ಚಳ್ಳಕೆರೆ ಜನಧ್ವನಿ ವಾರ್ತೆ ಮೇ 12
ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದ ಗುಂಡಿ ಸಿನಿಮೀಯ ರೀತಿಯಲ್ಲಿ ಬೆಳ್ಳಂ ಬೆಳಗ್ಗೆ ತಪ್ಪಿದ ಸರಣಿ ಅಪಘಾತ ಪ್ರಾಣಾಪಯದಿಂದ ಪಾರದ ಬೈಕ್ ಸವಾರರು ರಸ್ತೆಯಲ್ಲಿ ಬಿದ್ದ ಗುಂಡಿಗೆ ಹೈರಾಣಾದ ವಾಹನ ಸವಾರರು.
ಹೌದು ಇದು ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ದೊಡ್ಡ ಉಳ್ಳಾರ್ತಿ ಗ್ರಾಸ್ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದ ಬೃಹತ್ ಗುಂಡಿಗೆ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಲಾರಿಯೊಂದು ಗುಂಡಿ ತಪ್ಪಿಸಲು ಹೋಗಿ ಹಿಂದೆ ಬರುತ್ತಿದ್ದ ಲಾರಿ ಹಾಗೂ ಬೈಕ್ ಮೂರು ವಾಹನಗಳು ಸರಣಿ ಅಪಘಾತಕ್ಕೆ ಬೈಕ್ ಸವಾರರು ಸಿನಿಮೀಯ ರೀತಿ ಪ್ರಾಣಾಪಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಬಳ್ಳಾರಿ.ಬೆಂಗಳೂರು, ಬೀದರ್ , ರಾಯಚೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧ ರಾಜ್ಯಗಳಿಗೆ ರಸ್ತೆ ಮಾರ್ಗವಾಗಿದ್ದು ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದು ಇಂತಹ ರಸ್ತೆಯಲ್ಲಿ ಗುಂಡಿ ಬಿದ್ದು ಸುಮಾರು ತಿಂಗಳು ಕಳೆದರೂ ಮುಚ್ಚದೆ ಇರುವು ಕಾರಣ ರಸ್ತೆಯಲ್ಲಿ ಬಿದ್ದ ಗುಂಡಿ ವಾಹನ ಸವಾರರಿಗೆ ಅಪಘಾತಕ್ಕೆ ಕೈ ಬೀಸಿ ಕರೆಯುವಂತಿದೆ ಈ ರಸ್ತೆಯಲ್ಲಿ ಸಂಬAಧಟ್ಟ ಇಲಾಖೆ ಅಧಿಕಾರಿಗಳು ಸಂಚರಿಸುತ್ತಿದ್ದರೂ ಸಹ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿರುವುದರಿಂದ ಅಪಘಾತಕ್ಕೆ ತುತ್ತಾಗಿ ಪ್ರಣಾ ಕಳೆದುಕೊಳ್ಳುವ ಮುನ್ನ ರಸ್ತೆಯಲ್ಲಿರುವ ಗುಂಡಿಯನ್ನು ಮುಚ್ಚುವರೇ ಕಾದು ನೋಡ ಬೇಕಿದೆ.
ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ಅಭಿಶೇಕ್ ನಗರರ ಓಂಕಾರಮೂರ್ತಿ ಸರಣಿ ಅಪಘಾತದ ಬಗ್ಗೆ ಮಾಹಿತಿ ನೀಡಿ ರಸ್ತೆಯಲ್ಲಿದ್ದ ಗುಂಡಿಯನ್ನು ಕೂಡಲೆ ಸಂಬAಧಪಟ್ಟ ಅಧಿಕಾರಿಗಳು ಮುಚ್ಚುವಂತೆ ಆಗ್ರಹಿಸಿದ್ದಾರೆ.
0 Comments