ಚಳ್ಳಕೆರೆ: ಸರ್ಕಾರದ ಯೋಜನೆಗಳು ಸಮರ್ಪಕವಾದ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಬೇಕಾದರೆ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ಸೇವೆ ಅಗತ್ಯವಾದುದು ಕಾರ್ಯಾಂಗ ಹಾಗೂ ಶಾಸಕಾಂಗ ಜೊತೆಯಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಸಂಘದ ಸಮುದಾಯ ಭವನದ ಶಂಕುಸ್ಥಾಪನೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸರ್ವ ಸದಸ್ಯರ ಸಭೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ನೌಕರರು ದಿನನಿತ್ಯ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಒತ್ತಡದ ಕೆಲಸವನ್ನು ನಿರ್ವಹಿಸುತ್ತಿರುತ್ತಾರೆ ಇಂತಹ ಸಂದರ್ಭಗಳಲ್ಲಿ ವ್ಯಕ್ತಿ ವಿಕಸನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಾನಸಿಕ ಒತ್ತಡದಿಂದ ಹೊರಬಂದು ಉತ್ತಮ ಸಾರ್ವಜನಿಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು.
![](https://janadhwani.in/wp-content/uploads/2024/01/Screenshot_20240111_155517.png)
ತಾಲೂಕಿನಲ್ಲಿ ಸರ್ಕಾರಿ ನೌಕರರ ಸಮುದಾಯ ಭವನದ ನಿರ್ಮಾಣ ಬಹು ದಿನಗಳ ಬೇಡಿಕೆಯಾಗಿದ್ದು ಶಾಸಕರ ಅನುದಾನದಲ್ಲಿ ಪೂರ್ಣಗೊಳಿಸಲಾಗುವುದು ಸರ್ಕಾರ ರಾಜ್ಯದ 5.25 ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು ಓಪಿಎಸ್ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವರು.
ರಾಜ್ಯ ಸರ್ಕಾರಿ ನೌಕರರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ರಾಜಕಾರಣ ಮಾಡದೆ ಸರ್ಕಾರದ ಸೇವೆ ಮಾಡಬೇಕು ನೌಕರರು ಸೋಮಾರಿತನ ಇಚ್ಛಾಶಕ್ತಿಯ ಕೊರತೆ ತೋರದೆ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಉತ್ತಮ ಸೇವೆ ನೀಡಿದಾಗ ಮಾತ್ರ ಸರ್ಕಾರದ ಆಶಯಗಳು ಈಡೇರಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ನೌಕರರು ಕಟಿಬದ್ಧವಾಗಿರಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಮಾತನಾಡಿ ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಬಹುಮುಖ್ಯವಾಗಿದೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2013 ರಿಂದ 18ರ ವರೆಗಿನ ಅಧಿಕಾರ ಅವಧಿಯಲ್ಲಿ ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದರು ಈಗ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು 2006ರಿಂದ ಈಚೆಗೆ ನೇಮಕವಾದ ಸರ್ಕಾರಿ ನೌಕರರಿಗೆ ಓಪಿಎಸ್ ಜಾರಿಗೊಳಿಸಬೇಕು ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ಹಲವು ಬೇಡಿಕೆಗಳಿದ್ದು ಸೂಕ್ತ ರೀತಿಯಲ್ಲಿ ನಿರ್ಧಾರ ಕೈಗೊಂಡು ನೌಕರರ ಹಿತ ಕಾಪಾಡಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ನೌಕರರು ಕಚೇರಿಗಳನ್ನು ಬಹಿಷ್ಕರಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿಎಲ್ ಲಿಂಗೇಗೌಡ ತಹಸಿಲ್ದಾರ್ ರೆಹಾನ್ ಪಾಷಾ ಬಿಇ ಓ ಕೆ ಎಸ್ ಸುರೇಶ್ ತಾಲೂಕು ಪಂಚಾಯತಿ ಇ ಓ ಶಶಿಧರ್ ರಾಜ್ಯ ಗೌರವಾಧ್ಯಕ್ಷ ಬಿಎಚ್ ವೆಂಕಟೇಶಯ್ಯ ರಾಜ್ಯ ಖಜಾಂಚಿ ಸಿದ್ದರಾಮಯ್ಯ ಶ್ರೀನಿವಾಸ್ ತಿಮ್ಮೇಗೌಡ ಎಂ ವಿ ರುದ್ರಪ್ಪ ಡಿ ವೀರೇಶ್ ಎಸ್ ಕೆ ಮಂಜುನಾಥ್ ಬಾಗೇಶ್ ಉಗ್ರಾಣ ಸೇರಿದಂತೆ ಸರ್ಕಾರಿ ನೌಕರ ಸಂಘದ ತಾಲೂಕು ಸಮಿತಿ ಸದಸ್ಯರು ತಾಲೂಕು ವೃಂದ ಸಂಘಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments