ರೈತರು ಲಾಭದಾಯಕವಾದ ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿರಿ :ಲೇಖಕಟಿ.ಜಿ.ಎಸ್.ಅವಿನಾಶ್ ಸಲಹೆ

by | 22/02/23 | ಸುದ್ದಿ

ಹಿರಿಯೂರು :
ಪ್ರಕೃತಿಯಲ್ಲಿ ಸಹಜವಾಗಿ ಲಭ್ಯವಿರುವ ಸೂರ್ಯನ ಕಿರಣಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸಿದಲ್ಲಿ ರೈತರು ಲಾಭದಾಯಕ ಕೃಷಿ ಮಾಡಬಹುದಾಗಿದೆ ಎಂಬುದಾಗಿ ಮೈಸೂರಿನ ಕೃಷಿಕ ಹಾಗೂ ಲೇಖಕ ಟಿ.ಜಿ.ಎಸ್.ಅವಿನಾಶ್ ಸಲಹೆ ನೀಡಿದರು.
ನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಉಳುಮೆ ಪ್ರತಿಷ್ಠಾನ, ಹಿರಿಯ ರೈತರು ಮತ್ತು ತಜ್ಞರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಒಂದು ಎಕರೆ ಜಮೀನಿನಲ್ಲಿ ವರ್ಷಕ್ಕೆ 22 ಸಾವಿರ ಕೆ.ಜಿ.ಯಷ್ಟು ಆಹಾರ ಧಾನ್ಯ ಉತ್ಪಾದಿಸಬಹುದು, ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಆಹಾರ ಧಾನ್ಯ ಬೆಳೆದಲ್ಲಿ ಕೃಷಿಯಲ್ಲಿನ ನಷ್ಟ ತಪ್ಪಿಸಬಹುದು ಎಂಬುದಾಗಿ ಮಾಹಿತಿ ನೀಡಿದರು.
ಗುಣಮಟ್ಟದ ಆಹಾರ ಧಾನ್ಯಗಳ ಉತ್ಪಾದನೆಗೆ ಕನಿಷ್ಠ 15 ರಿಂದ 35 ಡಿಗ್ರಿ ತಾಪಮಾನ ಬೇಕು, ಆದರೆ ಪ್ರಸ್ತುತ ತಾಪಮಾನ 40 ಡಿಗ್ರಿವರೆಗೆ ಹೆಚ್ಚಿದ್ದು, ಇಂತಹ ಸಮಯದಲ್ಲಿ ಬೆಳಕಿನ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಪಡೆಯುವ ಅಗತ್ಯವಿದೆ. ಇದರಿಂದ ಸರಾಸರಿ ಪ್ರತಿ ರೈತ ಮಾಸಿಕ 15 ಸಾವಿರದವರೆಗೆ ಆದಾಯ ಪಡೆಯಬಹುದು ಎಂದರಲ್ಲದೆ,
ಇದನ್ನು ಸಾಧ್ಯ ಮಾಡಿಕೊಳ್ಳಲು ಕೃಷಿ ಭೂಮಿಯನ್ನು ಆಹಾರ ಬನವನ್ನಾಗಿ ಪರಿವರ್ತಿಸಿಕೊಳ್ಳಬೇಕು ಒಂದು ಎಕರೆಯಲ್ಲಿ ಕನಿಷ್ಠ 30 ವಿವಿಧ ಪ್ರಭೇದದ 1500 ಮರಗಿಡಗಳು ಇರುವಂತೆ ನೋಡಿಕೊಂಡಲ್ಲಿ ಪ್ರಕೃತಿದತ್ತವಾಗಿ ರೋಗರುಜಿನಗಳನ್ನು ತಡೆಯುವ ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬಹುದು
ಈ ಮೂಲಕ ಜೀವಾಣುಗಳ ವೈವಿಧ್ಯತೆ ಸಂರಕ್ಷಣೆಗೊಂಡು, ಸಸ್ಯ ಪೋಷಕಾಂಶಗಳನ್ನು ಪ್ರಕೃತಿದತ್ತವಾಗಿ ಪಡೆಯಬಹುದಾಗಿದೆ, ಪ್ರಮುಖವಾಗಿ ಟ್ರೆಂಚಸ್ ವಿಧಾನದಲ್ಲಿ ಪ್ರತಿವರ್ಷವೂ ಪ್ರತಿ ಎಕರೆಯಿಂದ ಸುಮಾರು 5 ಲಕ್ಷ ಲೀಟರ್ ನೀರನ್ನು ಭೂಮಿಯಲ್ಲಿ ಇಂಗಿಸಬಹುದು, ರೈತರು ಹೆಚ್ಚಾಗಿ ಮಳೆಯ ನೀರನ್ನೇ ಬಳಸಿ ಕೃಷಿ ಚಟುವಟಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಪ್ರಸ್ತುತ ವರ್ಷ ಕಾರ್ಯಾಗಾರ ನಡೆಸುವುದರ ಜೊತೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಒಂದೊಂದು ಎಕರೆ ಪ್ರದೇಶದಲ್ಲಿ ಆಹಾರಬನದ ಮಾದರಿ ತೋಟವನ್ನು ನಿರ್ಮಿಸುವ ಗುರಿ ಹೊಂದಿದ್ದು, ಮಾದರಿ ತೋಟ ನಿರ್ಮಿಸಲು ಹಲವು ರೈತರು ಆಸಕ್ತಿ ತೋರಿಸಿದ್ದಾರೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ರೈತಮುಖಂಡರಾದ ಕೆ.ಸಿ.ಹೊರಕೇರಪ್ಪ, ಕಸವನಹಳ್ಳಿ ರಮೇಶ್, ದಸ್ತಗೀರ್ ಸಾಬ್, ಬ್ಯಾಡರಹಳ್ಳಿ ಶಿವಕುಮಾರ್, ಆರ್.ಚೇತನ್, ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page