ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ :ರೈತಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಆರೋಪ

by | 10/01/24 | ಪ್ರತಿಭಟನೆ


ಹಿರಿಯೂರು :
ತಾಲ್ಲೂಕಿನಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಅಕ್ರಮ ಸಕ್ರಮ ಯೋಜನೆಯಲ್ಲಿ ಹಣ ತುಂಬಿ ನಾಲ್ಕು ವರ್ಷ ಕಳೆಯುತ್ತಾ ಬಂದರೂ ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದಿಲ್ಲ, ಈ ಕುರಿತು ಇಲಾಖೆಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ಬೆಸ್ಕಾಂ ಇಲಾಖೆ ಕಚೇರಿಯ ಮುಂಭಾಗದಲ್ಲಿ ತಾಲ್ಲೂಕು ರೈತಸಂಘದ ವತಿಯಿಂದ ಅಕ್ರಮ ಸಕ್ರಮ ಯೋಜನೆಯಲ್ಲಿ ಪರಿವರ್ತಕ ಅಳವಡಿಸುವುದು ಮತ್ತು ಇಲಾಖೆಯಲ್ಲಿ ನಡೆದಿರುವ ಹಗರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್ ಮುಖಾಂತರ ಮುಖ್ಯ ಇಂಜಿನಿಯರ್ ರವರಿಗೆ ಮನವಿಪತ್ರ ಅರ್ಪಿಸಿ ನಂತರ ಅವರು ಮಾತನಾಡಿದರು.
ಕಳೆದ ವರ್ಷ 2023ರಲ್ಲಿ 24 ಕೋಟಿ ಈ ಯೋಜನೆಗೆ ಬಂದಿದ್ದ ಹಣವನ್ನು ಹೊಸ ಸರ್ಕಾರ ಬಂದಾಗ ವಾಪಸ್ ಕೊಡಲಾಗಿತ್ತು, ಈಗ ಈ ಯೋಜನೆಗೆ ಸುಮಾರು 50 ಕೋಟಿ ಅಂದಾಜಿಸಲಾಗಿದೆ ಅಷ್ಟು ಹಣವನ್ನು ಬಿಡುಗಡೆ ಮಾಡಿ ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟು ಇನ್ನು ಎರಡು ತಿಂಗಳ ಒಳಗಾಗಿ ಎಲ್ಲಾ ರೈತರಿಗೂ ಪರಿವರ್ತಕವನ್ನು ಅಳವಡಿಸಬೇಕು ಎಂದರಲ್ಲದೆ,
ಅಕ್ರಮ ಸಕ್ರಮ ಯೋಜನೆಯಲ್ಲಿ ಸುಮಾರು 71 ಕಾಮಗಾರಿಗಳಿಗೆ ಕಾರ್ಯಾಧೀಶ ನೀಡದೆ ಕಾಮಗಾರಿ ನಡೆಸಿರುವ ಅಧಿಕಾರಿಗಳ ವಿರುದ್ಧ ನಿಯಮಾನುಸರ ಶಿಸ್ತು ಕ್ರಮ ಕೈಗೊಳ್ಳಬೇಕು ಅಕ್ರಮ ಸಕ್ರಮ ಯೋಜನೆಯೆಲ್ಲಿ ಹಣ ತುಂಬುವುದನ್ನು ನಿಲ್ಲಿಸಿರುವುದನ್ನು ಸರ್ಕಾರ ಕೂಡಲೇ ಪುನಹ ಕಟ್ಟಿ ಸಕ್ರಮಗೊಳಿಸಲು ಅವಕಾಶ ಮಾಡಿಕೊಡಬೇಕು ಎಂದರು.
ತ್ರೀ ಫೇಸ್ ವಿದ್ಯುತ್ ಸರಬರಾಜಿನಲ್ಲಿ ತುಂಬಾ ಕಳಪೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು ದಿನಕ್ಕೆ 7 ಗಂಟೆ ಸರಾಸರಿ ವಿದ್ಯುತ್ ಪೂರೈಸಬೇಕು. ಪರಿವರ್ತಕಗಳು ಸುಟ್ಟುಹೋದಲ್ಲಿ 74 ಗಂಟೆಯಲ್ಲಿ ಟಿಸಿ ಒದಗಿಸಬೇಕು ಮತ್ತು ನಮ್ಮ ಇಲಾಖೆಯ ವಾಹನದಲ್ಲಿ ರೈತರ ಜಮೀನಿಗೆ ಸಾಗಿಸಬೇಕು ಮತ್ತು ಗುಣಮಟ್ಟ ಪರಿವರ್ತಗಳನ್ನು ಕೊಡಬೇಕು.
ಮಾರ್ಡನ್ ವಿಲೇಜ್ ಕಾಮಗಾರಿಯಲ್ಲಿ ಬಾರಿ ಹಗರಣ ನಡೆದಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿಸುತ್ತ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕು ಎಂಬುದಾಗಿ ತಾಲ್ಲೂಕಿನ ರೈತರ ಪರವಾಗಿ ಅವರು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯಪಾಲಕ ಅಭಿಯಂತರರಾದ ಡಿ.ರಾಮಚಂದ್ರ ಈಗ ಅಕ್ರಮ ಸಕ್ರಮ ಯೋಜನೆಯ ಹಣ ಮುಂಜೂರ್ ಆಗಿದೆ, ಹಂತಹಂತವಾಗಿ ಮೂರು ತಿಂಗಳ ಒಳಗಾಗಿ ಎಲ್ಲಾ ಕೆಲಸಗಳನ್ನು ಮುಗಿಸುವ ಪ್ರಯತ್ನ ಮಾಡುತ್ತೇವೆ ಮುಂದಿನ ವಾರ ಮುಖ್ಯ ಇಂಜಿನಿಯರ್ ಅವರನ್ನು ಕರೆಸಿ ಸಭೆ ನಡೆಸೋಣ ಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ರೈತಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ಬಿ.ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ ಬಬ್ಬೂರ್ ಫಾರಂ, ಶಿವಣ್ಣ, ರಂಗಜ್ಜ, ಮೀಸೆ ರಾಮಣ್ಣ, ಗೌಡಪ್ಪ, ಮಂಜುನಾಥ್, ರಾಮಕೃಷ್ಣ, ಶಿವಣ್ಣ, ಜಗನ್ನಾಥ್, ಕೆಂಚಪ್ಪ, ತಿಮ್ಮಯ್ಯ, ತಿಪ್ಪೇಸ್ವಾಮಿ, ವಿರುಪಾಕ್ಷಿ, ಮೆಹಬೂಬ್, ನಾಗರಾಜಪ್ಪ, ಮಾಂತೇಶ ಬಗ್ಗನಾಡು, ಕಾಂತರಾಜ್, ಬಾಲು, ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page