ರಾಜ್ಯ ಸರಕಾರದಿಂದ ಎರಡು ಸಾವಿರ ಬೆಳೆ ಪರಿಹಾರ ಘೋಷಣೆ.

by | 30/11/23 | ಕರ್ನಾಟಕ


ಬೆಂಗಳೂರು ನ.30 ಬರ ಪರಿಹಾರ ಸಂಬಂಧ ಕೇಂ ದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.
ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ.
ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ.
ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.
ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ.
ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ.
– ಮುಖ್ಯಮಂತ್ರಿ Siddaramaiah

#ಬರನಿರ್ವಹಣೆ #DroughtReliefFund

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page