ಹಿರಿಯೂರು :
ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರಾಷ್ಟ್ರೀಯ ಭಾವೈಕ್ಯತೆಯು ಅತ್ಯಗತ್ಯವಾಗಿದ್ದು, ಮಕ್ಕಳಿಗೆ ಶಿಸ್ತು, ದೇಶಾಭಿಮಾನ, ಸೇವಾ ಮನೋಭಾವನೆ ಮೂಡಿಸುವ ಜೊತೆಗೆ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸಲು ಸೇವಾದಳ ಅಗತ್ಯವಾಗಿದೆ ಎಂಬುದಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.
ನಗರದ ಗುರುಭವನದಲ್ಲಿ ಭಾರತ ಸೇವಾದಳ ತಾಲ್ಲೂಕು ಸಮಿತಿ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಸೇವಾದಳ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ ಮೇಳ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸೇವಾದಳದ ಮೂಲಕ ಮಕ್ಕಳಿಗೆ ದೈಹಿಕ ಶಿಕ್ಷಣ, ಯೋಗ ಶಿಕ್ಷಣ ಮತ್ತು ನೈತಿಕ ಶಿಕ್ಷಣವನ್ನು ಕಲಿಸುವ ಜೊತೆಗೆ ಮಕ್ಕಳಲ್ಲಿ ದೇಶಾಭಿಮಾನ, ಸೇವಾಮನೋಭಾವನೆ ಬೆಳೆಸುವ ಜೊತೆಗೆ ರಾಷ್ಟ್ರೀಯ ಭಾವೈಕ್ಯತೆಯನ್ನು ಉಂಟುಮಾಡಬಹುದಾಗಿದೆ ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಾರತ ಸೇವಾದಳ ಅಧ್ಯಕ್ಷರಾದ ಎಂ.ಪಿ.ತಿಪ್ಪೇಸ್ವಾಮಿಯವರು ಮಾತನಾಡಿ, ಸೇವಾದಳಕ್ಕೆ ನೂರು ವರ್ಷ ತುಂಬಿದ ಅಂಗವಾಗಿ ಈ ಮಕ್ಕಳ ಮೇಳವನ್ನು ಆಯೋಜಿಸಲಾಗಿದ್ದು, ಶಾಲಾ ಮಕ್ಕಳು ಹಾಗೂ ಶಿಕ್ಷಕರು ಈ ಮೇಳದಲ್ಲಿ ಭಾಗವಹಿಸಿರುವುದು ಅತ್ಯಂತ ಸಂತಸದ ವಿಚಾರವಾಗಿದ್ದು, ಇದಕ್ಕೆ ಸಹಕಾರ ನೀಡಿದ ಶಿಕ್ಷಣ ಇಲಾಖೆಯ ಕಾರ್ಯ ಅಭಿನಂದನೀಯವಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ್ ರವರು ಧ್ವಜಾರೋಹಣ ಮಾಡಿದರು. ಮಕ್ಕಳ ಜಾಥಾವನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶಿವಕುಮಾರ್ ರವರು ಚಾಲನೆ ನೀಡಿದರು. ವಲಯ ಸಂಘಟಕರಾದ ಅಣ್ಣಯ್ಯನವರು ಭಾವೈಕ್ಯತೆ ಮತ್ತು ಶತಮಾನೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ತಿಪ್ಪೇರುದ್ರಪ್ಪ, ಸೇವಾದಳ ಜಿಲ್ಲಾ ಉಪಾಧ್ಯಕ್ಷ ಮಲ್ಕಪ್ಪ, ಉಪಪ್ರಾಂಶುಪಾಲರಾದ ಮೋಕ್ಷನಾಥ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್, ಹಿರಿಯ ಕಾರ್ಯಕರ್ತರಾದ ಯೋಗಾನಂದ ಮತ್ತು ಶಿವಣ್ಣ, ಶಾಲಾ ಸಂಘದ ಕಾರ್ಯದರ್ಶಿ ಯೋಗೇಶ್ ಕೊಂಡಪುರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಶಾಲಾ ಮಕ್ಕಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.
ಈ “ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ ಮೇಳ”ದ ನಿರ್ವಹಣೆ ಜವಾಬ್ದಾರಿಯನ್ನು ಗಿರೀಶ ಶಾಲೆಯ ಶ್ರೀನಿವಾಸ್ ಅಚ್ಚುಕಟ್ಟಾಗಿ ನಿರ್ವಹಿಸಿದರು. ಆರಂಭದಲ್ಲಿ ಸೇವಾದಳದ ಅಧಿನಾಯಕ ಟಿ.ಎಸ್.ಶಶಿಧರ್ ಸ್ವಾಗತಿಸಿದರು, ಕೊನೆಯಲ್ಲಿ ತಾಲ್ಲೂಕು ಕಾರ್ಯದರ್ಶಿ ಬಾಲಾಜಿ ವಂದನಾರ್ಪಣೆ ನೆರವೇರಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments