ಚಳ್ಳಕೆರೆ-07 ದೇಶದಲ್ಲಿ ಮೋದಿಯವರ ಹತ್ತು ವರ್ಷಗಳ ಆಡಳಿತ ವಿಶ್ವ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದಿದೆ. ಕೇಂದ್ರ ಸರ್ಕಾರ ಮಾಡಿದ ಸಾಧನೆಗಳನ್ನು ಮತದಾರರಿಗೆ ತಲುಪಿಸುವ ಮೂಲಕ ಮುಖಂಡರು ಕಾರ್ಯಕರ್ತರು ಶ್ರಮಿಸುವಂತೆ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ ಕಿವಿಮಾತು ಹೇಳಿದರು.
ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಮೈತ್ರಿಯ ನಂತರ ಮೊದಲಬಾರಿಗೆ ಜೆಡಿಎಸ್, ಬಿಜೆಪಿ ಸಮನ್ವಯ ಸಮಿತಿ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಮಂತ್ರಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ದೇಶದ ಶಕ್ತಿಶಾಲಿಗಳಾಗಿದ್ದು, ಜೆಡಿಎಸ್, ಬಿಜೆಪಿ ಮೈತ್ರಿಕೂಟ ರಾಜ್ಯದಲ್ಲಿ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರದಲ್ಲಿ ಮತ್ತೊಮ್ಮೆ ಮೂರನೇ ಬಾರಿಗೆ ಪ್ರಧಾನಮಂತ್ರಿ ನರೇಂದ್ರಮೋದಿಯವರ ಆಡಳಿತವನ್ನು ದೇಶದ 140 ಕೋಟಿ ಜನ ಬಯಸುತ್ತಿದೆ.
ಕಳೆದ 10 ವರ್ಷಗಳ ಅವಧ ಸಾಧನೆ ಮತ್ತೊಮ್ಮೆ ಅವರನ್ನು ಅಧಿಕಾರಕ್ಕೆ ತರುವ ಪ್ರಯತ್ನ ದೇಶದ ಜನರಿಂದಲೇ ಆಗುತ್ತಿದೆ. ಪ್ರಧಾನಮಂತ್ರಿ ನರೇಂದ್ರಮೋದಿ ವಿಶ್ವವೇ ಮೆಚ್ಚಿನ ನಾಯಕರಾಗಿದ್ದು, ಅವರ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದರು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ಹಲವಾರು ಜನಪ್ರಿಯ ಕಾರ್ಯಕ್ರಮಗಳು ದೇಶದ ಕೋಟ್ಯಾಂತರ ಜನರಿಗೆ ಹೊಸ ಆತ್ಮವಿಶ್ವಾಸ ತುಂಬಿವೆ. ದೇಶದ ಸುಮಾರು 80 ಕೋಟಿ ಜನರಿಗೆ ಪ್ರತಿತಿಂಗಳು ಉಚಿತ ಅಕ್ಕಿ ನೀಡಲಾಗುತ್ತಿದೆ, 10 ಕೋಟಿ ಮಹಿಳೆಯರಿಗೆ ಉಜ್ವಲಯೋಜನೆಯಡಿ ಅಡುಗೆ ಅನಿಲ ಕಲ್ಪಿಸಿದೆ, ಆರ್ಥಿಕತೆಯನ್ನು ಸುಧಾರಿಸುವಲ್ಲಿ ಮೋದಿ ಯಶಸ್ವಿಯಾಗಿದ್ಧಾರೆ, ಫಸಲ್ ಭಿಮಾ ಯೋಜನೆಯಡಿ ಜಿಲ್ಲೆಯ ಸಾವಿರಾರು ರೈತರಿಗೆ ಲಕ್ಷಾಂತರ ರೂ ವಿಮೆ ಪರಿಹಾರ ಹಣ ಅವರ ಖಾತೆಗೆ ಜಮಾವಾಗಿದೆ. ಕಾಂಗ್ರೆಸ್ ಪಕ್ಷದ 60 ವರ್ಷಗಳ ಆಡಳಿತದಲ್ಲಿ ಸಾಧನೆ ಮಾಡಲಾಗದ್ದನ್ನು ಕೇವಲ 10 ವರ್ಷದಲ್ಲಿ ಮೋದಿ ಮಾಡಿತೋರಿಸಿದ್ಧಾರೆಂದು.
ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ಜಿ.ಬಸವರಾಜಮಂಡಿಮಠ ಕಂಡಕೂಡಲೇ ಅಭ್ಯರ್ಥಿಗೋವಿಂದಕಾರಜೋಳ ಅವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ದೊಡ್ಡನಗೌಡ, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಯಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಬಿಜೆಪಿ ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಎಚ್.ಆನಂದಪ್ಪ, ಸಣ್ಣಬೋರಣ್ಣ, ನಗರಸಭಾ ಸದಸ್ಯರಾದ ವಿ.ವೈ.ಪ್ರಮೋದ್, ಸಿ.ಶ್ರೀನಿವಾಸ್, ತಿಪ್ಪಮ್ಮ, ಕವಿತಾನಾಯಕಿ, ನಾಗಮಣಿ, ಬಿಜೆಪಿ ಸದಸ್ಯರಾದ ಎಸ್.ಜಯಣ್ಣ, ವೆಂಕಟೇಶ್, ಪಾಲಮ್ಮ, ಜಯಪಾಲಯ್ಯ, ಸೋಮಶೇಖರ್ಮಂಡಡಿಮಠ, ಬಾಳೆಮಂಡಿರಾಮದಾಸ್, ಪರಾಜಿತ ಅಭ್ಯರ್ಥಿ ಎಂ.ರವೀಶ್ಕುೆಮಾರ್, ಕೆ.ಟಿ.ಕುಮಾರಸ್ವಾಮಿ. ಅನಿಲ್ಕುಲಮಾರ್, ಶಶಿಧರನಾಯಕ, ರವೀಂದ್ರಪ್ಪ, ಭದ್ರಣ್ಣ, ಮಾತೃಶ್ರೀಎನ್.ಮಂಜುನಾಥ ಇತರರಿದ್ದರು.
0 Comments