ರೈತರು ಲಾಭದಾಯಕವಾದ ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿರಿ :ಲೇಖಕಟಿ.ಜಿ.ಎಸ್.ಅವಿನಾಶ್ ಸಲಹೆ

by | 22/02/23 | ಸುದ್ದಿ

ಹಿರಿಯೂರು :
ಪ್ರಕೃತಿಯಲ್ಲಿ ಸಹಜವಾಗಿ ಲಭ್ಯವಿರುವ ಸೂರ್ಯನ ಕಿರಣಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸಿದಲ್ಲಿ ರೈತರು ಲಾಭದಾಯಕ ಕೃಷಿ ಮಾಡಬಹುದಾಗಿದೆ ಎಂಬುದಾಗಿ ಮೈಸೂರಿನ ಕೃಷಿಕ ಹಾಗೂ ಲೇಖಕ ಟಿ.ಜಿ.ಎಸ್.ಅವಿನಾಶ್ ಸಲಹೆ ನೀಡಿದರು.
ನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಉಳುಮೆ ಪ್ರತಿಷ್ಠಾನ, ಹಿರಿಯ ರೈತರು ಮತ್ತು ತಜ್ಞರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಒಂದು ಎಕರೆ ಜಮೀನಿನಲ್ಲಿ ವರ್ಷಕ್ಕೆ 22 ಸಾವಿರ ಕೆ.ಜಿ.ಯಷ್ಟು ಆಹಾರ ಧಾನ್ಯ ಉತ್ಪಾದಿಸಬಹುದು, ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಆಹಾರ ಧಾನ್ಯ ಬೆಳೆದಲ್ಲಿ ಕೃಷಿಯಲ್ಲಿನ ನಷ್ಟ ತಪ್ಪಿಸಬಹುದು ಎಂಬುದಾಗಿ ಮಾಹಿತಿ ನೀಡಿದರು.
ಗುಣಮಟ್ಟದ ಆಹಾರ ಧಾನ್ಯಗಳ ಉತ್ಪಾದನೆಗೆ ಕನಿಷ್ಠ 15 ರಿಂದ 35 ಡಿಗ್ರಿ ತಾಪಮಾನ ಬೇಕು, ಆದರೆ ಪ್ರಸ್ತುತ ತಾಪಮಾನ 40 ಡಿಗ್ರಿವರೆಗೆ ಹೆಚ್ಚಿದ್ದು, ಇಂತಹ ಸಮಯದಲ್ಲಿ ಬೆಳಕಿನ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಪಡೆಯುವ ಅಗತ್ಯವಿದೆ. ಇದರಿಂದ ಸರಾಸರಿ ಪ್ರತಿ ರೈತ ಮಾಸಿಕ 15 ಸಾವಿರದವರೆಗೆ ಆದಾಯ ಪಡೆಯಬಹುದು ಎಂದರಲ್ಲದೆ,
ಇದನ್ನು ಸಾಧ್ಯ ಮಾಡಿಕೊಳ್ಳಲು ಕೃಷಿ ಭೂಮಿಯನ್ನು ಆಹಾರ ಬನವನ್ನಾಗಿ ಪರಿವರ್ತಿಸಿಕೊಳ್ಳಬೇಕು ಒಂದು ಎಕರೆಯಲ್ಲಿ ಕನಿಷ್ಠ 30 ವಿವಿಧ ಪ್ರಭೇದದ 1500 ಮರಗಿಡಗಳು ಇರುವಂತೆ ನೋಡಿಕೊಂಡಲ್ಲಿ ಪ್ರಕೃತಿದತ್ತವಾಗಿ ರೋಗರುಜಿನಗಳನ್ನು ತಡೆಯುವ ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬಹುದು
ಈ ಮೂಲಕ ಜೀವಾಣುಗಳ ವೈವಿಧ್ಯತೆ ಸಂರಕ್ಷಣೆಗೊಂಡು, ಸಸ್ಯ ಪೋಷಕಾಂಶಗಳನ್ನು ಪ್ರಕೃತಿದತ್ತವಾಗಿ ಪಡೆಯಬಹುದಾಗಿದೆ, ಪ್ರಮುಖವಾಗಿ ಟ್ರೆಂಚಸ್ ವಿಧಾನದಲ್ಲಿ ಪ್ರತಿವರ್ಷವೂ ಪ್ರತಿ ಎಕರೆಯಿಂದ ಸುಮಾರು 5 ಲಕ್ಷ ಲೀಟರ್ ನೀರನ್ನು ಭೂಮಿಯಲ್ಲಿ ಇಂಗಿಸಬಹುದು, ರೈತರು ಹೆಚ್ಚಾಗಿ ಮಳೆಯ ನೀರನ್ನೇ ಬಳಸಿ ಕೃಷಿ ಚಟುವಟಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಪ್ರಸ್ತುತ ವರ್ಷ ಕಾರ್ಯಾಗಾರ ನಡೆಸುವುದರ ಜೊತೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಒಂದೊಂದು ಎಕರೆ ಪ್ರದೇಶದಲ್ಲಿ ಆಹಾರಬನದ ಮಾದರಿ ತೋಟವನ್ನು ನಿರ್ಮಿಸುವ ಗುರಿ ಹೊಂದಿದ್ದು, ಮಾದರಿ ತೋಟ ನಿರ್ಮಿಸಲು ಹಲವು ರೈತರು ಆಸಕ್ತಿ ತೋರಿಸಿದ್ದಾರೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ರೈತಮುಖಂಡರಾದ ಕೆ.ಸಿ.ಹೊರಕೇರಪ್ಪ, ಕಸವನಹಳ್ಳಿ ರಮೇಶ್, ದಸ್ತಗೀರ್ ಸಾಬ್, ಬ್ಯಾಡರಹಳ್ಳಿ ಶಿವಕುಮಾರ್, ಆರ್.ಚೇತನ್, ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page