ರೈತರು ಗೋಶಾಲೆಗಳ ಸದುಪಯೋಗ ಪಡೆದುಕೊಂಡು ಗೋವುಗಳ ಪ್ರಾಣ ರಕ್ಷಿಸಿ: ಶಾಸಕ ಟಿ ರಘುಮೂರ್ತಿ

by | 03/02/24 | ಸುದ್ದಿ

ಚಳ್ಳಕೆರೆ: ನಗರದ ಅಜ್ಜಯ್ಯನ ಗುಡಿ ಬಳಿ ಸರ್ಕಾರದಿಂದ ಮಂಜೂರಾದ ಗೋಶಾಲೆಯನ್ನು ಶಾಸಕ ಟಿ ರಘುಮೂರ್ತಿ ಗೋವುಗಳಿಗೆ ಮೇವನ್ನು ವಿತರಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ತಾಲೂಕಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಭೀಕರ ಬರಗಾಲ ಆವರಿಸಿದೆ ಮುಂದಿನ ದಿನಗಳಲ್ಲಿ ಬೇಸಿಗೆ ಆರಂಭವಾಗುವುದರಿಂದ ಜನ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಹೋಬಳಿಗೊಂದು ಗೋಶಾಲೆ ತೆರೆಯಲು ಕ್ರಮ ಕೈಗೊಂಡಿದ್ದು ಇದರಂತೆ ಇಂದು ಕಸಬಾ ಹೋಬಳಿಯಲ್ಲಿ ಉದ್ಘಾಟನೆಗೊಂಡಿದೆ ರಾಜ್ಯದಲ್ಲಿ ಗೋಶಾಲೆ ನಿರ್ಮಾಣಗೊಂಡಿರುವುದು ಚಳ್ಳಕೆರೆ ತಾಲೂಕಿನಲ್ಲಿ ಪ್ರಥಮವಾಗಿದೆ ಸರ್ಕಾರ ತಾಲೂಕಿಗೆ ಮೊದಲ ಆದ್ಯತೆ ನೀಡಿದೆ ಅದರಂತೆ ಜಿಲ್ಲೆಗೆ 10 ಲಕ್ಷ ಬಿಡುಗಡೆಯಾಗಿದ್ದು 5 ಲಕ್ಷ ಚಳ್ಳಕೆರೆ ತಾಲೂಕಿಗೆ ಬಂದಿದೆ ತಾಲೂಕಿನ ಕಸಬಾ ಹೋಬಳಿ ಪರಶುರಾಂಪುರ ತುರುವನೂರು ದೊಡ್ಡ ಉಳ್ಳಾರ್ತಿ ನಾಯಕನಹಟ್ಟಿಯ ಹಿರೆಕಾವಲು ಪ್ರದೇಶಗಳಲ್ಲಿ ಗೋಶಾಲೆಗಳನ್ನು ತೆರೆದಿದ್ದು ಜಾನುವಾರುಗಳನ್ನು ಸಲಹುತ್ತಿರುವ ಆರ್ಥಿಕವಾಗಿ ಹಿಂದುಳಿದ ಜನರು ರೈತಾಪಿ ವರ್ಗ ಹಾಗೂ ದೇವರ ಹಸುಗಳನ್ನು ಸಾಕುತ್ತಿರುವವರು ಈ ಸೌಲಭ್ಯವನ್ನು ಪಡೆದುಕೊಂಡು ಹಸುಗಳನ್ನು ಹಸಿವಿನಿಂದ ನರಳಿಸದೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು‌. ತಾಲೂಕಿನಲ್ಲಿ 1891 ಹಸುಗಳಿದ್ದು ಮೇವಿಗಾಗಿ 22 ಲಕ್ಷ ಹಣ ಬೇಕಾಗುತ್ತದೆ ಸರ್ಕಾರದಿಂದ 10 ಲಕ್ಷ ಮಂಜೂರಾಗಿದ್ದು ಉಳಿದ ಹಣವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನೀಡಲಾಗುವುದು ಹಸುಗಳಿಗೆ ಮೇವು ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಯಾವುದೇ ಲೋಕದೋಷಗಳು ಆಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಸುಗಳಿಗೆ ಒಂದೇ ರೀತಿಯ ಮೇವನ್ನು ನೀಡುವ ಬದಲು ಬತ್ತದ ಹುಲ್ಲು ರಾಗಿ ಹುಲ್ಲು ಸೆಪ್ಪೆದಂಟು ಮೆವನ್ನು ನೀಡಿದಾಗ ಹಸುಗಳಿಗೆ ಉತ್ತಮ ಆರೋಗ್ಯ ಕಾಪಾಡಿದಂತಾಗುತ್ತದೆ ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಮಾತನಾಡಿ ಶಾಸಕ ಟಿ ರಘುಮೂರ್ತಿಯವರ ಪರಿಶ್ರಮದಿಂದಾಗಿ ತಾಲೂಕಿನಲ್ಲಿ ಐದು ಗೋಶಾಲೆಗಳನ್ನು ತೆರೆಯಲಾಗಿದೆ ರೈತರು ಮೇ ವನ್ನು ಮನೆಗಳಿಗೆ ಒಯ್ಯದೆ ಹಸುಗಳನ್ನು ಇಲ್ಲಿಯೇ ತಂದು ಮೇಯಿಸಿಕೊಂಡು ಹೋಗಬೇಕು ಮೇವು ಹಾಗೂ ನೀರಿನ ಕೊರತೆ ಉಂಟಾದರೆ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ವೀರಭದ್ರಪ್ಪ ನನ್ನಿವಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ರಾಜಣ್ಣ ಚಿನ್ನಣ್ಣ ಬಸವರಾಜ್ ಸಿಟಿ ಶ್ರೀನಿವಾಸ್ ತಹಶೀಲ್ದಾರ್ ರೆಹಾನ್ ಪಾಷಾ ಪಶುಸಂಗೋಪನ ಅಧಿಕಾರಿ ರೇವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page