ರಾಮಸಾಗರ ಗ್ರಾಮದಲ್ಲಿ ಶ್ರೀ ಗಾದ್ರಿಪಾಲನಾಯಕ ಜಾತ್ರಾ ಮಹೋತ್ಸವ ನಡೆಯಿತು.

by | 05/03/24 | ಚರಿತ್ರೆ


ನಾಯಕನಹಟ್ಟಿ:: ಸಮೀಪದ ರಾಮಸಾಗರ ಗ್ರಾಮದಲ್ಲಿ ಶ್ರೀ ಗಾದ್ರಿಪಾಲನಾಯಕ ಜಾತ್ರಾ ಮಹೋತ್ಸವದಲ್ಲಿ ಬುಡಕಟ್ಟು ಸಮುದಾಯಗಳು ಆಚರಿಸುವಂತಹ ಧಾರ್ಮಿಕ ವಿಧಿ ವಿಧಾನಗಳು ಮತ್ತು ಆಚರಣೆಗಳು ಸಮಾಜದಲ್ಲಿನ ಸಾಮರಸ್ಯಕ್ಕೆ ಮತ್ತು ಶಾಂತಿಗೆ ಹಿಡಿದಂತ ಕೈಗನ್ನಡಿಯಾಗಿವೆ ಎಂದು ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು.


ಅವರು ಸೋಮವಾರ ಹೋಬಳಿ ರಾಮಸಾಗರದಲ್ಲಿ ಗಾದ್ರಿ ಪಾಲನಾಯಕ ಗುಗ್ಗರಿ ಹಬ್ಬದ ಪೂಜಾ ವಿಧಿ ವಿಧಾನಗಳನ್ನು ಉದ್ದೇಶಿಸಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಚಿತ್ರದುರ್ಗ ಜಿಲ್ಲೆ ಈ ನಿಟ್ಟಿನಲ್ಲಿ ವಿಶೇಷವಾದ ಸ್ಥಾನಮಾನ ಮತ್ತು ಪರಂಪರೆಯನ್ನು ಹೊಂದಿದೆ ಈ ಬುಡಕಟ್ಟು ಸಮುದಾಯಗಳು ಆಚರಿಸುವಂತಹ ಧಾರ್ಮಿಕ ವಿಧಿ ವಿಧಾನಗಳು ದ್ವಾಪರಯುಗದಲ್ಲಿನ ಆಚರಣೆಗಳಿಗೂ ಸಾಮ್ಯತೆ ಇದೆ
500 ವರ್ಷಗಳ ಹಿಂದಿನ ಕಾಮಗೇತಿ ಕುಲದ ವೀರ ಮದಕರಿ ನಾಯಕನ ವಂಶಸ್ಥರು ಅದಿಯಾಗಿ ಗಾದ್ರಿಪಾಲನಾಯಕರ ಪೂಜಾ ವಿಧಿ ವಿಧಾನಗಳು ಸಾಂಪ್ರದಾಯಗಳು ಮತ್ತು ಆಚರಣೆಗಳು ಭಾಗದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿವೆ
ಈ ಪೂಜಾ ವಿಧಿ ವಿಧಾನಗಳು ಸಮಾಜದಲ್ಲಿನ ಶಾಂತಿ ಸೌಹಾರ್ದ ಸಾಮರಸ್ಯಕ್ಕೆ ಅತ್ಯಂತ ಪೂರಕವಾಗಿವೆ.
ಈ ಆಚರಣೆಗಳ ಜೊತೆಗೆ ಇಲ್ಲಿಯ ಎಲ್ಲ ಭಕ್ತಾದಿಗಳು ಕೂಡ ನಮ್ಮ ದೈನಂದಿನ ಜೀವನದಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯನ್ನು ಮನೆ ಮಾಡಿಕೊಂಡಿದ್ದಾರೆ.


ಈ ಎಲ್ಲಾ ಆಚರಣೆಗಳ ಜೊತೆ ಈ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿ ಆಗಬೇಕಿದೆ ಪ್ರತಿಯೊಬ್ಬರೂ ಕೂಡ ತಮ್ಮ ಕುಟುಂಬದಲ್ಲಿನ ಮಕ್ಕಳನ್ನು ಉನ್ನತ ಶಿಕ್ಷಣದ ದಾರಿ ತುಳಿಸಬೇಕಿದೆ ಜನಾಂಗದ ಪರಂಪರೆ ಮತ್ತು ಇತಿಹಾಸವನ್ನು ಇತಿಹಾಸದಲ್ಲಿ ಬರುವಂತಹ ಐತಿಹಾಸಿಕ ವ್ಯಕ್ತಿಗಳ ಸ್ವಾಭಿಮಾನದ ಬೀಜವನ್ನು ಮಕ್ಕಳಲ್ಲಿ ಬಿತ್ತಬೇಕೆಂದು ಮನವಿ ಮಾಡಿದರು.
ಇನ್ನೂ ಶ್ರೀ ಗಾದ್ರಿಪಾಲನಾಯಕ ಸ್ವಾಮಿಯ ಮಾರ್ಚ್ ನಾಲ್ಕರಿಂದ ಮಾರ್ಚ್ 7 ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದ ಸಂಪೂರ್ಣ ಮಾಹಿತಿಯನ್ನು ಸೂರಮನಹಳ್ಳಿಯ ಎಸ್ ಪಿ ಓಬಯ್ಯ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಗಾದಿ ಪಾಲನಾಯಕ ಗುಡಿಕಟ್ಟಿಗೆ ಸೇರಿದ ರಾಮಸಾಗರ ಚೌಳಕೆರೆ ಸೂರಮನಹಳ್ಳಿ ಭೀಮನಕೆರೆ ವರವು ಕುದಾಪುರ ಅಣ್ಣತಮ್ಮಂದಿರು ನೆಂಟರು ಬಾಂಧವರು ಗುರು -ಹಿರಿಯರು ಕುಲದೈವರು ಮತ್ತು
ಕಾಂಗ್ರೆಸ್ ಮುಖಂಡ ಭೀಮನಕೆರೆ ರಮೇಶ್ ಬಾಬು, ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ. ಶಿವಣ್ಣ, ಗ್ರಾಮ ಪಂಚಾಯತಿ ಸದಸ್ಯ ಎಂ ತಿಪ್ಪೇಸ್ವಾಮಿ, ಮುಖಂಡ ಜಯಣ್ಣ, ಸಣ್ಣಪಾಲಯ್ಯ,
ಪಿ.ಪಿ. ಮಹಾಂತೇಶ್ ನಾಯಕ. ಸೇರಿದಂತೆ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page