ರಾಮಸಾಗರ ಗ್ರಾಮದಲ್ಲಿ ಶ್ರೀ ಗಾದ್ರಿಪಾಲನಾಯಕ ಜಾತ್ರಾ ಮಹೋತ್ಸವ ನಡೆಯಿತು.

by | 05/03/24 | ಚರಿತ್ರೆ


ನಾಯಕನಹಟ್ಟಿ:: ಸಮೀಪದ ರಾಮಸಾಗರ ಗ್ರಾಮದಲ್ಲಿ ಶ್ರೀ ಗಾದ್ರಿಪಾಲನಾಯಕ ಜಾತ್ರಾ ಮಹೋತ್ಸವದಲ್ಲಿ ಬುಡಕಟ್ಟು ಸಮುದಾಯಗಳು ಆಚರಿಸುವಂತಹ ಧಾರ್ಮಿಕ ವಿಧಿ ವಿಧಾನಗಳು ಮತ್ತು ಆಚರಣೆಗಳು ಸಮಾಜದಲ್ಲಿನ ಸಾಮರಸ್ಯಕ್ಕೆ ಮತ್ತು ಶಾಂತಿಗೆ ಹಿಡಿದಂತ ಕೈಗನ್ನಡಿಯಾಗಿವೆ ಎಂದು ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು.


ಅವರು ಸೋಮವಾರ ಹೋಬಳಿ ರಾಮಸಾಗರದಲ್ಲಿ ಗಾದ್ರಿ ಪಾಲನಾಯಕ ಗುಗ್ಗರಿ ಹಬ್ಬದ ಪೂಜಾ ವಿಧಿ ವಿಧಾನಗಳನ್ನು ಉದ್ದೇಶಿಸಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಚಿತ್ರದುರ್ಗ ಜಿಲ್ಲೆ ಈ ನಿಟ್ಟಿನಲ್ಲಿ ವಿಶೇಷವಾದ ಸ್ಥಾನಮಾನ ಮತ್ತು ಪರಂಪರೆಯನ್ನು ಹೊಂದಿದೆ ಈ ಬುಡಕಟ್ಟು ಸಮುದಾಯಗಳು ಆಚರಿಸುವಂತಹ ಧಾರ್ಮಿಕ ವಿಧಿ ವಿಧಾನಗಳು ದ್ವಾಪರಯುಗದಲ್ಲಿನ ಆಚರಣೆಗಳಿಗೂ ಸಾಮ್ಯತೆ ಇದೆ
500 ವರ್ಷಗಳ ಹಿಂದಿನ ಕಾಮಗೇತಿ ಕುಲದ ವೀರ ಮದಕರಿ ನಾಯಕನ ವಂಶಸ್ಥರು ಅದಿಯಾಗಿ ಗಾದ್ರಿಪಾಲನಾಯಕರ ಪೂಜಾ ವಿಧಿ ವಿಧಾನಗಳು ಸಾಂಪ್ರದಾಯಗಳು ಮತ್ತು ಆಚರಣೆಗಳು ಭಾಗದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿವೆ
ಈ ಪೂಜಾ ವಿಧಿ ವಿಧಾನಗಳು ಸಮಾಜದಲ್ಲಿನ ಶಾಂತಿ ಸೌಹಾರ್ದ ಸಾಮರಸ್ಯಕ್ಕೆ ಅತ್ಯಂತ ಪೂರಕವಾಗಿವೆ.
ಈ ಆಚರಣೆಗಳ ಜೊತೆಗೆ ಇಲ್ಲಿಯ ಎಲ್ಲ ಭಕ್ತಾದಿಗಳು ಕೂಡ ನಮ್ಮ ದೈನಂದಿನ ಜೀವನದಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯನ್ನು ಮನೆ ಮಾಡಿಕೊಂಡಿದ್ದಾರೆ.


ಈ ಎಲ್ಲಾ ಆಚರಣೆಗಳ ಜೊತೆ ಈ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿ ಆಗಬೇಕಿದೆ ಪ್ರತಿಯೊಬ್ಬರೂ ಕೂಡ ತಮ್ಮ ಕುಟುಂಬದಲ್ಲಿನ ಮಕ್ಕಳನ್ನು ಉನ್ನತ ಶಿಕ್ಷಣದ ದಾರಿ ತುಳಿಸಬೇಕಿದೆ ಜನಾಂಗದ ಪರಂಪರೆ ಮತ್ತು ಇತಿಹಾಸವನ್ನು ಇತಿಹಾಸದಲ್ಲಿ ಬರುವಂತಹ ಐತಿಹಾಸಿಕ ವ್ಯಕ್ತಿಗಳ ಸ್ವಾಭಿಮಾನದ ಬೀಜವನ್ನು ಮಕ್ಕಳಲ್ಲಿ ಬಿತ್ತಬೇಕೆಂದು ಮನವಿ ಮಾಡಿದರು.
ಇನ್ನೂ ಶ್ರೀ ಗಾದ್ರಿಪಾಲನಾಯಕ ಸ್ವಾಮಿಯ ಮಾರ್ಚ್ ನಾಲ್ಕರಿಂದ ಮಾರ್ಚ್ 7 ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದ ಸಂಪೂರ್ಣ ಮಾಹಿತಿಯನ್ನು ಸೂರಮನಹಳ್ಳಿಯ ಎಸ್ ಪಿ ಓಬಯ್ಯ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಗಾದಿ ಪಾಲನಾಯಕ ಗುಡಿಕಟ್ಟಿಗೆ ಸೇರಿದ ರಾಮಸಾಗರ ಚೌಳಕೆರೆ ಸೂರಮನಹಳ್ಳಿ ಭೀಮನಕೆರೆ ವರವು ಕುದಾಪುರ ಅಣ್ಣತಮ್ಮಂದಿರು ನೆಂಟರು ಬಾಂಧವರು ಗುರು -ಹಿರಿಯರು ಕುಲದೈವರು ಮತ್ತು
ಕಾಂಗ್ರೆಸ್ ಮುಖಂಡ ಭೀಮನಕೆರೆ ರಮೇಶ್ ಬಾಬು, ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ. ಶಿವಣ್ಣ, ಗ್ರಾಮ ಪಂಚಾಯತಿ ಸದಸ್ಯ ಎಂ ತಿಪ್ಪೇಸ್ವಾಮಿ, ಮುಖಂಡ ಜಯಣ್ಣ, ಸಣ್ಣಪಾಲಯ್ಯ,
ಪಿ.ಪಿ. ಮಹಾಂತೇಶ್ ನಾಯಕ. ಸೇರಿದಂತೆ ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page