ಕೊಪ್ಪಳ ಡಿಸೆಂಬರ್ 14 ಕೃಷಿಯಲ್ಲಿ ಬದಲಾವಣೆಯನ್ನು ತರಬೇಕಾದರೆ ಕೃಷಿಯ ವಿಷಯಗಳ ಬಗ್ಗೆ ಅವರಿಗೆ ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಗುರುವಾರದಂದು MANAGE ಹೈದರಾಬಾದ್, SAMETI(N) ) ಕೃ.ವಿ.ವಿ. ಧಾರಾವಾಡ, ಕೃಷಿ ಇಲಾಖೆ ಕೊಪ್ಪಳ, ಕೃಷಿ ತಂತ್ರಜ್ಞರ ಸಂಸ್ಥೆ ಕೊಪ್ಪಳ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಗಂಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಕೋರ್ಸ್ ( DAESI ) ಟಿ.ಪಿ ಸಂಖ್ಯೆ 2650 ಹಾಗೂ 2651 ಹೊಸ ಬ್ಯಾಚ್ಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರು ಕೃಷಿಯಲ್ಲಿ ಬದಲಾವಣೆಯನ್ನು ತರಬೇಕಾದರೆ ಕೃಷಿಯ ವಿಷಯಗಳ ಬಗ್ಗೆ ಅವರಿಗೆ ಮನವರಿಕೆ ಮಾಡಬೇಕು. ರೈತರ ಜೊತಗೆ ಇದ್ದು ರೈತರ ಪರ ಕೆಲಸ ಮಾಡಬೇಕು. ರೈತರು ಹೆಚ್ಚು ಕೃಷಿಯ ಮೇಲೆ ಅವಲಂಬಿತರಾಗಿದ್ದು, ಅವರಿಗೆ ಕೃಷಿಯ ಬಗ್ಗೆ ಹೆಚ್ಚು ಮಾಹಿತಿಯನ್ನು ತಿಳಿಸಬೇಕು. ಕೃಷಿಯಲ್ಲಿ ಹೊಸ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಮಾಹಿತಿ ನೀಡಬೇಕು. ರೈತರು ಹೊಲದಲ್ಲಿ ಬಿತ್ತನೆ ಮಾಡುವಾಗ ಬೀಜಗಳ ಬಗ್ಗೆ ಮತ್ತು ಕೃಷಿಯ ಬಗ್ಗೆ ಮಾಹಿತಿ ನೀಡಬೇಕು. ರೈತರು ನಿಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಬೇಕು. ರೈತರಿಗೆ ಹೊಸದಾಗಿ ಬಂದಿರುವ ಟೆಕ್ನಾಲಜಿ ಬಗ್ಗೆ ಮಾಹಿತಿ ನೀಡಬೇಕು. ರೈತರ ಪರವಾಗಿ ಕೈ ಜೋಡಿಸಿ ಕೆಲಸ ಮಾಡಬೇಕು. ಸರ್ಕಾರ ರೈತರಿಗೆ ನೀಡುವ ಸಬ್ಸಿಡಿ ಬಗ್ಗೆ ಮಾಹಿತಿ ತಿಳಿಸಬೇಕು. ರೈತರಿಗೆ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಬೇಕು. ಕೃಷಿಯ ಬಗ್ಗೆ ನಿಮ್ಮಲ್ಲಿರುವ ಮಾಹಿತಿಯನ್ನು ಇತರರಿಗೂ ಮಾದರಿಯಾಗುವಂತೆ ಹೇಳಬೇಕು. ನಿಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಸಮಾಜದಲ್ಲಿ ಕೃಷಿಯ ಬಗ್ಗೆ ರೈತರಿಗೆ ಸಾಮಾಜಿಕ ಜವಾಬ್ದಾರಿ ಇರಬೇಕು. ರೈತರಿಗೆ ಕೃಷಿಯ ಬಗ್ಗೆ ಮಾಹಿತಿಯನ್ನು ತಿಳಿಸಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿರಬೇಕು, ಕೃಷಿ ಮಹತ್ವವನ್ನು ರೈತರಿಗೆ ಮನವರಿಕೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಂಟಿ ಕೃಷಿ ನಿರ್ದೇಶಕರು ಹಾಗೂ ಐ.ಎ.ಟಿ ಅಧ್ಯಕ್ಷರಾದ ರುದ್ರೇಶಪ್ಪ ಟಿ.ಎಸ್. ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧಾರವಾಡ ಕೃ.ವಿ.ವಿಯ ವಿಸ್ತರಣಾ ನಿರ್ದೇಶಕರಾದ ಡಾ.ಎಸ್.ಎಸ್.ಅಂಗಡಿ, ರಾಯಚೂರು ಕೃ.ವಿ.ವಿಯ ವಿಸ್ತರಣಾ ನಿರ್ದೇಶಕರಾದ ಎಸ್.ಬಿ.ಗೌಡಪ್ಪ, ಧಾರವಾಡ ಕೃ.ವಿ.ವಿಯ ಪ್ರಾಧ್ಯಾಪಕರು ಮತ್ತು ರಾಜ್ಯ ನೋಡಲ್ ಅಧಿಕಾರಿಗಳು(ದೇಸಿ) ಹಾಗೂ ಸಮೇತಿ(ಉ) ಸಂಯೋಜಕರಾದ ಡಾ.ಎಂ.ಗೋಪಾಲ, ರಾಯಚೂರು ಕೃ.ವಿ.ವಿ. ಸಹ ವಿಸ್ತರಣಾ ನಿರ್ದೇಶಕರಾದ ಡಾ.ಎ.ಆರ್.ಕುರುಬರ್, ಕೃ.ವಿ.ಶಿ.ಕೇಂದ್ರದ ಮುಖ್ಯಸ್ಥರಾದ ಡಾ.ಎಂ.ವಿ.ರವಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶಿವಣ್ಣ ಮೂಲಿಮನಿ, ರಾಜ್ಯ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಶಂಕ್ರಪ್ಪ ಚವಡಿ, ಉಪ ಕೃಷಿ ನಿರ್ದೇಶಕರಾದ ಸಹದೇವ ಯರಗೊಪ್ಪ, ಗಂಗಾವತಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ರಾಘವೇಂದ್ರ ಎಲಿಗಾರ, ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ವೀರಣ್ಣ ಕಮತರ, ಅಯೋಧ್ಯೆಕ್ರಾಪ್ಸ್ ಅಕಾಡೆಮಿಯ ಡಾ.ಎಂ.ಬಿ.ಪಾಟೀಲ್, ಕೊಪ್ಪಳ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರಾದ ಎಂ.ಶ್ರೀಕಾಂತ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಡಾ.ಚಂದ್ರಕಾಂತ ನಾಡಗೌಡ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಹಾಯಕ ಗಂಗಾವತಿ ಸಹಾಯಕ ಕೃಷಿ ನಿರ್ದೇಶಕರಾದ ಸಂತೋಷ ಪಟ್ಟದಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 Comments