ರಾಮದುರ್ಗ ಗ್ರಾಮದಲ್ಲಿ ವಿಜೃಂಭಣೆಯಿಂದ ಅದ್ದೂರಿಯಾಗಿ ಜರುಗಿದ ಶ್ರೀಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವ.

by | 24/12/23 | ಸಾಂಸ್ಕೃತಿಕ

ನಾಯಕನಹಟ್ಟಿ ಡಿ.24: ಹೋಬಳಿಯ ನಲಗೇತನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರಾಮದುರ್ಗ ಗ್ರಾಮದಲ್ಲಿ ಕಳೆದ ಮೂರು ದಿನಗಳ ಕಾಲ ಅದ್ದೂರಿಯಾಗಿ ಶ್ರೀಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವ ಜರುಗಿದೆ.
ಎಂದು ಗ್ರಾಮ ಪಂಚಾಯತಿಯ ಸದಸ್ಯ ಬಂಗಾರಪ್ಪ ಹೇಳಿದ್ದಾರೆ.


ಅವರು ಭಾನುವಾರ ಶ್ರೀಮಂದ ಬೊಮ್ಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ ನಮ್ಮ ಗ್ರಾಮದ ಹೊರವಲಯದಲ್ಲಿರುವ ದೊಣೆ ಎಂಬ ಸ್ಥಳಕ್ಕೆ ನಮ್ಮ ಪೂರ್ವಜರು ದೊಣೆಮಂಡಲಹಟ್ಟಿ ಎಂಬ ಹೆಸರು ನಾಮಕರಣವಾಗಿದೆ.
ಪ್ರತಿ ವರ್ಷವೂ ಬುಡಕಟ್ಟು ಸಂಸ್ಕೃತಿಯ ಆಚಾರ ವಿಚಾರಗಳ ಸಂಪ್ರದಾಯದಂತೆ ಕಳೆದ ಮೂರು ದಿನಗಳಿಂದ ಶ್ರೀಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ ಭಾನುವಾರ ಮೂರನೇ ದಿನವಾದರಿಂದ ಗ್ರಾಮಕ್ಕೆ ಶ್ರೀ ಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ವಿವಿಧ ಮಂಗಳವಾದ್ಯಗಳೊಂದಿಗೆ ಅದ್ದೂರಿಯಾಗಿ ಗ್ರಾಮಕ್ಕೆ ಕರೆತರಲಾಗುತ್ತದೆ ನಮ್ಮ ಮ್ಯಾಸ ನಾಯಕ ಬುಡಕಟ್ಟು ಸಂಸ್ಕೃತಿಯ ಆರಾಧ್ಯ ದೈವ ಶ್ರೀಮಂದ ಬೊಮ್ಮಲಿಂಗೇಶ್ವರ ಮೂಲಸ್ಥಾನ ನಮ್ಮ ಗ್ರಾಮದ ಸಮೀಪದಲ್ಲಿರುವ ( ಬಿ ಆರ್ ಸಿ) ಹತ್ತಿರದ ಸ್ಥಳ ಈ ಸ್ಥಳದಲ್ಲಿ ನಮ್ಮ ನಾಯಕ ಜನಾಂಗದವರು ವಾಸ ಮಾಡಿರುವಂತ ಸ್ಥಳವಾಗಿದೆ ನಮ್ಮ ಪೂರ್ವಜರು ಆ ಸ್ಥಳಕ್ಕೆ (ಸಣ್ಣಗಂಬಲದಿನ್ನಿ) ಎಂಬ ಹೆಸರನ್ನ ಕರೆಯುತ್ತಾರೆ.


ಅಲ್ಲಿ ನಮ್ಮ ಮ್ಯಾಸ ನಾಯಕ ಸಮುದಾಯದವರು ಪ್ರತಿ ಮೂರು ಮತ್ತು ಐದು ವರ್ಷಕ್ಕೊಮ್ಮೆ ಈ ಸ್ಥಳದಲ್ಲಿ ಬುಡಕಟ್ಟು ಸಂಸ್ಕೃತಿಯ ಆರಾಧ್ಯ ದೈವ ಶ್ರೀ ಮಂದ ಬೊಮ್ಮಲಿಂಗೇಶ್ವರ ನಡೆಸುತ್ತಾ ಬಂದಿದ್ದಾರೆ ಅದರಂತೆ ಇಂದು ಗ್ರಾಮದ ಹೊರವಲಯದಲ್ಲಿರುವ ದೋಣಿ ಎಂಬ ಸ್ಥಳದಲ್ಲಿ ಕಳೆದ ಮೂರು ದಿನಗಳ ಕಾಲ ಶ್ರೀ ಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ದೇವರ ಪೂಜಾ ಕೈಕಾರ್ಯಗಳು ನೆರವೇರಿಸಲಾಗಿದೆ ಗ್ರಾಮದ ಸರ್ವ ಭಕ್ತಾದಿಗಳು ಸಂಭ್ರಮ ಸಡಗರದಿಂದ ಆಚರಣೆ ಮಾಡಿದ್ದಾರೆ ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ರಾಮದುರ್ಗ ಗ್ರಾಮದ ಆರಾಧ್ಯ ದೈವ ಶ್ರೀ ಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಗುಡಿಕಟ್ಟಿನ ಅಣ್ಣತಮ್ಮಂದಿರು ಸಮಸ್ತ ಊರಿನ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page