ಚಳ್ಳಕೆರೆ: ತಾಲೂಕಿನ ಸಿದ್ದಾಪುರ ಗೇಟ್ ನಿಂದ ಬುಡ್ನಹಟ್ಟಿ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಕಾಮಗಾರಿ ಹೆದ್ದಾರಿ ಪ್ರಾಧಿಕಾರದ ಕೆಲವು ಎಡವಟ್ಟುಗಳನ್ನು ಮಾಡುತ್ತಿದ್ದು ತಾಲೂಕಿನ ಚಿಕ್ಕಮಧುರೆ ಗ್ರಾಮದ ಗ್ರಾಮಸ್ದ ಮಲ್ಲಿಕಾರ್ಜುನ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿರುವ ಅವರು ವಾಹನ ಸವಾರರಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಬದಿಗಳಲ್ಲಿ ಜಿಲ್ಲೆ ಹಾಗೂ ತಾಲೂಕುಗಳಿಗೆ ತೆರಳುವ ತಿರುವುಗಳಲ್ಲಿ ತಪ್ಪು ಮಾಹಿತಿ ನೀಡುವ ನಾಮಫಲಕಗಳನ್ನು ಅಳವಡಿಸಿರುವುದರಿಂದ ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದ್ದು ಇದರಿಂದಾಗಿ ಹೊರ ಊರುಗಳಿಂದ ಬರುವ ಟ್ರಕ್ ಚಾಲಕರಿಗೆ ಕಾರು ಚಾಲಕರು ಸೇರಿದಂತೆ ಹಲವರಿಗೆ ಸಮಸ್ಯೆಗಳು ಉಂಟಾಗುತ್ತಿದ್ದು ರಾಜ್ಯ ಹೆದ್ದಾರಿ ಪ್ರಾದಿಕಾರ ಹಾಗೂ ಲೋಕೋಪಯೋಗಿ ಇಲಾಖೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅವಘಡಗಳನ್ನು ಸರಿಪಡಿಸಬೇಕು ಇಲ್ಲದಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ
0 Comments