಖಾಸಗಿ ಬಸ್ಸುಗಳ ಕಾರುಬಾರು ಹೆಚ್ಚಾಗಿದ್ದು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೆ ಪಾವಗಡ ಘಟಕದಿಂದ ರೂಟ್ ನಂಬರ್ 47 ,48, ಎಬಿ,1/2 66 ಈ ಬಸ್ಸುಗಳು ಈಗಾಗಲೇ ನಿಲುಗಡೆಯಾಗಿದ್ದು ತಕ್ಷಣವೇ ಒಂದು ವಾರದೊಳಗಾಗಿ ಎಲ್ಲ ಮಾರ್ಗಗಳಲ್ಲಿ ಕಾರ್ಯಚರಣೆಗೊಳಿಸದಿದ್ದಲ್ಲಿ ಚಿತ್ರದುರ್ಗ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಛೇರಿ ಮುಂದೆ ರೈತ ಸಂಘ ಹಾಗೂ ಮಹಿಳಾ ಸಂಘಗಳು ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.
0 Comments