ಚಳ್ಳಕೆರೆ ಡಿ23 ಡಿ.23 ರಂದು ರಾಷ್ಟ್ರೀಯ ರೈತರ ದಿನಾಚರಣೆ ಮಾಡದೆ ಕೃಷಿ ಇಲಾಖೆ ಹಾಗೂ ತಾಲೂಕು ಆಡಳಿತ ನಿರ್ಲಕ್ಷ ತೋರಿದ್ದಾರೆ ಎಂದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ದಿ. ಚೌದರಿ ಚರಣಸಿಂಗ್ ಅವರ ಜಯಂತ್ಯುತ್ಸವ ದಿನವಾದ ಡಿ.23 ರಂದು ರಾಷ್ಟ್ರೀಯ ರೈತ ದಿನವಾಗಿ ಆಚರಿಸಲಾಗಿದೆ. ಆದರೆ ಕೃಷಿ ಇಲಾಖೆಯ ನಿರ್ಲಕ್ಷದಿಂದಾಗಿ ಡಿ.23ರಂದು ರೈತರ ದಿನಾಚರಣೆಯನ್ನು ಕಸಬಾ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ ರೈತರನ್ನು ಆಹ್ವಾನಿಸದೆ ಕೆಲವೇ ರೈತರನ್ನು ಕರೆದು ಕಾಟಾಚಾರಕ್ಕೆ ಆಚರಣೆ ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಅಸಮದಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜಿಲ್ಲಾಟ್ಟದ ಜನಸಂಪರ್ಕ ಸಭೆಯಲ್ಲಿ ರಾಷ್ಟ್ರೀಯ ರೈತ ದಿನಾರಣೆಯ ಬಗ್ಗೆ ದೂರು ನೀಡಲಾಗುವುದು ಎಂದು ಅಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ.
0 Comments