ರೇಬಿಸ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ್ಯ

by | 31/10/23 | ಆರೋಗ್ಯ

ಚಿತ್ರದುರ್ಗ ಅ.31:
ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ. ನಿರ್ಲಕ್ಷೆ ವಹಿಸದಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ನಗರದ ಪಶುಪಾಲನಾ ಇಲಾಖೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಖ್ಯವಾಗಿ ರೇಬಿ ಸೋಂಕು ಪ್ರಾಣಿಗಳ ಕಡಿತದಿಂದ ರೋಗಾಣು ಇರುವ ಜಲ್ಲು ಸಂಪರ್ಕದಿಂದ ವೈರಾಣು ಗಾಯದ ಮುಖಾಂತರ ದೇಹ ಪ್ರವೇಶಿಸಿ ರೇಬಿಸ್ ರೋಗ ಉಂಟುಮಾಡುತ್ತದೆ. ನಾಯಿ, ಬೆಕ್ಕು, ಹಸು, ಎಮ್ಮೆ, ಕುರಿ, ಮೇಕೆ, ಕೋತಿ, ತೋಳ, ನರಿ ಮುಂಗುಸಿ, ಕುದುರೆ, ಬಾವಲಿ, ಇಲಿ ಹಾಗೂ ಇತ್ಯಾದಿ ಪ್ರಾಣಿಗಳು ಕಚ್ಚಿದಾಗ ನಕ್ಕಿದಾಗ ಹರಡುತ್ತದೆ. ಭಾರತದಲ್ಲಿ ಬಹುತೇಕ ಜನರಿಗೆ ಹುಚ್ಚು ನಾಯಿ ಕಡಿತದಿಂದಲೇ ಶೇ.97 ರಷ್ಟು ರೇಬಿಸ್ ರೋಗ ಬರುತ್ತದೆ. ಪ್ರಾಣಿಗಳ ನಿಕಟ ಸಂಪರ್ಕ ಹೊಂದಿದವರು ಹೆಚ್ಚಾಗಿ ಪಶುಪಾಲನ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿರುತ್ತಾರೆ. ಇವರ ರಕ್ಷಣೆಗಾಗಿ ಮುಂಜಾಗ್ರತಾ ಕ್ರಮಕ್ಕಾಗಿ ರೇಬಿಸ್ ಲಸಿಕೆ ನೀಡಲಾಗುತ್ತಿದೆ. ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು ಇದರ ಸುದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ಪ್ರಾಣಿ ಕಡಿತಕ್ಕೆ ಒಳಗಾಗುವ ಮುನ್ನ ರೇಬಿಸ್ ಲಸಿಕೆಯನ್ನ ಒಂದನೇ ದಿನ, ಏಳನೇ ದಿನ ಮತ್ತು 21 ಅಥವಾ 28ನೇ ದಿನಗಳಂದು ಮೂರು ವರಸೆ ಲಸಿಕೆ ಪಡೆದುಕೊಳ್ಳಬೇಕು. ಪ್ರಾಣಿಗಳ ಕಡಿತಕ್ಕೆ ಒಳಗಾದ ನಂತರ ಒಂದನೇ ದಿನ ಮೂರನೇ ದಿನ ಏಳನೇ ದಿನ ಮತ್ತು 21ನೇ ದಿನ ತಪ್ಪದೇ ಐದು ವರಸೆ ಪಡೆದುಕೊಳ್ಳಬೇಕು. ಲಸಿಕೆ ನೀಡುವ ಮಾರ್ಗ, ಲಸಿಕೆ ನೀಡುವ ಪ್ರಮಾಣ ಲಸಿಕೆ ಪಡೆದುಕೊಳ್ಳುವ ಬಗೆ ಕುರಿತು ತಿಳಿಸಿದರು.
ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಕುಮಾರ್ ಅವರು ಸಾಂಕೇತಿಕವಾಗಿ ಲಸಿಕೆ ಪಡೆದುಕೊಂಡರು.
ಪಶುಪಾಲನಾ ಇಲಾಖೆ ಉಪನಿರ್ದೇಶಕ ಉಪನಿರ್ದೇಶಕ ಡಾ.ಬಾಬುರತ್ನ, ಮುಖ್ಯ ಆರೋಗ್ಯ ಮೇಲ್ವಿಚಾರಣ ಅಧಿಕಾರಿ ಎಂ.ಬಿ.ಹನುಮಂತ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗೋಪಾಲ್ ಕೃಷ್ಣ, ಆರೋಗ್ಯ ಸುರಕ್ಷತಾಧಿಕಾರಿ ವನಜಾಕ್ಷಮ್ಮ, ಅರುಂದತಿ, ಮಂಜು, ಆಶಾ ಕಾರ್ಯಕರ್ತೆಯರು, ಪಶುಪಾಲನಾ ಇಲಾಖೆ ಸಿಬ್ಬಂದಿಗಳು ಇದ್ದರು. ಕಾರ್ಯಕ್ರಮದಲ್ಲಿ 150 ಪಶುಪಾಲನಾ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page